ತೆಲಂಗಾಣ ವಿಧಾನಸಭೆಯ ಕಿರಿಯ ಶಾಸಕಿ ರಸ್ತೆ ಅಪಘಾತದಲ್ಲಿ ಸಾವು

ಭಾರತ್ ರಾಷ್ಟ್ರ ಸಮಿತಿಯ ತೆಲಂಗಾಣ ವಿಧಾನಸಭೆಯ ಕಿರಿಯ ಶಾಸಕರಲ್ಲಿ ಒಬ್ಬರಾದ ಲಾಸ್ಯ ನಂದಿತಾ ಅವರು ಪತಂಚೆರು ಹೊರವರ್ತುಲ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಶಾಸಕಿ ಲಾಸ್ಯ ನಂದಿತಾ ಮೃತಪಟ್ಟರೆ, ಚಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ.

2015ರಲ್ಲಿ ಕಂಟೋನ್ಮೆಂಟ್ ಬೋರ್ಡ್ ಚುನಾವಣೆಯಲ್ಲಿ 4ನೇ ವಾರ್ಡ್‌ನಿಂದ ಪಾಲಿಕೆ ಸದಸ್ಯೆಯಾಗಿ ಸ್ಪರ್ಧಿಸಿ ಲಾಸ್ಯ ರಾಜಕೀಯ ಪ್ರವೇಶಿಸಿದ್ದರು. ಆಕೆಯ ತಂದೆ ದಿವಂಗತ ಜಿ. ಸಾಯಣ್ಣ ಸಿಕಂದರಾಬಾದ್ ಕಂಟೋನ್ಮೆಂಟ್‌ನಿಂದ ಹಾಲಿ ಶಾಸಕರಾಗಿದ್ದರು ಆದರೆ ಅವರು ಫೆಬ್ರವರಿ 2023 ರಲ್ಲಿ ನಿಧನರಾದರು.

ತನ್ನ ತಂದೆ ನಿಧನ‌ ನಂತರ ಅವರು 2023 ರ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಬಿಜೆಪಿಯ ಗಣೇಶ್.ಎನ್ ಅವರನ್ನು 17,169 ಮತಗಳಿಂದ ಸೋಲಿಸಿ ಸ್ಥಾನವನ್ನು ಗೆದ್ದು ಶಾಸಕಿಯಾದರು.

ಇನ್ಸ್ ಪೆಕ್ಟರ್ ಪ್ರವೀಣ್ ರೆಡ್ಡಿ ಮಾತನಾಡಿ, ಅಪಘಾತದಲ್ಲಿ ಶಾಸಕಿ ಸಾವನ್ನಪ್ಪಿದ್ದು, ಚಾಲಕ ಗಾಯಗೊಂಡಿದ್ದಾರೆ, ರಸ್ತೆ ಅಪಘಾತದ ತಡೆಗೋಡೆಗೆ ಕಾರು ಡಿಕ್ಕಿ ಹೊಡೆದಿದೆ. ಘಟನಾ ಸ್ಥಳದಲ್ಲಿ ಬೇರೆ ಯಾವುದೇ ವಾಹನಗಳು ಸಿಲುಕಿಕೊಂಡಿಲ್ಲ ಎಂದಿದ್ದಾರೆ.

ಮಾರುತಿ ಎಕ್ಸ್‌ಎಲ್ 6 ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.  ಅಪಘಾತದ ವಿವರಗಳನ್ನು ಖಚಿತಪಡಿಸಿಕೊಳ್ಳಲು ಚಾಲಕನ ಚೇತರಿಕೆಗಾಗಿ ನಾವು ಇನ್ನೂ ಕಾಯುತ್ತಿದ್ದೇವೆ ಎಂದು ಪ್ರವೀಣ್ ರೆಡ್ಡಿ ಹೇಳಿದ್ದಾರೆ.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

2 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

14 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

14 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

15 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

18 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago