Categories: ಕೋಲಾರ

ತೇರಹಳ್ಳಿ ಬೆಟ್ಟದಲ್ಲಿನ ಅರ್ಚಕರ ಬದಲಾವಣೆ ಮಾಡಲು ಮತದಾನ ಬಹಿಷ್ಕಾರಕ್ಕೆ ತೀರ್ಮಾನ

ಕೋಲಾರ: ನಗರ ಹೊರವಲಯದ ಶತಶೃಂಗ ಪರ್ವತದಲ್ಲಿರುವ ತೇರಹಳ್ಳಿಯ ಶ್ರೀ ಗೌರಿ ಗಂಗಾಧೇಶ್ವರ ದೇವಸ್ಥಾನದ ಅರ್ಚಕ ಕೆ.ಎಸ್.ಮಂಜುನಾಥ್ ದೀಕ್ಷಿತರನ್ನು ಬದಲಾಯಿಸಿ ಚಂದ್ರಶೇಖರ್ ದೀಕ್ಷಿತ್ ರವರನ್ನೇ ಮುಂದುವರೆಸಬೇಕು ಇಲ್ಲದೇ ಹೋದರೆ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುವುದಾಗಿ ತೇರಹಳ್ಳಿ ಗ್ರಾಮಸ್ಥರು ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಗ್ರಾಮದ ಸತೀಶ್ ಮಾತನಾಡಿ ನಮ್ಮೂರ ಗ್ರಾಮ ದೇವಸ್ಥಾನಕ್ಕೆ ಇತಿಹಾಸ ಪ್ರಸಿದ್ಧವಾಗಿದೆ ಆದರೆ ಆರ್.ಐ ರಾಜೇಂದ್ರ ಪ್ರಸಾದ್ ಹಾಗೂ ಗ್ರಾಮ ಲೆಕ್ಕಾಧಿಕಾರಿ ಗೌತಮ್ ರವರ ಕುಮ್ಮಕ್ಕಿನಿಂದ ಅರ್ಚಕ ಮಂಜುನಾಥ್ ದೀಕ್ಷಿತ್ ದೇವಾಲಯದಲ್ಲಿ ಸಮರ್ಪಕವಾಗಿ ಪೂಜೆ ಸಲ್ಲಿಸದೆ ವಿನಾಕಾರಣ ಪ್ರತಿ ದೇವತಾ ಕಾರ್ಯಗಳಿಗೂ ಕ್ಯಾತೆ ತೆಗೆಯುವುದಲ್ಲದೆ ಉತ್ಸವ ಮೂರ್ತಿಗಳನ್ನು ಬದಲಿಸಿರುವ ಅನುಮಾನ ಮೂಡುತ್ತಾ ಇದೆ ಪ್ರತಿ ವರ್ಷದಂತೆ ನಡೆಯಬೇಕಾಗಿದ್ದ ದೇವರ ಜಾತ್ರೆ ಮತ್ತು ಬ್ರಹ್ಮ ರಥೋತ್ಸವಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದ ದೇವರ ಕೆಲಸಕ್ಕೆ ಅಡ್ಡಿ ಪಡಿಸಿರುವುದರಿಂದ ಗ್ರಾಮದಲ್ಲಿ ಶಾಂತಿ ನೆಮ್ಮದಿ ಇಲ್ಲವಾಗಿದ್ದು,ತಕ್ಷಣ ಅವರನ್ನು ಬದಲಿಸಿ ಅರ್ಚಕ ಚಂದ್ರಶೇಖರ್ ರವರನ್ನು ಮುಂದುವರೆಸುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಶಿವಕುಮಾರ್ ಮಾತನಾಡಿ ಬೆಟ್ಟದ ಶಿವಗಂಗೆ ಗ್ರಾಮದ ವೆಂಕಟರಾಮಪ್ಪ, ಬಿನ್ ಮುನಿಶಾಮಪ್ಪ ಅವರು ಸ್ಮಶಾನ ಮತ್ತು ಸರ್ಕಾರಿ ಖರಾಬು ಜಾಗವನ್ನು ಜೆಸಿಬಿಗಳಿಂದ ಜಾಗವನ್ನು ನಿವೇಶನಗಳಾಗಿ ವಿಂಗಡಿಸಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದು ಇದನ್ನು ತಡೆಯಬೇಕು ಹಾಗೂ ಸ್ಮಶಾನ ಜಾಗ ಮತ್ತು ಸರ್ಕಾರಿ ಜಾಗವನ್ನು ಉಳಿಸಬೇಕೆಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ತೇರಹಳ್ಳಿ ಗ್ರಾಮಸ್ಥರಾದ ಚೌಡಪ್ಪ, ಬೈರಪ್ಪ, ಕೃಷ್ಣಪ್ಪ, ಸೀನಪ್ಪ, ಮುನಿಯಪ್ಪ, ನಾರಾಯಣಸ್ವಾಮಿ, ಕರ್ನಾಟಕ ಮಾನವ ಹಕ್ಕುಗಳ ರಕ್ಷಣ ಸಮಿತಿ ರಾಜ್ಯಾಧ್ಯಕ್ಷ ಗಲ್ ಪೇಟೆ ಸಂತೋಷ್, ಜಿಲ್ಲಾಧ್ಯಕ್ಷ ಶ್ರೀನಾಥ್ ಮುಂತಾದವರು ಇದ್ದರು

Ramesh Babu

Journalist

Recent Posts

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

7 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

8 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

10 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

12 hours ago

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

15 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

19 hours ago