ಕೋಲಾರ: ನಗರ ಹೊರವಲಯದ ಶತಶೃಂಗ ಪರ್ವತದಲ್ಲಿರುವ ತೇರಹಳ್ಳಿಯ ಶ್ರೀ ಗೌರಿ ಗಂಗಾಧೇಶ್ವರ ದೇವಸ್ಥಾನದ ಅರ್ಚಕ ಕೆ.ಎಸ್.ಮಂಜುನಾಥ್ ದೀಕ್ಷಿತರನ್ನು ಬದಲಾಯಿಸಿ ಚಂದ್ರಶೇಖರ್ ದೀಕ್ಷಿತ್ ರವರನ್ನೇ ಮುಂದುವರೆಸಬೇಕು ಇಲ್ಲದೇ ಹೋದರೆ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುವುದಾಗಿ ತೇರಹಳ್ಳಿ ಗ್ರಾಮಸ್ಥರು ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಗ್ರಾಮದ ಸತೀಶ್ ಮಾತನಾಡಿ ನಮ್ಮೂರ ಗ್ರಾಮ ದೇವಸ್ಥಾನಕ್ಕೆ ಇತಿಹಾಸ ಪ್ರಸಿದ್ಧವಾಗಿದೆ ಆದರೆ ಆರ್.ಐ ರಾಜೇಂದ್ರ ಪ್ರಸಾದ್ ಹಾಗೂ ಗ್ರಾಮ ಲೆಕ್ಕಾಧಿಕಾರಿ ಗೌತಮ್ ರವರ ಕುಮ್ಮಕ್ಕಿನಿಂದ ಅರ್ಚಕ ಮಂಜುನಾಥ್ ದೀಕ್ಷಿತ್ ದೇವಾಲಯದಲ್ಲಿ ಸಮರ್ಪಕವಾಗಿ ಪೂಜೆ ಸಲ್ಲಿಸದೆ ವಿನಾಕಾರಣ ಪ್ರತಿ ದೇವತಾ ಕಾರ್ಯಗಳಿಗೂ ಕ್ಯಾತೆ ತೆಗೆಯುವುದಲ್ಲದೆ ಉತ್ಸವ ಮೂರ್ತಿಗಳನ್ನು ಬದಲಿಸಿರುವ ಅನುಮಾನ ಮೂಡುತ್ತಾ ಇದೆ ಪ್ರತಿ ವರ್ಷದಂತೆ ನಡೆಯಬೇಕಾಗಿದ್ದ ದೇವರ ಜಾತ್ರೆ ಮತ್ತು ಬ್ರಹ್ಮ ರಥೋತ್ಸವಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದ ದೇವರ ಕೆಲಸಕ್ಕೆ ಅಡ್ಡಿ ಪಡಿಸಿರುವುದರಿಂದ ಗ್ರಾಮದಲ್ಲಿ ಶಾಂತಿ ನೆಮ್ಮದಿ ಇಲ್ಲವಾಗಿದ್ದು,ತಕ್ಷಣ ಅವರನ್ನು ಬದಲಿಸಿ ಅರ್ಚಕ ಚಂದ್ರಶೇಖರ್ ರವರನ್ನು ಮುಂದುವರೆಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಶಿವಕುಮಾರ್ ಮಾತನಾಡಿ ಬೆಟ್ಟದ ಶಿವಗಂಗೆ ಗ್ರಾಮದ ವೆಂಕಟರಾಮಪ್ಪ, ಬಿನ್ ಮುನಿಶಾಮಪ್ಪ ಅವರು ಸ್ಮಶಾನ ಮತ್ತು ಸರ್ಕಾರಿ ಖರಾಬು ಜಾಗವನ್ನು ಜೆಸಿಬಿಗಳಿಂದ ಜಾಗವನ್ನು ನಿವೇಶನಗಳಾಗಿ ವಿಂಗಡಿಸಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದು ಇದನ್ನು ತಡೆಯಬೇಕು ಹಾಗೂ ಸ್ಮಶಾನ ಜಾಗ ಮತ್ತು ಸರ್ಕಾರಿ ಜಾಗವನ್ನು ಉಳಿಸಬೇಕೆಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ತೇರಹಳ್ಳಿ ಗ್ರಾಮಸ್ಥರಾದ ಚೌಡಪ್ಪ, ಬೈರಪ್ಪ, ಕೃಷ್ಣಪ್ಪ, ಸೀನಪ್ಪ, ಮುನಿಯಪ್ಪ, ನಾರಾಯಣಸ್ವಾಮಿ, ಕರ್ನಾಟಕ ಮಾನವ ಹಕ್ಕುಗಳ ರಕ್ಷಣ ಸಮಿತಿ ರಾಜ್ಯಾಧ್ಯಕ್ಷ ಗಲ್ ಪೇಟೆ ಸಂತೋಷ್, ಜಿಲ್ಲಾಧ್ಯಕ್ಷ ಶ್ರೀನಾಥ್ ಮುಂತಾದವರು ಇದ್ದರು
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…