ಕೋಲಾರ: ನಗರ ಹೊರವಲಯದ ಶತಶೃಂಗ ಪರ್ವತದಲ್ಲಿರುವ ತೇರಹಳ್ಳಿಯ ಶ್ರೀ ಗೌರಿ ಗಂಗಾಧೇಶ್ವರ ದೇವಸ್ಥಾನದ ಅರ್ಚಕ ಕೆ.ಎಸ್.ಮಂಜುನಾಥ್ ದೀಕ್ಷಿತರನ್ನು ಬದಲಾಯಿಸಿ ಚಂದ್ರಶೇಖರ್ ದೀಕ್ಷಿತ್ ರವರನ್ನೇ ಮುಂದುವರೆಸಬೇಕು ಇಲ್ಲದೇ ಹೋದರೆ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುವುದಾಗಿ ತೇರಹಳ್ಳಿ ಗ್ರಾಮಸ್ಥರು ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಗ್ರಾಮದ ಸತೀಶ್ ಮಾತನಾಡಿ ನಮ್ಮೂರ ಗ್ರಾಮ ದೇವಸ್ಥಾನಕ್ಕೆ ಇತಿಹಾಸ ಪ್ರಸಿದ್ಧವಾಗಿದೆ ಆದರೆ ಆರ್.ಐ ರಾಜೇಂದ್ರ ಪ್ರಸಾದ್ ಹಾಗೂ ಗ್ರಾಮ ಲೆಕ್ಕಾಧಿಕಾರಿ ಗೌತಮ್ ರವರ ಕುಮ್ಮಕ್ಕಿನಿಂದ ಅರ್ಚಕ ಮಂಜುನಾಥ್ ದೀಕ್ಷಿತ್ ದೇವಾಲಯದಲ್ಲಿ ಸಮರ್ಪಕವಾಗಿ ಪೂಜೆ ಸಲ್ಲಿಸದೆ ವಿನಾಕಾರಣ ಪ್ರತಿ ದೇವತಾ ಕಾರ್ಯಗಳಿಗೂ ಕ್ಯಾತೆ ತೆಗೆಯುವುದಲ್ಲದೆ ಉತ್ಸವ ಮೂರ್ತಿಗಳನ್ನು ಬದಲಿಸಿರುವ ಅನುಮಾನ ಮೂಡುತ್ತಾ ಇದೆ ಪ್ರತಿ ವರ್ಷದಂತೆ ನಡೆಯಬೇಕಾಗಿದ್ದ ದೇವರ ಜಾತ್ರೆ ಮತ್ತು ಬ್ರಹ್ಮ ರಥೋತ್ಸವಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದ ದೇವರ ಕೆಲಸಕ್ಕೆ ಅಡ್ಡಿ ಪಡಿಸಿರುವುದರಿಂದ ಗ್ರಾಮದಲ್ಲಿ ಶಾಂತಿ ನೆಮ್ಮದಿ ಇಲ್ಲವಾಗಿದ್ದು,ತಕ್ಷಣ ಅವರನ್ನು ಬದಲಿಸಿ ಅರ್ಚಕ ಚಂದ್ರಶೇಖರ್ ರವರನ್ನು ಮುಂದುವರೆಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಗ್ರಾಮದ ಶಿವಕುಮಾರ್ ಮಾತನಾಡಿ ಬೆಟ್ಟದ ಶಿವಗಂಗೆ ಗ್ರಾಮದ ವೆಂಕಟರಾಮಪ್ಪ, ಬಿನ್ ಮುನಿಶಾಮಪ್ಪ ಅವರು ಸ್ಮಶಾನ ಮತ್ತು ಸರ್ಕಾರಿ ಖರಾಬು ಜಾಗವನ್ನು ಜೆಸಿಬಿಗಳಿಂದ ಜಾಗವನ್ನು ನಿವೇಶನಗಳಾಗಿ ವಿಂಗಡಿಸಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದು ಇದನ್ನು ತಡೆಯಬೇಕು ಹಾಗೂ ಸ್ಮಶಾನ ಜಾಗ ಮತ್ತು ಸರ್ಕಾರಿ ಜಾಗವನ್ನು ಉಳಿಸಬೇಕೆಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ತೇರಹಳ್ಳಿ ಗ್ರಾಮಸ್ಥರಾದ ಚೌಡಪ್ಪ, ಬೈರಪ್ಪ, ಕೃಷ್ಣಪ್ಪ, ಸೀನಪ್ಪ, ಮುನಿಯಪ್ಪ, ನಾರಾಯಣಸ್ವಾಮಿ, ಕರ್ನಾಟಕ ಮಾನವ ಹಕ್ಕುಗಳ ರಕ್ಷಣ ಸಮಿತಿ ರಾಜ್ಯಾಧ್ಯಕ್ಷ ಗಲ್ ಪೇಟೆ ಸಂತೋಷ್, ಜಿಲ್ಲಾಧ್ಯಕ್ಷ ಶ್ರೀನಾಥ್ ಮುಂತಾದವರು ಇದ್ದರು
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…
ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…