Categories: ಕೋಲಾರ

ತೇರಹಳ್ಳಿ ಬೆಟ್ಟದಲ್ಲಿನ ಅರ್ಚಕರ ಬದಲಾವಣೆ ಮಾಡಲು ಮತದಾನ ಬಹಿಷ್ಕಾರಕ್ಕೆ ತೀರ್ಮಾನ

ಕೋಲಾರ: ನಗರ ಹೊರವಲಯದ ಶತಶೃಂಗ ಪರ್ವತದಲ್ಲಿರುವ ತೇರಹಳ್ಳಿಯ ಶ್ರೀ ಗೌರಿ ಗಂಗಾಧೇಶ್ವರ ದೇವಸ್ಥಾನದ ಅರ್ಚಕ ಕೆ.ಎಸ್.ಮಂಜುನಾಥ್ ದೀಕ್ಷಿತರನ್ನು ಬದಲಾಯಿಸಿ ಚಂದ್ರಶೇಖರ್ ದೀಕ್ಷಿತ್ ರವರನ್ನೇ ಮುಂದುವರೆಸಬೇಕು ಇಲ್ಲದೇ ಹೋದರೆ ಲೋಕಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕಾರ ಮಾಡುವುದಾಗಿ ತೇರಹಳ್ಳಿ ಗ್ರಾಮಸ್ಥರು ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಗ್ರಾಮದ ಸತೀಶ್ ಮಾತನಾಡಿ ನಮ್ಮೂರ ಗ್ರಾಮ ದೇವಸ್ಥಾನಕ್ಕೆ ಇತಿಹಾಸ ಪ್ರಸಿದ್ಧವಾಗಿದೆ ಆದರೆ ಆರ್.ಐ ರಾಜೇಂದ್ರ ಪ್ರಸಾದ್ ಹಾಗೂ ಗ್ರಾಮ ಲೆಕ್ಕಾಧಿಕಾರಿ ಗೌತಮ್ ರವರ ಕುಮ್ಮಕ್ಕಿನಿಂದ ಅರ್ಚಕ ಮಂಜುನಾಥ್ ದೀಕ್ಷಿತ್ ದೇವಾಲಯದಲ್ಲಿ ಸಮರ್ಪಕವಾಗಿ ಪೂಜೆ ಸಲ್ಲಿಸದೆ ವಿನಾಕಾರಣ ಪ್ರತಿ ದೇವತಾ ಕಾರ್ಯಗಳಿಗೂ ಕ್ಯಾತೆ ತೆಗೆಯುವುದಲ್ಲದೆ ಉತ್ಸವ ಮೂರ್ತಿಗಳನ್ನು ಬದಲಿಸಿರುವ ಅನುಮಾನ ಮೂಡುತ್ತಾ ಇದೆ ಪ್ರತಿ ವರ್ಷದಂತೆ ನಡೆಯಬೇಕಾಗಿದ್ದ ದೇವರ ಜಾತ್ರೆ ಮತ್ತು ಬ್ರಹ್ಮ ರಥೋತ್ಸವಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದ ದೇವರ ಕೆಲಸಕ್ಕೆ ಅಡ್ಡಿ ಪಡಿಸಿರುವುದರಿಂದ ಗ್ರಾಮದಲ್ಲಿ ಶಾಂತಿ ನೆಮ್ಮದಿ ಇಲ್ಲವಾಗಿದ್ದು,ತಕ್ಷಣ ಅವರನ್ನು ಬದಲಿಸಿ ಅರ್ಚಕ ಚಂದ್ರಶೇಖರ್ ರವರನ್ನು ಮುಂದುವರೆಸುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗ್ರಾಮದ ಶಿವಕುಮಾರ್ ಮಾತನಾಡಿ ಬೆಟ್ಟದ ಶಿವಗಂಗೆ ಗ್ರಾಮದ ವೆಂಕಟರಾಮಪ್ಪ, ಬಿನ್ ಮುನಿಶಾಮಪ್ಪ ಅವರು ಸ್ಮಶಾನ ಮತ್ತು ಸರ್ಕಾರಿ ಖರಾಬು ಜಾಗವನ್ನು ಜೆಸಿಬಿಗಳಿಂದ ಜಾಗವನ್ನು ನಿವೇಶನಗಳಾಗಿ ವಿಂಗಡಿಸಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದು ಇದನ್ನು ತಡೆಯಬೇಕು ಹಾಗೂ ಸ್ಮಶಾನ ಜಾಗ ಮತ್ತು ಸರ್ಕಾರಿ ಜಾಗವನ್ನು ಉಳಿಸಬೇಕೆಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ತೇರಹಳ್ಳಿ ಗ್ರಾಮಸ್ಥರಾದ ಚೌಡಪ್ಪ, ಬೈರಪ್ಪ, ಕೃಷ್ಣಪ್ಪ, ಸೀನಪ್ಪ, ಮುನಿಯಪ್ಪ, ನಾರಾಯಣಸ್ವಾಮಿ, ಕರ್ನಾಟಕ ಮಾನವ ಹಕ್ಕುಗಳ ರಕ್ಷಣ ಸಮಿತಿ ರಾಜ್ಯಾಧ್ಯಕ್ಷ ಗಲ್ ಪೇಟೆ ಸಂತೋಷ್, ಜಿಲ್ಲಾಧ್ಯಕ್ಷ ಶ್ರೀನಾಥ್ ಮುಂತಾದವರು ಇದ್ದರು

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

15 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

2 days ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

4 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago