ತೊಂಡೆಕಾಯಿ ತೋಟದಲ್ಲಿ ಗಾಂಜಾ ಬೆಳೆದಿದ್ದ ಆಸಾಮಿ: ಗಾಂಜಾ ಸೊಪ್ಪು ಸಮೇತ ಆರೋಪಿ ಬಂಧನ

ತೊಂಡೆಕಾಯಿ ತೋಟದಲ್ಲಿ ಗಾಂಜಾ ಬೆಳೆದಿದ್ದ ಆಸಾಮಿಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಿಹಾರ ಮೂಲದ ರಾಮ್ ದ್ಯಾಲ್ ಪಾಸ್ವಾನ್ (36), ಬಂಧಿತ ಆರೋಪಿ.

ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಬಿಹಾರದಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಚೌಗೊಂಡನಹಳ್ಳಿಯ ಶಾಂತಕುಮಾರ್ ಎಂಬುವವರ ತೋಟದಲ್ಲಿ ಕೂಲಿ ಕೆಲಸಕ್ಕೆಂದು ರಾಮ್ ದ್ಯಾಲ್ ಪಾಸ್ವಾನ್ ಬಂದಿದ್ದ.

ಈ ವೇಳೆ ತೋಟದಲ್ಲಿ ತೊಂಡೆಕಾಯಿ ಬೆಳೆ ಜೊತೆಗೆ ಗಾಂಜಾ ಸೊಪ್ಪುನ್ನು ಬೆಳೆಯಲು ಪ್ರಾರಂಭ ಮಾಡಿದ್ದಾನೆ. ಈ ಕುರಿತು ಖಚಿತ ಮಾಹಿತಿ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ, ಎನ್ ಡಿಪಿಎಸ್ ಆಕ್ಟ್ 1985ರ ಅಡಿಯಲ್ಲಿ ಸುಮಾರು 30 ಸಾವಿರ ಮೌಲ್ಯದ 8 ಕೆ.ಜಿ ಗಾಂಜಾ ಸೊಪ್ಪು ಸಮೇತ ಆರೋಪಿಯನ್ನು ಬಂಧನ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

Ramesh Babu

Journalist

Recent Posts

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

10 hours ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

14 hours ago

ಶ್ರಾವಣದ ಹಬ್ಬಗಳಿಗೆ ಮುನ್ನವೇ ಹೂವಿನ ದರದ ಬಿಸಿ! ಇಳುವರಿ ಶೇ.30–40ರಷ್ಟು ಕುಸಿತ: ಹವಾಮಾನ ವೈಪರೀತ್ಯದ ಪರಿಣಾಮ: ಸಾಲುಸಾಲು ಹಬ್ಬಗಳಿಂದ ಬೇಡಿಕೆ ಹೆಚ್ಚಳ

  ಬೆಂಗಳೂರು: ಹಬ್ಬಗಳ ಸೀಸನ್‌ ಆರಂಭಕ್ಕೂ ಮುನ್ನವೇ ಹೂವಿನ ದರ ಏರಿಕೆಯ ಬಿಸಿ ಗ್ರಾಹಕರಿಗೆ ತಟ್ಟಲಾರಂಭಿಸಿದೆ. ರಾಜ್ಯದಲ್ಲಿ ಅನಿರೀಕ್ಷಿತ ಬರ,…

14 hours ago

ಕೂಗೇನಹಳ್ಳಿ ಗೇಟ್ ಬಳಿ ಟೊಮೆಟೊ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ದೊಡ್ಡಬಳ್ಳಾಪುರ: ಟೊಮೆಟೊ ತುಂಬಿಕೊಂಡು ಸಾಗುತ್ತಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ದಾಬಸ್‌ಪೇಟೆ–ದೊಡ್ಡಬಳ್ಳಾಪುರ ರಾಷ್ಟ್ರೀಯ ಹೆದ್ದಾರಿಯ ಕೂಗೇನಹಳ್ಳಿ ಗೇಟ್ ಸಮೀಪ ಗುರುವಾರ ಬೆಳಗ್ಗೆ…

16 hours ago

ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವ ಹುಡುಕುತ್ತಾ ಹೊರಟಾಗ……

ಸ್ವಾತಂತ್ರ್ಯ........ ಸ್ವಾತಂತ್ರ್ಯ ಎಂಬ ಅರ್ಥದ ಮೂಲ ಭಾವವನ್ನು ಹುಡುಕುತ್ತಾ ಹೊರಟಾಗ...... ಸ್ವಾತಂತ್ರ್ಯ ಎಂಬುದು... ಮಾನಸಿಕ ಸ್ಥಿತಿಯೇ, ದೈಹಿಕ ವ್ಯಾಪ್ತಿಯೇ, ಇವೆರಡರ…

2 days ago

ಕುವೆಂಪು ಥೀಮ್ ಪಾರ್ಕ್‌ ಲೋಕಾರ್ಪಣೆಗೊಳಿಸಿದ ಸಚಿವರಾದ ಕೆ.ಜೆ.ಜಾರ್ಜ್, ಕೃಷ್ಣಬೈರೇಗೌಡ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಡಿ ನಿರ್ಮಿಸಿರುವ 'ಕುವೆಂಪು ಥೀಮ್ ಪಾರ್ಕ್'ಅನ್ನು…

2 days ago