ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು- ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ ಅಂತರ್ಜಲ, ಮಣ್ಣು, ಗಾಳಿ ಕಲುಷಿತಗೊಳ್ಳುತ್ತಿದೆ. ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೊಡ್ಡಬಳ್ಳಾಪುರ ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದಂತೆ ಎನ್.ಜಿ.ಟಿ ಆದೇಶ ಪಾಲನೆ, ಅಪೇರಲ್ ಪಾರ್ಕ್ ಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಕರೆಯಲಾಗಿದ್ದ ಜಂಟಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ದೊಡ್ಡಬಳ್ಳಾಪುರದ ಕೆರೆಗಳಿಗೆ ತ್ಯಾಜ್ಯ ನೀರು ಬಿಡುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ. ಕಾರ್ಖಾನೆಗಳಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ ಇದ್ದಲ್ಲಿ ಯಾವುದೇ ತ್ಯಾಜ್ಯ ಹೊರಗಡೆ ಬಿಡುವ ಅವಶ್ಯಕತೆ ಇಲ್ಲ. ಹಲವು ಕಾರ್ಖಾನೆಗಳು ಇದನ್ನು ಪಾಲನೆ ಮಾಡುತ್ತಿಲ್ಲ.

ಅಪೇರಲ್ ಪಾರ್ಕ್ ನಲ್ಲಿ ಸುಮಾರು 2 ರಿಂದ 3 ಲಕ್ಷ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅಲ್ಲಿನ ಶೌಚಾಲಯ, ಕೊಳಚೆ ನೀರು ನೇರವಾಗಿ ಕೆರೆಗಳಿಗೆ, ಕಾಲುವೆಗಳಿಗೆ ಸೇರುತ್ತಿವೆ. ಕಾರ್ಖಾನೆಗಳಲ್ಲಿ ಸರಿಯಾಗಿ ಘನತ್ಯಾಜ್ಯ ನಿರ್ವಹಣೆ ಆಗುತ್ತಿಲ್ಲ ಎಂದರು.

ಗಾರ್ಮೆಂಟ್ಸ್ ಹಾಗೂ ಸಿದ್ದ ಉಡುಪು ತಯಾರಿಕಾ ಘಟಕಗಳಲ್ಲಿ ಕೆಮಿಕಲ್ ಮಿಶ್ರಿತ ಬಣ್ಣದ ನೀರು ಬಳಸಿ ಬಟ್ಟೆ ಸಿದ್ದ ಪಡಿಸುವವರು. ಬಟ್ಟೆ ಸಿದ್ಧವಾದ ನಂತರ ತ್ಯಾಜ್ಯ ನೀರನ್ನು ಹೊರಗೆ ಬಿಡುತ್ತಿದ್ದಾರೆ. ಆ ತ್ಯಾಜ್ಯ ನೀರನ್ನು ಕೂಡ ಸರಿಯಾದ ಕ್ರಮದಲ್ಲಿ ವಿಲೇವಾರಿ ಮಾಡಬೇಕು. ಇದರ ಜೊತೆಗೆ ಒಳಚರಂಡಿ ವ್ಯವಸ್ಥೆ ಆಗಬೇಕಿದೆ ಎಂದರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಮಾತನಾಡಿ ಕಾರ್ಖಾನೆ, ಕೈಗಾರಿಕೆಗಳಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಿ ಅಲ್ಲಿಯೇ ವಿಲೇವಾರಿ ಮಾಡಿಕೊಳ್ಳಬೇಕು ಎಂದರು. ಯಾವುದೇ ಕಾರಣಕ್ಕೂ ಹೊರಗೆ ಬರಬಾರದು.

ಕಾರ್ಖಾನೆಗಳ ತ್ಯಾಜ್ಯದಿಂದ ದೊಡ್ಡಬಳ್ಳಾಪುರದ ನಾಗರಕೆರೆ, ಚಿಕ್ಕ ತುಮಕೂರು ಕೆರೆ, ದೊಡ್ಡ ತುಮಕೂರು, ಮಜರಾ ಹೊಸಹಳ್ಳಿ ಕೆರೆಗಳು ಕಲುಷಿತಗೊಂಡು ಸುತ್ತಮುತ್ತಲಿನ ಹಳ್ಳಿಗಳಿಗೆ ಸಾಕಷ್ಟು ತೊಂದರೆಯಾಗಿದೆ. ಕುಡಿಯುವ ನೀರಿಗೆ ಯೋಗ್ಯವಿಲ್ಲ, ಕೊಳವೆ ಬಾವಿಗಳಲ್ಲಿ ನೀರು ಕಲುಷಿತಗೊಂಡಿದೆ ಎಂದು ಸುತ್ತಮುತ್ತಲಿನ ರೈತರು, ಪ್ರಗತಿ ಪರ ಚಿಂತಕರು ಅನೇಕ ಬಾರಿ ತಿಳಿಸಿದ್ದಾರೆ. ಈ ರೀತಿಯ ವಾತಾವರಣ ಬೇರೆ ಕೆರೆಗಳಿಗೂ ಆಗಬಾರದು. ಶಾಶ್ವತವಾಗಿ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ.

ಕೊಳಚೆ ನೀರು ಸಂಸ್ಕರಣಾ ಘಟಕ, ಘನತ್ಯಾಜ್ಯ ನಿರ್ವಹಣೆ, ಸಾಮಾನ್ಯ ಸಂಸ್ಕರಣಾ ಘಟಕ, ಪರಿಸರ ಸ್ಥಾವರಗಳನ್ನು ಅಳವಡಿಸಿಕೊಳ್ಳದ ಕಾರ್ಖಾನೆಗಳ ಮೇಲೆಯು ಕೂಡ ಕ್ರಮ ಜರುಗಿಸಲಾಗುವುದು ಎಂದರು.

ಕಾರ್ಖಾನೆ, ಕೈಗಾರಿಕೆಗಳು ಕೂಡ ಸಾಕಷ್ಟು ಉದ್ಯೋಗ ನೀಡಿ ಹಲವರಿಗೆ ಜೀವನೋಪಾಯ ಕಲ್ಪಿಸಿದೆ. ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್ಆರ್)ಯ ಮೂಲಕ ಸಾಮಾಜಿಕ ಕೆಲಸಗಳನ್ನು ಮಾಡುತ್ತಾ ಬಂದಿವೆ. ಹಾಗಾಗಿ ಕೈಗಾರಿಕೆಗಳಿಂದ ಯಾವುದೇ ತಪ್ಪಾಗಬಾರದು ಎಂದರು.

ಕಾರ್ಖಾನೆಗಳಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ಅನಧಿಕೃತವಾಗಿ, ಅವೈಜ್ಞಾನಿಕವಾಗಿ ಎಲ್ಲೆಂದರಲ್ಲಿ ಸುರಿದರೆ ಅಂತಹ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ನರೇಂದ್ರ ಬಾಬು, ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ರಮೇಶ್, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ರೈತ ಸಂಘದ ಕಾರ್ಯಕರ್ತರು ಹಾಗೂ ಪರಿಸರ ಹೋರಾಟಗಾರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮಾತೃ ಹೃದಯಿ ಕರ್ನಾಟಕ ಸರ್ಕಾರದಿಂದ “ಕೂಸಿನ ಮನೆ” ಯೋಜನೆ

ಕೂಸು ಇದ್ದ ಮನಿಗ ಬೀಸಣಿಕೆ ಯಾತಕ ? ಕೂಸು ಕಂದಯ್ಯ ಒಳ ಹೊರಗ ಆಡಿದರ ಬೀಸಣಿಕೆ ಗಾಳಿ ಸುಳಿದಾವ. ನಮ್ಮ…

6 hours ago

ದೊಡ್ಡಬಳ್ಳಾಪುರ ತಾಲೂಕಿನಿಂದ ಜಿಲ್ಲಾಸ್ಪತ್ರೆ ಕೈತಪ್ಪಲ್ಲ: ಕೈತಪ್ಪಲು ನಾನು ಬಿಡೋದಿಲ್ಲ- ತಾಲೂಕಿನಲ್ಲಿ ಜಿಲ್ಲಾಸ್ಪತ್ರೆ  ಕರ್ತವ್ಯ ನಿರ್ವಹಿಸುವಂತೆ ಮಾಡಿಯೇ ತೀರುತ್ತೇನೆ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…

12 hours ago

ಆಶ್ರಯ ಮನೆಗಳು ಬಲಾಢ್ಯರ ಪಾಲು ಆರೋಪ:

ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ…

14 hours ago

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ…

ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…

1 day ago

ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…

1 day ago

ಸ್ನೇಹಿತರ ದಿನದ ಅಂಗವಾಗಿ ನಂದಿಬೆಟ್ಟಕ್ಕೆ ತೆರಳಿದ್ದ ಸ್ನೇಹಿತರು: ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತ: ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ

ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…

2 days ago