ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು- ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ ಅಂತರ್ಜಲ, ಮಣ್ಣು, ಗಾಳಿ ಕಲುಷಿತಗೊಳ್ಳುತ್ತಿದೆ. ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೊಡ್ಡಬಳ್ಳಾಪುರ ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದಂತೆ ಎನ್.ಜಿ.ಟಿ ಆದೇಶ ಪಾಲನೆ, ಅಪೇರಲ್ ಪಾರ್ಕ್ ಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಕರೆಯಲಾಗಿದ್ದ ಜಂಟಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ದೊಡ್ಡಬಳ್ಳಾಪುರದ ಕೆರೆಗಳಿಗೆ ತ್ಯಾಜ್ಯ ನೀರು ಬಿಡುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ. ಕಾರ್ಖಾನೆಗಳಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ ಇದ್ದಲ್ಲಿ ಯಾವುದೇ ತ್ಯಾಜ್ಯ ಹೊರಗಡೆ ಬಿಡುವ ಅವಶ್ಯಕತೆ ಇಲ್ಲ. ಹಲವು ಕಾರ್ಖಾನೆಗಳು ಇದನ್ನು ಪಾಲನೆ ಮಾಡುತ್ತಿಲ್ಲ.

ಅಪೇರಲ್ ಪಾರ್ಕ್ ನಲ್ಲಿ ಸುಮಾರು 2 ರಿಂದ 3 ಲಕ್ಷ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅಲ್ಲಿನ ಶೌಚಾಲಯ, ಕೊಳಚೆ ನೀರು ನೇರವಾಗಿ ಕೆರೆಗಳಿಗೆ, ಕಾಲುವೆಗಳಿಗೆ ಸೇರುತ್ತಿವೆ. ಕಾರ್ಖಾನೆಗಳಲ್ಲಿ ಸರಿಯಾಗಿ ಘನತ್ಯಾಜ್ಯ ನಿರ್ವಹಣೆ ಆಗುತ್ತಿಲ್ಲ ಎಂದರು.

ಗಾರ್ಮೆಂಟ್ಸ್ ಹಾಗೂ ಸಿದ್ದ ಉಡುಪು ತಯಾರಿಕಾ ಘಟಕಗಳಲ್ಲಿ ಕೆಮಿಕಲ್ ಮಿಶ್ರಿತ ಬಣ್ಣದ ನೀರು ಬಳಸಿ ಬಟ್ಟೆ ಸಿದ್ದ ಪಡಿಸುವವರು. ಬಟ್ಟೆ ಸಿದ್ಧವಾದ ನಂತರ ತ್ಯಾಜ್ಯ ನೀರನ್ನು ಹೊರಗೆ ಬಿಡುತ್ತಿದ್ದಾರೆ. ಆ ತ್ಯಾಜ್ಯ ನೀರನ್ನು ಕೂಡ ಸರಿಯಾದ ಕ್ರಮದಲ್ಲಿ ವಿಲೇವಾರಿ ಮಾಡಬೇಕು. ಇದರ ಜೊತೆಗೆ ಒಳಚರಂಡಿ ವ್ಯವಸ್ಥೆ ಆಗಬೇಕಿದೆ ಎಂದರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಮಾತನಾಡಿ ಕಾರ್ಖಾನೆ, ಕೈಗಾರಿಕೆಗಳಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಿ ಅಲ್ಲಿಯೇ ವಿಲೇವಾರಿ ಮಾಡಿಕೊಳ್ಳಬೇಕು ಎಂದರು. ಯಾವುದೇ ಕಾರಣಕ್ಕೂ ಹೊರಗೆ ಬರಬಾರದು.

ಕಾರ್ಖಾನೆಗಳ ತ್ಯಾಜ್ಯದಿಂದ ದೊಡ್ಡಬಳ್ಳಾಪುರದ ನಾಗರಕೆರೆ, ಚಿಕ್ಕ ತುಮಕೂರು ಕೆರೆ, ದೊಡ್ಡ ತುಮಕೂರು, ಮಜರಾ ಹೊಸಹಳ್ಳಿ ಕೆರೆಗಳು ಕಲುಷಿತಗೊಂಡು ಸುತ್ತಮುತ್ತಲಿನ ಹಳ್ಳಿಗಳಿಗೆ ಸಾಕಷ್ಟು ತೊಂದರೆಯಾಗಿದೆ. ಕುಡಿಯುವ ನೀರಿಗೆ ಯೋಗ್ಯವಿಲ್ಲ, ಕೊಳವೆ ಬಾವಿಗಳಲ್ಲಿ ನೀರು ಕಲುಷಿತಗೊಂಡಿದೆ ಎಂದು ಸುತ್ತಮುತ್ತಲಿನ ರೈತರು, ಪ್ರಗತಿ ಪರ ಚಿಂತಕರು ಅನೇಕ ಬಾರಿ ತಿಳಿಸಿದ್ದಾರೆ. ಈ ರೀತಿಯ ವಾತಾವರಣ ಬೇರೆ ಕೆರೆಗಳಿಗೂ ಆಗಬಾರದು. ಶಾಶ್ವತವಾಗಿ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ.

ಕೊಳಚೆ ನೀರು ಸಂಸ್ಕರಣಾ ಘಟಕ, ಘನತ್ಯಾಜ್ಯ ನಿರ್ವಹಣೆ, ಸಾಮಾನ್ಯ ಸಂಸ್ಕರಣಾ ಘಟಕ, ಪರಿಸರ ಸ್ಥಾವರಗಳನ್ನು ಅಳವಡಿಸಿಕೊಳ್ಳದ ಕಾರ್ಖಾನೆಗಳ ಮೇಲೆಯು ಕೂಡ ಕ್ರಮ ಜರುಗಿಸಲಾಗುವುದು ಎಂದರು.

ಕಾರ್ಖಾನೆ, ಕೈಗಾರಿಕೆಗಳು ಕೂಡ ಸಾಕಷ್ಟು ಉದ್ಯೋಗ ನೀಡಿ ಹಲವರಿಗೆ ಜೀವನೋಪಾಯ ಕಲ್ಪಿಸಿದೆ. ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್ಆರ್)ಯ ಮೂಲಕ ಸಾಮಾಜಿಕ ಕೆಲಸಗಳನ್ನು ಮಾಡುತ್ತಾ ಬಂದಿವೆ. ಹಾಗಾಗಿ ಕೈಗಾರಿಕೆಗಳಿಂದ ಯಾವುದೇ ತಪ್ಪಾಗಬಾರದು ಎಂದರು.

ಕಾರ್ಖಾನೆಗಳಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ಅನಧಿಕೃತವಾಗಿ, ಅವೈಜ್ಞಾನಿಕವಾಗಿ ಎಲ್ಲೆಂದರಲ್ಲಿ ಸುರಿದರೆ ಅಂತಹ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ನರೇಂದ್ರ ಬಾಬು, ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ರಮೇಶ್, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ರೈತ ಸಂಘದ ಕಾರ್ಯಕರ್ತರು ಹಾಗೂ ಪರಿಸರ ಹೋರಾಟಗಾರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

2 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

7 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

8 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

9 hours ago

ಫೆ.26ರಂದು ಪ್ರಸಿದ್ದ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ

ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…

19 hours ago

Accident Update: ನೆಲಮಂಗಲದ ಜಿಂದಾಲ್‌ ಸಮೀಪ ಭೀಕರ ಅಪಘಾತ: ಅಪಘಾತದಲ್ಲಿ ದೊಡ್ಡಬಳ್ಳಾಪುರದ ಐವರ ಸಾವು ಕೇಸ್: ಮೃತರಲ್ಲಿ ಮೂವರ ಕಣ್ಣುಗಳ ದಾನ

ನೆಲಮಂಗಲದ ಜಿಂದಾಲ್‌ ಸಮೀಪ ನಡೆದ ಭೀಕರ ಅಪಘಾತದಲ್ಲಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರು ದುರ್ಮರಣಕ್ಕೀಡಾಗಿದ್ದಾರೆ. ಕಳೆದ ರಾತ್ರಿ 11 ಗಂಟೆಯ ಸುಮಾರಿಗೆ…

20 hours ago