ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು- ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ ಅಂತರ್ಜಲ, ಮಣ್ಣು, ಗಾಳಿ ಕಲುಷಿತಗೊಳ್ಳುತ್ತಿದೆ. ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೊಡ್ಡಬಳ್ಳಾಪುರ ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದಂತೆ ಎನ್.ಜಿ.ಟಿ ಆದೇಶ ಪಾಲನೆ, ಅಪೇರಲ್ ಪಾರ್ಕ್ ಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಕರೆಯಲಾಗಿದ್ದ ಜಂಟಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ದೊಡ್ಡಬಳ್ಳಾಪುರದ ಕೆರೆಗಳಿಗೆ ತ್ಯಾಜ್ಯ ನೀರು ಬಿಡುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ. ಕಾರ್ಖಾನೆಗಳಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ ಇದ್ದಲ್ಲಿ ಯಾವುದೇ ತ್ಯಾಜ್ಯ ಹೊರಗಡೆ ಬಿಡುವ ಅವಶ್ಯಕತೆ ಇಲ್ಲ. ಹಲವು ಕಾರ್ಖಾನೆಗಳು ಇದನ್ನು ಪಾಲನೆ ಮಾಡುತ್ತಿಲ್ಲ.

ಅಪೇರಲ್ ಪಾರ್ಕ್ ನಲ್ಲಿ ಸುಮಾರು 2 ರಿಂದ 3 ಲಕ್ಷ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅಲ್ಲಿನ ಶೌಚಾಲಯ, ಕೊಳಚೆ ನೀರು ನೇರವಾಗಿ ಕೆರೆಗಳಿಗೆ, ಕಾಲುವೆಗಳಿಗೆ ಸೇರುತ್ತಿವೆ. ಕಾರ್ಖಾನೆಗಳಲ್ಲಿ ಸರಿಯಾಗಿ ಘನತ್ಯಾಜ್ಯ ನಿರ್ವಹಣೆ ಆಗುತ್ತಿಲ್ಲ ಎಂದರು.

ಗಾರ್ಮೆಂಟ್ಸ್ ಹಾಗೂ ಸಿದ್ದ ಉಡುಪು ತಯಾರಿಕಾ ಘಟಕಗಳಲ್ಲಿ ಕೆಮಿಕಲ್ ಮಿಶ್ರಿತ ಬಣ್ಣದ ನೀರು ಬಳಸಿ ಬಟ್ಟೆ ಸಿದ್ದ ಪಡಿಸುವವರು. ಬಟ್ಟೆ ಸಿದ್ಧವಾದ ನಂತರ ತ್ಯಾಜ್ಯ ನೀರನ್ನು ಹೊರಗೆ ಬಿಡುತ್ತಿದ್ದಾರೆ. ಆ ತ್ಯಾಜ್ಯ ನೀರನ್ನು ಕೂಡ ಸರಿಯಾದ ಕ್ರಮದಲ್ಲಿ ವಿಲೇವಾರಿ ಮಾಡಬೇಕು. ಇದರ ಜೊತೆಗೆ ಒಳಚರಂಡಿ ವ್ಯವಸ್ಥೆ ಆಗಬೇಕಿದೆ ಎಂದರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಮಾತನಾಡಿ ಕಾರ್ಖಾನೆ, ಕೈಗಾರಿಕೆಗಳಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಿ ಅಲ್ಲಿಯೇ ವಿಲೇವಾರಿ ಮಾಡಿಕೊಳ್ಳಬೇಕು ಎಂದರು. ಯಾವುದೇ ಕಾರಣಕ್ಕೂ ಹೊರಗೆ ಬರಬಾರದು.

ಕಾರ್ಖಾನೆಗಳ ತ್ಯಾಜ್ಯದಿಂದ ದೊಡ್ಡಬಳ್ಳಾಪುರದ ನಾಗರಕೆರೆ, ಚಿಕ್ಕ ತುಮಕೂರು ಕೆರೆ, ದೊಡ್ಡ ತುಮಕೂರು, ಮಜರಾ ಹೊಸಹಳ್ಳಿ ಕೆರೆಗಳು ಕಲುಷಿತಗೊಂಡು ಸುತ್ತಮುತ್ತಲಿನ ಹಳ್ಳಿಗಳಿಗೆ ಸಾಕಷ್ಟು ತೊಂದರೆಯಾಗಿದೆ. ಕುಡಿಯುವ ನೀರಿಗೆ ಯೋಗ್ಯವಿಲ್ಲ, ಕೊಳವೆ ಬಾವಿಗಳಲ್ಲಿ ನೀರು ಕಲುಷಿತಗೊಂಡಿದೆ ಎಂದು ಸುತ್ತಮುತ್ತಲಿನ ರೈತರು, ಪ್ರಗತಿ ಪರ ಚಿಂತಕರು ಅನೇಕ ಬಾರಿ ತಿಳಿಸಿದ್ದಾರೆ. ಈ ರೀತಿಯ ವಾತಾವರಣ ಬೇರೆ ಕೆರೆಗಳಿಗೂ ಆಗಬಾರದು. ಶಾಶ್ವತವಾಗಿ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ.

ಕೊಳಚೆ ನೀರು ಸಂಸ್ಕರಣಾ ಘಟಕ, ಘನತ್ಯಾಜ್ಯ ನಿರ್ವಹಣೆ, ಸಾಮಾನ್ಯ ಸಂಸ್ಕರಣಾ ಘಟಕ, ಪರಿಸರ ಸ್ಥಾವರಗಳನ್ನು ಅಳವಡಿಸಿಕೊಳ್ಳದ ಕಾರ್ಖಾನೆಗಳ ಮೇಲೆಯು ಕೂಡ ಕ್ರಮ ಜರುಗಿಸಲಾಗುವುದು ಎಂದರು.

ಕಾರ್ಖಾನೆ, ಕೈಗಾರಿಕೆಗಳು ಕೂಡ ಸಾಕಷ್ಟು ಉದ್ಯೋಗ ನೀಡಿ ಹಲವರಿಗೆ ಜೀವನೋಪಾಯ ಕಲ್ಪಿಸಿದೆ. ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್ಆರ್)ಯ ಮೂಲಕ ಸಾಮಾಜಿಕ ಕೆಲಸಗಳನ್ನು ಮಾಡುತ್ತಾ ಬಂದಿವೆ. ಹಾಗಾಗಿ ಕೈಗಾರಿಕೆಗಳಿಂದ ಯಾವುದೇ ತಪ್ಪಾಗಬಾರದು ಎಂದರು.

ಕಾರ್ಖಾನೆಗಳಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ಅನಧಿಕೃತವಾಗಿ, ಅವೈಜ್ಞಾನಿಕವಾಗಿ ಎಲ್ಲೆಂದರಲ್ಲಿ ಸುರಿದರೆ ಅಂತಹ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ನರೇಂದ್ರ ಬಾಬು, ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ರಮೇಶ್, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ರೈತ ಸಂಘದ ಕಾರ್ಯಕರ್ತರು ಹಾಗೂ ಪರಿಸರ ಹೋರಾಟಗಾರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

5 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

15 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

16 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago