ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು- ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ ಅಂತರ್ಜಲ, ಮಣ್ಣು, ಗಾಳಿ ಕಲುಷಿತಗೊಳ್ಳುತ್ತಿದೆ. ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೊಡ್ಡಬಳ್ಳಾಪುರ ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದಂತೆ ಎನ್.ಜಿ.ಟಿ ಆದೇಶ ಪಾಲನೆ, ಅಪೇರಲ್ ಪಾರ್ಕ್ ಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಕರೆಯಲಾಗಿದ್ದ ಜಂಟಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ದೊಡ್ಡಬಳ್ಳಾಪುರದ ಕೆರೆಗಳಿಗೆ ತ್ಯಾಜ್ಯ ನೀರು ಬಿಡುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ. ಕಾರ್ಖಾನೆಗಳಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ ಇದ್ದಲ್ಲಿ ಯಾವುದೇ ತ್ಯಾಜ್ಯ ಹೊರಗಡೆ ಬಿಡುವ ಅವಶ್ಯಕತೆ ಇಲ್ಲ. ಹಲವು ಕಾರ್ಖಾನೆಗಳು ಇದನ್ನು ಪಾಲನೆ ಮಾಡುತ್ತಿಲ್ಲ.

ಅಪೇರಲ್ ಪಾರ್ಕ್ ನಲ್ಲಿ ಸುಮಾರು 2 ರಿಂದ 3 ಲಕ್ಷ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅಲ್ಲಿನ ಶೌಚಾಲಯ, ಕೊಳಚೆ ನೀರು ನೇರವಾಗಿ ಕೆರೆಗಳಿಗೆ, ಕಾಲುವೆಗಳಿಗೆ ಸೇರುತ್ತಿವೆ. ಕಾರ್ಖಾನೆಗಳಲ್ಲಿ ಸರಿಯಾಗಿ ಘನತ್ಯಾಜ್ಯ ನಿರ್ವಹಣೆ ಆಗುತ್ತಿಲ್ಲ ಎಂದರು.

ಗಾರ್ಮೆಂಟ್ಸ್ ಹಾಗೂ ಸಿದ್ದ ಉಡುಪು ತಯಾರಿಕಾ ಘಟಕಗಳಲ್ಲಿ ಕೆಮಿಕಲ್ ಮಿಶ್ರಿತ ಬಣ್ಣದ ನೀರು ಬಳಸಿ ಬಟ್ಟೆ ಸಿದ್ದ ಪಡಿಸುವವರು. ಬಟ್ಟೆ ಸಿದ್ಧವಾದ ನಂತರ ತ್ಯಾಜ್ಯ ನೀರನ್ನು ಹೊರಗೆ ಬಿಡುತ್ತಿದ್ದಾರೆ. ಆ ತ್ಯಾಜ್ಯ ನೀರನ್ನು ಕೂಡ ಸರಿಯಾದ ಕ್ರಮದಲ್ಲಿ ವಿಲೇವಾರಿ ಮಾಡಬೇಕು. ಇದರ ಜೊತೆಗೆ ಒಳಚರಂಡಿ ವ್ಯವಸ್ಥೆ ಆಗಬೇಕಿದೆ ಎಂದರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಮಾತನಾಡಿ ಕಾರ್ಖಾನೆ, ಕೈಗಾರಿಕೆಗಳಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಿ ಅಲ್ಲಿಯೇ ವಿಲೇವಾರಿ ಮಾಡಿಕೊಳ್ಳಬೇಕು ಎಂದರು. ಯಾವುದೇ ಕಾರಣಕ್ಕೂ ಹೊರಗೆ ಬರಬಾರದು.

ಕಾರ್ಖಾನೆಗಳ ತ್ಯಾಜ್ಯದಿಂದ ದೊಡ್ಡಬಳ್ಳಾಪುರದ ನಾಗರಕೆರೆ, ಚಿಕ್ಕ ತುಮಕೂರು ಕೆರೆ, ದೊಡ್ಡ ತುಮಕೂರು, ಮಜರಾ ಹೊಸಹಳ್ಳಿ ಕೆರೆಗಳು ಕಲುಷಿತಗೊಂಡು ಸುತ್ತಮುತ್ತಲಿನ ಹಳ್ಳಿಗಳಿಗೆ ಸಾಕಷ್ಟು ತೊಂದರೆಯಾಗಿದೆ. ಕುಡಿಯುವ ನೀರಿಗೆ ಯೋಗ್ಯವಿಲ್ಲ, ಕೊಳವೆ ಬಾವಿಗಳಲ್ಲಿ ನೀರು ಕಲುಷಿತಗೊಂಡಿದೆ ಎಂದು ಸುತ್ತಮುತ್ತಲಿನ ರೈತರು, ಪ್ರಗತಿ ಪರ ಚಿಂತಕರು ಅನೇಕ ಬಾರಿ ತಿಳಿಸಿದ್ದಾರೆ. ಈ ರೀತಿಯ ವಾತಾವರಣ ಬೇರೆ ಕೆರೆಗಳಿಗೂ ಆಗಬಾರದು. ಶಾಶ್ವತವಾಗಿ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ.

ಕೊಳಚೆ ನೀರು ಸಂಸ್ಕರಣಾ ಘಟಕ, ಘನತ್ಯಾಜ್ಯ ನಿರ್ವಹಣೆ, ಸಾಮಾನ್ಯ ಸಂಸ್ಕರಣಾ ಘಟಕ, ಪರಿಸರ ಸ್ಥಾವರಗಳನ್ನು ಅಳವಡಿಸಿಕೊಳ್ಳದ ಕಾರ್ಖಾನೆಗಳ ಮೇಲೆಯು ಕೂಡ ಕ್ರಮ ಜರುಗಿಸಲಾಗುವುದು ಎಂದರು.

ಕಾರ್ಖಾನೆ, ಕೈಗಾರಿಕೆಗಳು ಕೂಡ ಸಾಕಷ್ಟು ಉದ್ಯೋಗ ನೀಡಿ ಹಲವರಿಗೆ ಜೀವನೋಪಾಯ ಕಲ್ಪಿಸಿದೆ. ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್ಆರ್)ಯ ಮೂಲಕ ಸಾಮಾಜಿಕ ಕೆಲಸಗಳನ್ನು ಮಾಡುತ್ತಾ ಬಂದಿವೆ. ಹಾಗಾಗಿ ಕೈಗಾರಿಕೆಗಳಿಂದ ಯಾವುದೇ ತಪ್ಪಾಗಬಾರದು ಎಂದರು.

ಕಾರ್ಖಾನೆಗಳಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ಅನಧಿಕೃತವಾಗಿ, ಅವೈಜ್ಞಾನಿಕವಾಗಿ ಎಲ್ಲೆಂದರಲ್ಲಿ ಸುರಿದರೆ ಅಂತಹ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ನರೇಂದ್ರ ಬಾಬು, ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ರಮೇಶ್, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ರೈತ ಸಂಘದ ಕಾರ್ಯಕರ್ತರು ಹಾಗೂ ಪರಿಸರ ಹೋರಾಟಗಾರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

3 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

5 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

5 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

12 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago