ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು- ಶಾಸಕ ಧೀರಜ್ ಮುನಿರಾಜು

ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ ಅಂತರ್ಜಲ, ಮಣ್ಣು, ಗಾಳಿ ಕಲುಷಿತಗೊಳ್ಳುತ್ತಿದೆ. ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೊಡ್ಡಬಳ್ಳಾಪುರ ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದಂತೆ ಎನ್.ಜಿ.ಟಿ ಆದೇಶ ಪಾಲನೆ, ಅಪೇರಲ್ ಪಾರ್ಕ್ ಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಕರೆಯಲಾಗಿದ್ದ ಜಂಟಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ದೊಡ್ಡಬಳ್ಳಾಪುರದ ಕೆರೆಗಳಿಗೆ ತ್ಯಾಜ್ಯ ನೀರು ಬಿಡುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ. ಕಾರ್ಖಾನೆಗಳಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ ಇದ್ದಲ್ಲಿ ಯಾವುದೇ ತ್ಯಾಜ್ಯ ಹೊರಗಡೆ ಬಿಡುವ ಅವಶ್ಯಕತೆ ಇಲ್ಲ. ಹಲವು ಕಾರ್ಖಾನೆಗಳು ಇದನ್ನು ಪಾಲನೆ ಮಾಡುತ್ತಿಲ್ಲ.

ಅಪೇರಲ್ ಪಾರ್ಕ್ ನಲ್ಲಿ ಸುಮಾರು 2 ರಿಂದ 3 ಲಕ್ಷ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅಲ್ಲಿನ ಶೌಚಾಲಯ, ಕೊಳಚೆ ನೀರು ನೇರವಾಗಿ ಕೆರೆಗಳಿಗೆ, ಕಾಲುವೆಗಳಿಗೆ ಸೇರುತ್ತಿವೆ. ಕಾರ್ಖಾನೆಗಳಲ್ಲಿ ಸರಿಯಾಗಿ ಘನತ್ಯಾಜ್ಯ ನಿರ್ವಹಣೆ ಆಗುತ್ತಿಲ್ಲ ಎಂದರು.

ಗಾರ್ಮೆಂಟ್ಸ್ ಹಾಗೂ ಸಿದ್ದ ಉಡುಪು ತಯಾರಿಕಾ ಘಟಕಗಳಲ್ಲಿ ಕೆಮಿಕಲ್ ಮಿಶ್ರಿತ ಬಣ್ಣದ ನೀರು ಬಳಸಿ ಬಟ್ಟೆ ಸಿದ್ದ ಪಡಿಸುವವರು. ಬಟ್ಟೆ ಸಿದ್ಧವಾದ ನಂತರ ತ್ಯಾಜ್ಯ ನೀರನ್ನು ಹೊರಗೆ ಬಿಡುತ್ತಿದ್ದಾರೆ. ಆ ತ್ಯಾಜ್ಯ ನೀರನ್ನು ಕೂಡ ಸರಿಯಾದ ಕ್ರಮದಲ್ಲಿ ವಿಲೇವಾರಿ ಮಾಡಬೇಕು. ಇದರ ಜೊತೆಗೆ ಒಳಚರಂಡಿ ವ್ಯವಸ್ಥೆ ಆಗಬೇಕಿದೆ ಎಂದರು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಮಾತನಾಡಿ ಕಾರ್ಖಾನೆ, ಕೈಗಾರಿಕೆಗಳಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಿ ಅಲ್ಲಿಯೇ ವಿಲೇವಾರಿ ಮಾಡಿಕೊಳ್ಳಬೇಕು ಎಂದರು. ಯಾವುದೇ ಕಾರಣಕ್ಕೂ ಹೊರಗೆ ಬರಬಾರದು.

ಕಾರ್ಖಾನೆಗಳ ತ್ಯಾಜ್ಯದಿಂದ ದೊಡ್ಡಬಳ್ಳಾಪುರದ ನಾಗರಕೆರೆ, ಚಿಕ್ಕ ತುಮಕೂರು ಕೆರೆ, ದೊಡ್ಡ ತುಮಕೂರು, ಮಜರಾ ಹೊಸಹಳ್ಳಿ ಕೆರೆಗಳು ಕಲುಷಿತಗೊಂಡು ಸುತ್ತಮುತ್ತಲಿನ ಹಳ್ಳಿಗಳಿಗೆ ಸಾಕಷ್ಟು ತೊಂದರೆಯಾಗಿದೆ. ಕುಡಿಯುವ ನೀರಿಗೆ ಯೋಗ್ಯವಿಲ್ಲ, ಕೊಳವೆ ಬಾವಿಗಳಲ್ಲಿ ನೀರು ಕಲುಷಿತಗೊಂಡಿದೆ ಎಂದು ಸುತ್ತಮುತ್ತಲಿನ ರೈತರು, ಪ್ರಗತಿ ಪರ ಚಿಂತಕರು ಅನೇಕ ಬಾರಿ ತಿಳಿಸಿದ್ದಾರೆ. ಈ ರೀತಿಯ ವಾತಾವರಣ ಬೇರೆ ಕೆರೆಗಳಿಗೂ ಆಗಬಾರದು. ಶಾಶ್ವತವಾಗಿ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ.

ಕೊಳಚೆ ನೀರು ಸಂಸ್ಕರಣಾ ಘಟಕ, ಘನತ್ಯಾಜ್ಯ ನಿರ್ವಹಣೆ, ಸಾಮಾನ್ಯ ಸಂಸ್ಕರಣಾ ಘಟಕ, ಪರಿಸರ ಸ್ಥಾವರಗಳನ್ನು ಅಳವಡಿಸಿಕೊಳ್ಳದ ಕಾರ್ಖಾನೆಗಳ ಮೇಲೆಯು ಕೂಡ ಕ್ರಮ ಜರುಗಿಸಲಾಗುವುದು ಎಂದರು.

ಕಾರ್ಖಾನೆ, ಕೈಗಾರಿಕೆಗಳು ಕೂಡ ಸಾಕಷ್ಟು ಉದ್ಯೋಗ ನೀಡಿ ಹಲವರಿಗೆ ಜೀವನೋಪಾಯ ಕಲ್ಪಿಸಿದೆ. ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್ಆರ್)ಯ ಮೂಲಕ ಸಾಮಾಜಿಕ ಕೆಲಸಗಳನ್ನು ಮಾಡುತ್ತಾ ಬಂದಿವೆ. ಹಾಗಾಗಿ ಕೈಗಾರಿಕೆಗಳಿಂದ ಯಾವುದೇ ತಪ್ಪಾಗಬಾರದು ಎಂದರು.

ಕಾರ್ಖಾನೆಗಳಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ಅನಧಿಕೃತವಾಗಿ, ಅವೈಜ್ಞಾನಿಕವಾಗಿ ಎಲ್ಲೆಂದರಲ್ಲಿ ಸುರಿದರೆ ಅಂತಹ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ನರೇಂದ್ರ ಬಾಬು, ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ರಮೇಶ್, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ರೈತ ಸಂಘದ ಕಾರ್ಯಕರ್ತರು ಹಾಗೂ ಪರಿಸರ ಹೋರಾಟಗಾರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

5 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

6 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

7 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

11 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

18 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago