ದೊಡ್ಡಬಳ್ಳಾಪುರದ ಹಲವು ಭಾಗಗಳಲ್ಲಿ ಕೆಲವು ಕಾರ್ಖಾನೆಗಳು ಕಲುಷಿತ ಕೆಮಿಕಲ್ ತ್ಯಾಜ್ಯ, ಇನ್ನಿತರ ತ್ಯಾಜ್ಯವನ್ನು ಕೆರೆಗಳಿಗೆ, ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದಾರೆ. ಇದರಿಂದ ಅಂತರ್ಜಲ, ಮಣ್ಣು, ಗಾಳಿ ಕಲುಷಿತಗೊಳ್ಳುತ್ತಿದೆ. ತ್ಯಾಜ್ಯ ಸುರಿಯುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ದೊಡ್ಡಬಳ್ಳಾಪುರ ನಗರಸಭೆ ಮತ್ತು ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದಂತೆ ಎನ್.ಜಿ.ಟಿ ಆದೇಶ ಪಾಲನೆ, ಅಪೇರಲ್ ಪಾರ್ಕ್ ಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲು ಕರೆಯಲಾಗಿದ್ದ ಜಂಟಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ದೊಡ್ಡಬಳ್ಳಾಪುರದ ಕೆರೆಗಳಿಗೆ ತ್ಯಾಜ್ಯ ನೀರು ಬಿಡುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಿ. ಕಾರ್ಖಾನೆಗಳಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕ ಇದ್ದಲ್ಲಿ ಯಾವುದೇ ತ್ಯಾಜ್ಯ ಹೊರಗಡೆ ಬಿಡುವ ಅವಶ್ಯಕತೆ ಇಲ್ಲ. ಹಲವು ಕಾರ್ಖಾನೆಗಳು ಇದನ್ನು ಪಾಲನೆ ಮಾಡುತ್ತಿಲ್ಲ.
ಅಪೇರಲ್ ಪಾರ್ಕ್ ನಲ್ಲಿ ಸುಮಾರು 2 ರಿಂದ 3 ಲಕ್ಷ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಅಲ್ಲಿನ ಶೌಚಾಲಯ, ಕೊಳಚೆ ನೀರು ನೇರವಾಗಿ ಕೆರೆಗಳಿಗೆ, ಕಾಲುವೆಗಳಿಗೆ ಸೇರುತ್ತಿವೆ. ಕಾರ್ಖಾನೆಗಳಲ್ಲಿ ಸರಿಯಾಗಿ ಘನತ್ಯಾಜ್ಯ ನಿರ್ವಹಣೆ ಆಗುತ್ತಿಲ್ಲ ಎಂದರು.
ಗಾರ್ಮೆಂಟ್ಸ್ ಹಾಗೂ ಸಿದ್ದ ಉಡುಪು ತಯಾರಿಕಾ ಘಟಕಗಳಲ್ಲಿ ಕೆಮಿಕಲ್ ಮಿಶ್ರಿತ ಬಣ್ಣದ ನೀರು ಬಳಸಿ ಬಟ್ಟೆ ಸಿದ್ದ ಪಡಿಸುವವರು. ಬಟ್ಟೆ ಸಿದ್ಧವಾದ ನಂತರ ತ್ಯಾಜ್ಯ ನೀರನ್ನು ಹೊರಗೆ ಬಿಡುತ್ತಿದ್ದಾರೆ. ಆ ತ್ಯಾಜ್ಯ ನೀರನ್ನು ಕೂಡ ಸರಿಯಾದ ಕ್ರಮದಲ್ಲಿ ವಿಲೇವಾರಿ ಮಾಡಬೇಕು. ಇದರ ಜೊತೆಗೆ ಒಳಚರಂಡಿ ವ್ಯವಸ್ಥೆ ಆಗಬೇಕಿದೆ ಎಂದರು.
ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಮಾತನಾಡಿ ಕಾರ್ಖಾನೆ, ಕೈಗಾರಿಕೆಗಳಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪಿಸಿ ಅಲ್ಲಿಯೇ ವಿಲೇವಾರಿ ಮಾಡಿಕೊಳ್ಳಬೇಕು ಎಂದರು. ಯಾವುದೇ ಕಾರಣಕ್ಕೂ ಹೊರಗೆ ಬರಬಾರದು.
ಕಾರ್ಖಾನೆಗಳ ತ್ಯಾಜ್ಯದಿಂದ ದೊಡ್ಡಬಳ್ಳಾಪುರದ ನಾಗರಕೆರೆ, ಚಿಕ್ಕ ತುಮಕೂರು ಕೆರೆ, ದೊಡ್ಡ ತುಮಕೂರು, ಮಜರಾ ಹೊಸಹಳ್ಳಿ ಕೆರೆಗಳು ಕಲುಷಿತಗೊಂಡು ಸುತ್ತಮುತ್ತಲಿನ ಹಳ್ಳಿಗಳಿಗೆ ಸಾಕಷ್ಟು ತೊಂದರೆಯಾಗಿದೆ. ಕುಡಿಯುವ ನೀರಿಗೆ ಯೋಗ್ಯವಿಲ್ಲ, ಕೊಳವೆ ಬಾವಿಗಳಲ್ಲಿ ನೀರು ಕಲುಷಿತಗೊಂಡಿದೆ ಎಂದು ಸುತ್ತಮುತ್ತಲಿನ ರೈತರು, ಪ್ರಗತಿ ಪರ ಚಿಂತಕರು ಅನೇಕ ಬಾರಿ ತಿಳಿಸಿದ್ದಾರೆ. ಈ ರೀತಿಯ ವಾತಾವರಣ ಬೇರೆ ಕೆರೆಗಳಿಗೂ ಆಗಬಾರದು. ಶಾಶ್ವತವಾಗಿ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಿದೆ.
ಕೊಳಚೆ ನೀರು ಸಂಸ್ಕರಣಾ ಘಟಕ, ಘನತ್ಯಾಜ್ಯ ನಿರ್ವಹಣೆ, ಸಾಮಾನ್ಯ ಸಂಸ್ಕರಣಾ ಘಟಕ, ಪರಿಸರ ಸ್ಥಾವರಗಳನ್ನು ಅಳವಡಿಸಿಕೊಳ್ಳದ ಕಾರ್ಖಾನೆಗಳ ಮೇಲೆಯು ಕೂಡ ಕ್ರಮ ಜರುಗಿಸಲಾಗುವುದು ಎಂದರು.
ಕಾರ್ಖಾನೆ, ಕೈಗಾರಿಕೆಗಳು ಕೂಡ ಸಾಕಷ್ಟು ಉದ್ಯೋಗ ನೀಡಿ ಹಲವರಿಗೆ ಜೀವನೋಪಾಯ ಕಲ್ಪಿಸಿದೆ. ಸಾಮಾಜಿಕ ಹೊಣೆಗಾರಿಕೆ ನಿಧಿ(ಸಿಎಸ್ಆರ್)ಯ ಮೂಲಕ ಸಾಮಾಜಿಕ ಕೆಲಸಗಳನ್ನು ಮಾಡುತ್ತಾ ಬಂದಿವೆ. ಹಾಗಾಗಿ ಕೈಗಾರಿಕೆಗಳಿಂದ ಯಾವುದೇ ತಪ್ಪಾಗಬಾರದು ಎಂದರು.
ಕಾರ್ಖಾನೆಗಳಲ್ಲಿ ಉತ್ಪತ್ತಿ ಆಗುವ ತ್ಯಾಜ್ಯವನ್ನು ಅನಧಿಕೃತವಾಗಿ, ಅವೈಜ್ಞಾನಿಕವಾಗಿ ಎಲ್ಲೆಂದರಲ್ಲಿ ಸುರಿದರೆ ಅಂತಹ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದರು.
ಸಭೆಯಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ನರೇಂದ್ರ ಬಾಬು, ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕ ರಮೇಶ್, ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ರೈತ ಸಂಘದ ಕಾರ್ಯಕರ್ತರು ಹಾಗೂ ಪರಿಸರ ಹೋರಾಟಗಾರರು ಉಪಸ್ಥಿತರಿದ್ದರು.
ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…
ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…