ತ್ರಿಪದಿ ಕವಿ ಸರ್ವಜ್ಞನ ಜಯಂತಿ ಆಚರಣೆ

ತಾಲೂಕಿನ ಹಾಡೋನಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ತ್ರಿಪದಿ ಕವಿ ಸರ್ವಜ್ಞನ ಜಯಂತಿ ಆಚರಿಸಲಾಯಿತು.

ಬೆಂಗಳೂರು ಕುಂಬಾರ ಸಮುದಾಯದ ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾದ ವೆಂಕಟಾಚಲಯ್ಯ ಮಾತನಾಡಿ, ಕುಂಬಾರರ ದೇವರು ಸರ್ವಜ್ಞ ಜಯಂತಿಯನ್ನು ಹಾಡೋನಹಳ್ಳಿ ಗ್ರಾಮದಲ್ಲಿ ಆಚರಿಸುತ್ತಿರುವುದು ಶ್ಲಾಘನೀಯ. ಈ ಮೂಲಕವಾದರೂ ಸಮಾಜ ಸಂಘಟಿತವಾಲಿ. ಎಲ್ಲರೂ ಕವಿ ಸರ್ವಜ್ಞನ ತತ್ವ ಆದರ್ಶಗಳನ್ನು ಪಾಲಿಸಿದರೆ ಉತ್ತಮವಾಗಿ ಜೀವನ ಸಾಗಿಸಬಹುದು ಎಂದರು.

17ನೇ ಶತಮಾನದಲ್ಲಿಯೇ ಬೀದಿ ಬೀದಿ ಅಲೆಯುತ್ತ ಸಮಸಮಾಜಕ್ಕೆ ದುಡಿದ ಮಹಾನ್ ವ್ಯಕ್ತಿ ಆಗಿದ್ದಾರೆ. ನಮ್ಮ ಸಮಾಜ ಏಳಿಗೆಗೆ ನಾವೆಲ್ಲ ದುಡಿಯುತ್ತಿದ್ದೇನೆ. ಎಲ್ಲರೂ ಸಹಕಾರ ನೀಡಿದಾಗ ಮಾತ್ರ ಇನ್ನಷ್ಟು ಸಾಧಿಸಲು ಸಾಧ್ಯವಾಗುತ್ತದೆ. ಈಗಾಗಲೇ ಸಮಾಜದ ಕಲ್ಯಾಣ ಮಂಟಪ ಶ್ರೀ ಕ್ಷೇ ತ್ರ ಘಾಟಿಯಲ್ಲಿ ನಿರ್ಮಾಣವಾಗಿದ್ದು,‌ ಇದನ್ನ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ಅಪ್ಪಯಣ್ಣ ಮಾತನಾಡಿ, ಕುಂಬಾರರ ಸಮುದಾಯ ಅತ್ಯಂತ ಕಷ್ಟದ ಜೀವನ ನಡೆಸುತ್ತಿದೆ. ಈಗೀಗ ಸಮಾಜ ಬೆಳಕಿಗೆ ಬರುತ್ತಿದೆ. ತಾರತಮ್ಯ ಮಾಡದೆ ಸವಲತ್ತು ತಲುಪಿಸಲು ಶ್ರಮಿಸುತ್ತೇನೆ. ಅಲ್ಲದೆ ಗ್ರಾಮ ಪಂಚಾಯಿತಿಯಲ್ಲಿ ಬಡ್ಡಿ ರಹಿತ ಸಾಲ ಸೌಲಭ್ಯವಿದ್ದು ಸಾಲ ಸದ್ಭಳಕೆಯಿಂದ ಆರ್ಥಿಕವಾಗಿ ಸಬಲರಗಬೇಕೆಂದರು.

ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾಗರಾಜು ಮಾತನಾಡಿ, ಜಾತಿ ಹೀನನ ಮನೆಯ ಜ್ಯೋತಿ ತಾ ಹೀನವೆ ಎಂದು 17ನೇ ಶತಮಾನದಲ್ಲಿಯೆ ತಿಳಿಸಿಕೊಟ್ಟ ಮಹಾನ್ ದಾರ್ಶನಿಕ ಸರ್ವಜ್ಞ. ಪ್ಲಾಸ್ಟಿಕ್ ಅಬ್ಬರದಿಂದಾಗಿ ಮಣ್ಣಿನ ಮಡಿಕೆಗಳ ಪ್ರಭಾವ ಕುಂಠಿತವಾಗಿದೆ. ಹೀಗಾಗಿ ನಮ್ಮ ಕುಲ ಕಸುಬಿಗೆ ಪ್ರೋತ್ಸಾಹದ ಜತೆಗೆ ಮಾರಾಟ ಮಾಡಲು ಅಗತ್ಯವಾದ ಜಾಗವನ್ನು ಕಲ್ಪಿಸಿಕೊಡಲಾಗುವುದು ಎಂದರು.

ಈ ಸಂದರ್ಭದಲ್ಲಿ ವಿಎಸ್ಎಸ್ಎನ್ ಅಧ್ಯಕ್ಷರಾದ ಮುನೇಗೌಡ, ಘಾಟಿ ಕುಂಬಾರ ಛತ್ರದ ಪದಾಧಿಕಾರಿ ಜಯರಾಮಯ್ಯ, ಮುಖಂಡರಾದ ಸುಬ್ರಮಣಿ, ಚೌಡಪ್ಪ, ನಂಜಪ್ಪ, ಗುಂಡಪ್ಪ ಸೇರಿದಂತೆ ಬಚ್ಚಹಳ್ಳಿ ರಾಜಣ್ಣ, ಕೃಷಮೂತಿ (ಕೋಳಿ), ಚಿನ್ನಪ್ಪ, ರಾಮಾಂಜಿನಿ, ನಾಗರಾಜಪ್ಪ, ಗಂಗಾಧರಪ್ಪ ಮತ್ತಿತರರು ಇದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

1 hour ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

6 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

6 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

11 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

22 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

23 hours ago