ತಾಲೂಕಿನ ಹಾಡೋನಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ತ್ರಿಪದಿ ಕವಿ ಸರ್ವಜ್ಞನ ಜಯಂತಿ ಆಚರಿಸಲಾಯಿತು.
ಬೆಂಗಳೂರು ಕುಂಬಾರ ಸಮುದಾಯದ ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾದ ವೆಂಕಟಾಚಲಯ್ಯ ಮಾತನಾಡಿ, ಕುಂಬಾರರ ದೇವರು ಸರ್ವಜ್ಞ ಜಯಂತಿಯನ್ನು ಹಾಡೋನಹಳ್ಳಿ ಗ್ರಾಮದಲ್ಲಿ ಆಚರಿಸುತ್ತಿರುವುದು ಶ್ಲಾಘನೀಯ. ಈ ಮೂಲಕವಾದರೂ ಸಮಾಜ ಸಂಘಟಿತವಾಲಿ. ಎಲ್ಲರೂ ಕವಿ ಸರ್ವಜ್ಞನ ತತ್ವ ಆದರ್ಶಗಳನ್ನು ಪಾಲಿಸಿದರೆ ಉತ್ತಮವಾಗಿ ಜೀವನ ಸಾಗಿಸಬಹುದು ಎಂದರು.
17ನೇ ಶತಮಾನದಲ್ಲಿಯೇ ಬೀದಿ ಬೀದಿ ಅಲೆಯುತ್ತ ಸಮಸಮಾಜಕ್ಕೆ ದುಡಿದ ಮಹಾನ್ ವ್ಯಕ್ತಿ ಆಗಿದ್ದಾರೆ. ನಮ್ಮ ಸಮಾಜ ಏಳಿಗೆಗೆ ನಾವೆಲ್ಲ ದುಡಿಯುತ್ತಿದ್ದೇನೆ. ಎಲ್ಲರೂ ಸಹಕಾರ ನೀಡಿದಾಗ ಮಾತ್ರ ಇನ್ನಷ್ಟು ಸಾಧಿಸಲು ಸಾಧ್ಯವಾಗುತ್ತದೆ. ಈಗಾಗಲೇ ಸಮಾಜದ ಕಲ್ಯಾಣ ಮಂಟಪ ಶ್ರೀ ಕ್ಷೇ ತ್ರ ಘಾಟಿಯಲ್ಲಿ ನಿರ್ಮಾಣವಾಗಿದ್ದು, ಇದನ್ನ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ಅಪ್ಪಯಣ್ಣ ಮಾತನಾಡಿ, ಕುಂಬಾರರ ಸಮುದಾಯ ಅತ್ಯಂತ ಕಷ್ಟದ ಜೀವನ ನಡೆಸುತ್ತಿದೆ. ಈಗೀಗ ಸಮಾಜ ಬೆಳಕಿಗೆ ಬರುತ್ತಿದೆ. ತಾರತಮ್ಯ ಮಾಡದೆ ಸವಲತ್ತು ತಲುಪಿಸಲು ಶ್ರಮಿಸುತ್ತೇನೆ. ಅಲ್ಲದೆ ಗ್ರಾಮ ಪಂಚಾಯಿತಿಯಲ್ಲಿ ಬಡ್ಡಿ ರಹಿತ ಸಾಲ ಸೌಲಭ್ಯವಿದ್ದು ಸಾಲ ಸದ್ಭಳಕೆಯಿಂದ ಆರ್ಥಿಕವಾಗಿ ಸಬಲರಗಬೇಕೆಂದರು.
ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾಗರಾಜು ಮಾತನಾಡಿ, ಜಾತಿ ಹೀನನ ಮನೆಯ ಜ್ಯೋತಿ ತಾ ಹೀನವೆ ಎಂದು 17ನೇ ಶತಮಾನದಲ್ಲಿಯೆ ತಿಳಿಸಿಕೊಟ್ಟ ಮಹಾನ್ ದಾರ್ಶನಿಕ ಸರ್ವಜ್ಞ. ಪ್ಲಾಸ್ಟಿಕ್ ಅಬ್ಬರದಿಂದಾಗಿ ಮಣ್ಣಿನ ಮಡಿಕೆಗಳ ಪ್ರಭಾವ ಕುಂಠಿತವಾಗಿದೆ. ಹೀಗಾಗಿ ನಮ್ಮ ಕುಲ ಕಸುಬಿಗೆ ಪ್ರೋತ್ಸಾಹದ ಜತೆಗೆ ಮಾರಾಟ ಮಾಡಲು ಅಗತ್ಯವಾದ ಜಾಗವನ್ನು ಕಲ್ಪಿಸಿಕೊಡಲಾಗುವುದು ಎಂದರು.
ಈ ಸಂದರ್ಭದಲ್ಲಿ ವಿಎಸ್ಎಸ್ಎನ್ ಅಧ್ಯಕ್ಷರಾದ ಮುನೇಗೌಡ, ಘಾಟಿ ಕುಂಬಾರ ಛತ್ರದ ಪದಾಧಿಕಾರಿ ಜಯರಾಮಯ್ಯ, ಮುಖಂಡರಾದ ಸುಬ್ರಮಣಿ, ಚೌಡಪ್ಪ, ನಂಜಪ್ಪ, ಗುಂಡಪ್ಪ ಸೇರಿದಂತೆ ಬಚ್ಚಹಳ್ಳಿ ರಾಜಣ್ಣ, ಕೃಷಮೂತಿ (ಕೋಳಿ), ಚಿನ್ನಪ್ಪ, ರಾಮಾಂಜಿನಿ, ನಾಗರಾಜಪ್ಪ, ಗಂಗಾಧರಪ್ಪ ಮತ್ತಿತರರು ಇದ್ದರು.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…