ತಾಲೂಕಿನ ಹಾಡೋನಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ತ್ರಿಪದಿ ಕವಿ ಸರ್ವಜ್ಞನ ಜಯಂತಿ ಆಚರಿಸಲಾಯಿತು.
ಬೆಂಗಳೂರು ಕುಂಬಾರ ಸಮುದಾಯದ ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾದ ವೆಂಕಟಾಚಲಯ್ಯ ಮಾತನಾಡಿ, ಕುಂಬಾರರ ದೇವರು ಸರ್ವಜ್ಞ ಜಯಂತಿಯನ್ನು ಹಾಡೋನಹಳ್ಳಿ ಗ್ರಾಮದಲ್ಲಿ ಆಚರಿಸುತ್ತಿರುವುದು ಶ್ಲಾಘನೀಯ. ಈ ಮೂಲಕವಾದರೂ ಸಮಾಜ ಸಂಘಟಿತವಾಲಿ. ಎಲ್ಲರೂ ಕವಿ ಸರ್ವಜ್ಞನ ತತ್ವ ಆದರ್ಶಗಳನ್ನು ಪಾಲಿಸಿದರೆ ಉತ್ತಮವಾಗಿ ಜೀವನ ಸಾಗಿಸಬಹುದು ಎಂದರು.
17ನೇ ಶತಮಾನದಲ್ಲಿಯೇ ಬೀದಿ ಬೀದಿ ಅಲೆಯುತ್ತ ಸಮಸಮಾಜಕ್ಕೆ ದುಡಿದ ಮಹಾನ್ ವ್ಯಕ್ತಿ ಆಗಿದ್ದಾರೆ. ನಮ್ಮ ಸಮಾಜ ಏಳಿಗೆಗೆ ನಾವೆಲ್ಲ ದುಡಿಯುತ್ತಿದ್ದೇನೆ. ಎಲ್ಲರೂ ಸಹಕಾರ ನೀಡಿದಾಗ ಮಾತ್ರ ಇನ್ನಷ್ಟು ಸಾಧಿಸಲು ಸಾಧ್ಯವಾಗುತ್ತದೆ. ಈಗಾಗಲೇ ಸಮಾಜದ ಕಲ್ಯಾಣ ಮಂಟಪ ಶ್ರೀ ಕ್ಷೇ ತ್ರ ಘಾಟಿಯಲ್ಲಿ ನಿರ್ಮಾಣವಾಗಿದ್ದು, ಇದನ್ನ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ಅಪ್ಪಯಣ್ಣ ಮಾತನಾಡಿ, ಕುಂಬಾರರ ಸಮುದಾಯ ಅತ್ಯಂತ ಕಷ್ಟದ ಜೀವನ ನಡೆಸುತ್ತಿದೆ. ಈಗೀಗ ಸಮಾಜ ಬೆಳಕಿಗೆ ಬರುತ್ತಿದೆ. ತಾರತಮ್ಯ ಮಾಡದೆ ಸವಲತ್ತು ತಲುಪಿಸಲು ಶ್ರಮಿಸುತ್ತೇನೆ. ಅಲ್ಲದೆ ಗ್ರಾಮ ಪಂಚಾಯಿತಿಯಲ್ಲಿ ಬಡ್ಡಿ ರಹಿತ ಸಾಲ ಸೌಲಭ್ಯವಿದ್ದು ಸಾಲ ಸದ್ಭಳಕೆಯಿಂದ ಆರ್ಥಿಕವಾಗಿ ಸಬಲರಗಬೇಕೆಂದರು.
ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾಗರಾಜು ಮಾತನಾಡಿ, ಜಾತಿ ಹೀನನ ಮನೆಯ ಜ್ಯೋತಿ ತಾ ಹೀನವೆ ಎಂದು 17ನೇ ಶತಮಾನದಲ್ಲಿಯೆ ತಿಳಿಸಿಕೊಟ್ಟ ಮಹಾನ್ ದಾರ್ಶನಿಕ ಸರ್ವಜ್ಞ. ಪ್ಲಾಸ್ಟಿಕ್ ಅಬ್ಬರದಿಂದಾಗಿ ಮಣ್ಣಿನ ಮಡಿಕೆಗಳ ಪ್ರಭಾವ ಕುಂಠಿತವಾಗಿದೆ. ಹೀಗಾಗಿ ನಮ್ಮ ಕುಲ ಕಸುಬಿಗೆ ಪ್ರೋತ್ಸಾಹದ ಜತೆಗೆ ಮಾರಾಟ ಮಾಡಲು ಅಗತ್ಯವಾದ ಜಾಗವನ್ನು ಕಲ್ಪಿಸಿಕೊಡಲಾಗುವುದು ಎಂದರು.
ಈ ಸಂದರ್ಭದಲ್ಲಿ ವಿಎಸ್ಎಸ್ಎನ್ ಅಧ್ಯಕ್ಷರಾದ ಮುನೇಗೌಡ, ಘಾಟಿ ಕುಂಬಾರ ಛತ್ರದ ಪದಾಧಿಕಾರಿ ಜಯರಾಮಯ್ಯ, ಮುಖಂಡರಾದ ಸುಬ್ರಮಣಿ, ಚೌಡಪ್ಪ, ನಂಜಪ್ಪ, ಗುಂಡಪ್ಪ ಸೇರಿದಂತೆ ಬಚ್ಚಹಳ್ಳಿ ರಾಜಣ್ಣ, ಕೃಷಮೂತಿ (ಕೋಳಿ), ಚಿನ್ನಪ್ಪ, ರಾಮಾಂಜಿನಿ, ನಾಗರಾಜಪ್ಪ, ಗಂಗಾಧರಪ್ಪ ಮತ್ತಿತರರು ಇದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…