ತಾಲೂಕಿನ ಹಾಡೋನಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ತ್ರಿಪದಿ ಕವಿ ಸರ್ವಜ್ಞನ ಜಯಂತಿ ಆಚರಿಸಲಾಯಿತು.
ಬೆಂಗಳೂರು ಕುಂಬಾರ ಸಮುದಾಯದ ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾದ ವೆಂಕಟಾಚಲಯ್ಯ ಮಾತನಾಡಿ, ಕುಂಬಾರರ ದೇವರು ಸರ್ವಜ್ಞ ಜಯಂತಿಯನ್ನು ಹಾಡೋನಹಳ್ಳಿ ಗ್ರಾಮದಲ್ಲಿ ಆಚರಿಸುತ್ತಿರುವುದು ಶ್ಲಾಘನೀಯ. ಈ ಮೂಲಕವಾದರೂ ಸಮಾಜ ಸಂಘಟಿತವಾಲಿ. ಎಲ್ಲರೂ ಕವಿ ಸರ್ವಜ್ಞನ ತತ್ವ ಆದರ್ಶಗಳನ್ನು ಪಾಲಿಸಿದರೆ ಉತ್ತಮವಾಗಿ ಜೀವನ ಸಾಗಿಸಬಹುದು ಎಂದರು.
17ನೇ ಶತಮಾನದಲ್ಲಿಯೇ ಬೀದಿ ಬೀದಿ ಅಲೆಯುತ್ತ ಸಮಸಮಾಜಕ್ಕೆ ದುಡಿದ ಮಹಾನ್ ವ್ಯಕ್ತಿ ಆಗಿದ್ದಾರೆ. ನಮ್ಮ ಸಮಾಜ ಏಳಿಗೆಗೆ ನಾವೆಲ್ಲ ದುಡಿಯುತ್ತಿದ್ದೇನೆ. ಎಲ್ಲರೂ ಸಹಕಾರ ನೀಡಿದಾಗ ಮಾತ್ರ ಇನ್ನಷ್ಟು ಸಾಧಿಸಲು ಸಾಧ್ಯವಾಗುತ್ತದೆ. ಈಗಾಗಲೇ ಸಮಾಜದ ಕಲ್ಯಾಣ ಮಂಟಪ ಶ್ರೀ ಕ್ಷೇ ತ್ರ ಘಾಟಿಯಲ್ಲಿ ನಿರ್ಮಾಣವಾಗಿದ್ದು, ಇದನ್ನ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ಅಪ್ಪಯಣ್ಣ ಮಾತನಾಡಿ, ಕುಂಬಾರರ ಸಮುದಾಯ ಅತ್ಯಂತ ಕಷ್ಟದ ಜೀವನ ನಡೆಸುತ್ತಿದೆ. ಈಗೀಗ ಸಮಾಜ ಬೆಳಕಿಗೆ ಬರುತ್ತಿದೆ. ತಾರತಮ್ಯ ಮಾಡದೆ ಸವಲತ್ತು ತಲುಪಿಸಲು ಶ್ರಮಿಸುತ್ತೇನೆ. ಅಲ್ಲದೆ ಗ್ರಾಮ ಪಂಚಾಯಿತಿಯಲ್ಲಿ ಬಡ್ಡಿ ರಹಿತ ಸಾಲ ಸೌಲಭ್ಯವಿದ್ದು ಸಾಲ ಸದ್ಭಳಕೆಯಿಂದ ಆರ್ಥಿಕವಾಗಿ ಸಬಲರಗಬೇಕೆಂದರು.
ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾಗರಾಜು ಮಾತನಾಡಿ, ಜಾತಿ ಹೀನನ ಮನೆಯ ಜ್ಯೋತಿ ತಾ ಹೀನವೆ ಎಂದು 17ನೇ ಶತಮಾನದಲ್ಲಿಯೆ ತಿಳಿಸಿಕೊಟ್ಟ ಮಹಾನ್ ದಾರ್ಶನಿಕ ಸರ್ವಜ್ಞ. ಪ್ಲಾಸ್ಟಿಕ್ ಅಬ್ಬರದಿಂದಾಗಿ ಮಣ್ಣಿನ ಮಡಿಕೆಗಳ ಪ್ರಭಾವ ಕುಂಠಿತವಾಗಿದೆ. ಹೀಗಾಗಿ ನಮ್ಮ ಕುಲ ಕಸುಬಿಗೆ ಪ್ರೋತ್ಸಾಹದ ಜತೆಗೆ ಮಾರಾಟ ಮಾಡಲು ಅಗತ್ಯವಾದ ಜಾಗವನ್ನು ಕಲ್ಪಿಸಿಕೊಡಲಾಗುವುದು ಎಂದರು.
ಈ ಸಂದರ್ಭದಲ್ಲಿ ವಿಎಸ್ಎಸ್ಎನ್ ಅಧ್ಯಕ್ಷರಾದ ಮುನೇಗೌಡ, ಘಾಟಿ ಕುಂಬಾರ ಛತ್ರದ ಪದಾಧಿಕಾರಿ ಜಯರಾಮಯ್ಯ, ಮುಖಂಡರಾದ ಸುಬ್ರಮಣಿ, ಚೌಡಪ್ಪ, ನಂಜಪ್ಪ, ಗುಂಡಪ್ಪ ಸೇರಿದಂತೆ ಬಚ್ಚಹಳ್ಳಿ ರಾಜಣ್ಣ, ಕೃಷಮೂತಿ (ಕೋಳಿ), ಚಿನ್ನಪ್ಪ, ರಾಮಾಂಜಿನಿ, ನಾಗರಾಜಪ್ಪ, ಗಂಗಾಧರಪ್ಪ ಮತ್ತಿತರರು ಇದ್ದರು.
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…
ದೊಡ್ಡಬಳ್ಳಾಪುರ ನಗರದ ರಸ್ತೆ ಬದಿ, ಖಾಲಿ ಜಾಗಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಕಸದ ರಾಶಿ ಕಾಣುವುದು ಸಾಮಾನ್ಯ ದೃಶ್ಯವಾಗಿತ್ತು. ಸ್ವಚ್ಛತಾ…
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…