ತಾಲೂಕಿನ ಹಾಡೋನಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ತ್ರಿಪದಿ ಕವಿ ಸರ್ವಜ್ಞನ ಜಯಂತಿ ಆಚರಿಸಲಾಯಿತು.
ಬೆಂಗಳೂರು ಕುಂಬಾರ ಸಮುದಾಯದ ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾದ ವೆಂಕಟಾಚಲಯ್ಯ ಮಾತನಾಡಿ, ಕುಂಬಾರರ ದೇವರು ಸರ್ವಜ್ಞ ಜಯಂತಿಯನ್ನು ಹಾಡೋನಹಳ್ಳಿ ಗ್ರಾಮದಲ್ಲಿ ಆಚರಿಸುತ್ತಿರುವುದು ಶ್ಲಾಘನೀಯ. ಈ ಮೂಲಕವಾದರೂ ಸಮಾಜ ಸಂಘಟಿತವಾಲಿ. ಎಲ್ಲರೂ ಕವಿ ಸರ್ವಜ್ಞನ ತತ್ವ ಆದರ್ಶಗಳನ್ನು ಪಾಲಿಸಿದರೆ ಉತ್ತಮವಾಗಿ ಜೀವನ ಸಾಗಿಸಬಹುದು ಎಂದರು.
17ನೇ ಶತಮಾನದಲ್ಲಿಯೇ ಬೀದಿ ಬೀದಿ ಅಲೆಯುತ್ತ ಸಮಸಮಾಜಕ್ಕೆ ದುಡಿದ ಮಹಾನ್ ವ್ಯಕ್ತಿ ಆಗಿದ್ದಾರೆ. ನಮ್ಮ ಸಮಾಜ ಏಳಿಗೆಗೆ ನಾವೆಲ್ಲ ದುಡಿಯುತ್ತಿದ್ದೇನೆ. ಎಲ್ಲರೂ ಸಹಕಾರ ನೀಡಿದಾಗ ಮಾತ್ರ ಇನ್ನಷ್ಟು ಸಾಧಿಸಲು ಸಾಧ್ಯವಾಗುತ್ತದೆ. ಈಗಾಗಲೇ ಸಮಾಜದ ಕಲ್ಯಾಣ ಮಂಟಪ ಶ್ರೀ ಕ್ಷೇ ತ್ರ ಘಾಟಿಯಲ್ಲಿ ನಿರ್ಮಾಣವಾಗಿದ್ದು, ಇದನ್ನ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ಅಪ್ಪಯಣ್ಣ ಮಾತನಾಡಿ, ಕುಂಬಾರರ ಸಮುದಾಯ ಅತ್ಯಂತ ಕಷ್ಟದ ಜೀವನ ನಡೆಸುತ್ತಿದೆ. ಈಗೀಗ ಸಮಾಜ ಬೆಳಕಿಗೆ ಬರುತ್ತಿದೆ. ತಾರತಮ್ಯ ಮಾಡದೆ ಸವಲತ್ತು ತಲುಪಿಸಲು ಶ್ರಮಿಸುತ್ತೇನೆ. ಅಲ್ಲದೆ ಗ್ರಾಮ ಪಂಚಾಯಿತಿಯಲ್ಲಿ ಬಡ್ಡಿ ರಹಿತ ಸಾಲ ಸೌಲಭ್ಯವಿದ್ದು ಸಾಲ ಸದ್ಭಳಕೆಯಿಂದ ಆರ್ಥಿಕವಾಗಿ ಸಬಲರಗಬೇಕೆಂದರು.
ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾಗರಾಜು ಮಾತನಾಡಿ, ಜಾತಿ ಹೀನನ ಮನೆಯ ಜ್ಯೋತಿ ತಾ ಹೀನವೆ ಎಂದು 17ನೇ ಶತಮಾನದಲ್ಲಿಯೆ ತಿಳಿಸಿಕೊಟ್ಟ ಮಹಾನ್ ದಾರ್ಶನಿಕ ಸರ್ವಜ್ಞ. ಪ್ಲಾಸ್ಟಿಕ್ ಅಬ್ಬರದಿಂದಾಗಿ ಮಣ್ಣಿನ ಮಡಿಕೆಗಳ ಪ್ರಭಾವ ಕುಂಠಿತವಾಗಿದೆ. ಹೀಗಾಗಿ ನಮ್ಮ ಕುಲ ಕಸುಬಿಗೆ ಪ್ರೋತ್ಸಾಹದ ಜತೆಗೆ ಮಾರಾಟ ಮಾಡಲು ಅಗತ್ಯವಾದ ಜಾಗವನ್ನು ಕಲ್ಪಿಸಿಕೊಡಲಾಗುವುದು ಎಂದರು.
ಈ ಸಂದರ್ಭದಲ್ಲಿ ವಿಎಸ್ಎಸ್ಎನ್ ಅಧ್ಯಕ್ಷರಾದ ಮುನೇಗೌಡ, ಘಾಟಿ ಕುಂಬಾರ ಛತ್ರದ ಪದಾಧಿಕಾರಿ ಜಯರಾಮಯ್ಯ, ಮುಖಂಡರಾದ ಸುಬ್ರಮಣಿ, ಚೌಡಪ್ಪ, ನಂಜಪ್ಪ, ಗುಂಡಪ್ಪ ಸೇರಿದಂತೆ ಬಚ್ಚಹಳ್ಳಿ ರಾಜಣ್ಣ, ಕೃಷಮೂತಿ (ಕೋಳಿ), ಚಿನ್ನಪ್ಪ, ರಾಮಾಂಜಿನಿ, ನಾಗರಾಜಪ್ಪ, ಗಂಗಾಧರಪ್ಪ ಮತ್ತಿತರರು ಇದ್ದರು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…