ತ್ರಿಪದಿ ಕವಿ ಸರ್ವಜ್ಞನ ಜಯಂತಿ ಆಚರಣೆ

ತಾಲೂಕಿನ ಹಾಡೋನಹಳ್ಳಿ ಗ್ರಾಮದ ಗ್ರಾಮ ಪಂಚಾಯಿತಿ ಆವರಣದಲ್ಲಿ ತ್ರಿಪದಿ ಕವಿ ಸರ್ವಜ್ಞನ ಜಯಂತಿ ಆಚರಿಸಲಾಯಿತು.

ಬೆಂಗಳೂರು ಕುಂಬಾರ ಸಮುದಾಯದ ಗ್ರಾಮಾಂತರ ಜಿಲ್ಲಾ ಅಧ್ಯಕ್ಷರಾದ ವೆಂಕಟಾಚಲಯ್ಯ ಮಾತನಾಡಿ, ಕುಂಬಾರರ ದೇವರು ಸರ್ವಜ್ಞ ಜಯಂತಿಯನ್ನು ಹಾಡೋನಹಳ್ಳಿ ಗ್ರಾಮದಲ್ಲಿ ಆಚರಿಸುತ್ತಿರುವುದು ಶ್ಲಾಘನೀಯ. ಈ ಮೂಲಕವಾದರೂ ಸಮಾಜ ಸಂಘಟಿತವಾಲಿ. ಎಲ್ಲರೂ ಕವಿ ಸರ್ವಜ್ಞನ ತತ್ವ ಆದರ್ಶಗಳನ್ನು ಪಾಲಿಸಿದರೆ ಉತ್ತಮವಾಗಿ ಜೀವನ ಸಾಗಿಸಬಹುದು ಎಂದರು.

17ನೇ ಶತಮಾನದಲ್ಲಿಯೇ ಬೀದಿ ಬೀದಿ ಅಲೆಯುತ್ತ ಸಮಸಮಾಜಕ್ಕೆ ದುಡಿದ ಮಹಾನ್ ವ್ಯಕ್ತಿ ಆಗಿದ್ದಾರೆ. ನಮ್ಮ ಸಮಾಜ ಏಳಿಗೆಗೆ ನಾವೆಲ್ಲ ದುಡಿಯುತ್ತಿದ್ದೇನೆ. ಎಲ್ಲರೂ ಸಹಕಾರ ನೀಡಿದಾಗ ಮಾತ್ರ ಇನ್ನಷ್ಟು ಸಾಧಿಸಲು ಸಾಧ್ಯವಾಗುತ್ತದೆ. ಈಗಾಗಲೇ ಸಮಾಜದ ಕಲ್ಯಾಣ ಮಂಟಪ ಶ್ರೀ ಕ್ಷೇ ತ್ರ ಘಾಟಿಯಲ್ಲಿ ನಿರ್ಮಾಣವಾಗಿದ್ದು,‌ ಇದನ್ನ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರಾದ ಅಪ್ಪಯಣ್ಣ ಮಾತನಾಡಿ, ಕುಂಬಾರರ ಸಮುದಾಯ ಅತ್ಯಂತ ಕಷ್ಟದ ಜೀವನ ನಡೆಸುತ್ತಿದೆ. ಈಗೀಗ ಸಮಾಜ ಬೆಳಕಿಗೆ ಬರುತ್ತಿದೆ. ತಾರತಮ್ಯ ಮಾಡದೆ ಸವಲತ್ತು ತಲುಪಿಸಲು ಶ್ರಮಿಸುತ್ತೇನೆ. ಅಲ್ಲದೆ ಗ್ರಾಮ ಪಂಚಾಯಿತಿಯಲ್ಲಿ ಬಡ್ಡಿ ರಹಿತ ಸಾಲ ಸೌಲಭ್ಯವಿದ್ದು ಸಾಲ ಸದ್ಭಳಕೆಯಿಂದ ಆರ್ಥಿಕವಾಗಿ ಸಬಲರಗಬೇಕೆಂದರು.

ಗ್ರಾಮ ಪಂಚಾಯತಿ ಅಧ್ಯಕ್ಷರಾದ ನಾಗರಾಜು ಮಾತನಾಡಿ, ಜಾತಿ ಹೀನನ ಮನೆಯ ಜ್ಯೋತಿ ತಾ ಹೀನವೆ ಎಂದು 17ನೇ ಶತಮಾನದಲ್ಲಿಯೆ ತಿಳಿಸಿಕೊಟ್ಟ ಮಹಾನ್ ದಾರ್ಶನಿಕ ಸರ್ವಜ್ಞ. ಪ್ಲಾಸ್ಟಿಕ್ ಅಬ್ಬರದಿಂದಾಗಿ ಮಣ್ಣಿನ ಮಡಿಕೆಗಳ ಪ್ರಭಾವ ಕುಂಠಿತವಾಗಿದೆ. ಹೀಗಾಗಿ ನಮ್ಮ ಕುಲ ಕಸುಬಿಗೆ ಪ್ರೋತ್ಸಾಹದ ಜತೆಗೆ ಮಾರಾಟ ಮಾಡಲು ಅಗತ್ಯವಾದ ಜಾಗವನ್ನು ಕಲ್ಪಿಸಿಕೊಡಲಾಗುವುದು ಎಂದರು.

ಈ ಸಂದರ್ಭದಲ್ಲಿ ವಿಎಸ್ಎಸ್ಎನ್ ಅಧ್ಯಕ್ಷರಾದ ಮುನೇಗೌಡ, ಘಾಟಿ ಕುಂಬಾರ ಛತ್ರದ ಪದಾಧಿಕಾರಿ ಜಯರಾಮಯ್ಯ, ಮುಖಂಡರಾದ ಸುಬ್ರಮಣಿ, ಚೌಡಪ್ಪ, ನಂಜಪ್ಪ, ಗುಂಡಪ್ಪ ಸೇರಿದಂತೆ ಬಚ್ಚಹಳ್ಳಿ ರಾಜಣ್ಣ, ಕೃಷಮೂತಿ (ಕೋಳಿ), ಚಿನ್ನಪ್ಪ, ರಾಮಾಂಜಿನಿ, ನಾಗರಾಜಪ್ಪ, ಗಂಗಾಧರಪ್ಪ ಮತ್ತಿತರರು ಇದ್ದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

10 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

13 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

14 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

17 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago