Categories: ರಾಜ್ಯ

ತ.ನಾಡಿಗೆ ಮುಂದಿನ 15ದಿನಗಳ ಕಾಲ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ: ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ- ಮಾಜಿ ಸಿಎಂ‌ ಹೆಚ್ ಡಿಕೆ

ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಮತ್ತೆ ಆದೇಶ ನೀಡಿರುವುದು ರಾಜ್ಯಕ್ಕೆ ಇನ್ನೊಂದು ದೊಡ್ಡ ಆಘಾತ. ಇಂಥ ಜಲಾಘಾತಗಳನ್ನು ಕೊಡುವುದಕ್ಕೇ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಿಕೊಂಡಿದ್ದಾರೆಯೇ ಎನ್ನುವ ಅನುಮಾನ ನಮ್ಮದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಆದೇಶಗಳು ಸಂವಿಧಾನ ಹಾಗೂ ಒಕ್ಕೂಟದ ಆಶಯಗಳಿಗೆ ವಿರುದ್ಧವಾಗಿವೆ. ಮಾತ್ರವಲ್ಲ, ಕನ್ನಡಿಗರ ತಾಳ್ಮೆ, ಸಹನೆ ಪರೀಕ್ಷೆ ಮಾಡುವಂತಿವೆ. ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ. ಬೆಂಗಳೂರು ಜನ ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಕಾವೇರಿ ಕೊಳ್ಳದ ರೈತರ ಒಂದು ಬೆಳೆಗೂ ಸಮರ್ಪಕವಾಗಿ ನೀರು ಹರಿದಿಲ್ಲ. ಹೀಗಿದ್ದರೂ ರಾಜ್ಯಕ್ಕೆ ಆದೇಶದ ಮೇಲೆ ಆದೇಶ ನೀಡಿ ಸಮಾನ ನ್ಯಾಯ ತತ್ವವನ್ನು ನಾಮಾವಶೇಷ ಮಾಡಲಾಗಿದೆ ಎಂದಿದ್ದಾರೆ.

ಕನ್ನಡಿಗರೂ ಮನುಷ್ಯರು, ಅವರಿಗೂ ಅನ್ನ ನೀರು ಬೇಕು. ಅವರೂ ಈ ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದನ್ನು ಸಮಿತಿ ಮರೆತಿರುವಂತಿದೆ. ಸರಕಾರದಿಂದ ಕಾವೇರಿ ಹಿತರಕ್ಷಣೆ ಸಾಧ್ಯವಿಲ್ಲ. ಈ ಆದೇಶವನ್ನು ದಿಕ್ಕರಿಸುವ ಎದೆಗಾರಿಕೆ ಸರಕಾರಕ್ಕೆ ಇಲ್ಲ. ಜನರು ಸಂಘಟಿತರಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು, ಜನರ ಜತೆ ನಾವಿದ್ದೇವೆ, ನಮ್ಮ ಪಕ್ಷವೂ ಇದೆ ಎಂದು ಹೇಳಿದ್ದಾರೆ.

ಒಂದು ಕಡೆ ವಿದ್ಯುತ್ ಆಘಾತದಿಂದ ರೈತರು ಕಂಗೆಟ್ಟಿದ್ದಾರೆ. ಮತ್ತೊಂದೆಡೆ ಕಾವೇರಿ ಬವಣೆ ರಾಜ್ಯವನ್ನು ಹಿಂಡಿಹಿಪ್ಪೆ ಮಾಡುತ್ತಿದೆ. ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ಕಾವೇರಿ ಹರಿಯಲಿ ಎನ್ನುವ ಮನಸ್ಥಿತಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಇದೆ ಎಂದು ಕಿಡಿಕಾರಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 hour ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

12 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

13 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

13 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

16 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

19 hours ago