ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಮತ್ತೆ ಆದೇಶ ನೀಡಿರುವುದು ರಾಜ್ಯಕ್ಕೆ ಇನ್ನೊಂದು ದೊಡ್ಡ ಆಘಾತ. ಇಂಥ ಜಲಾಘಾತಗಳನ್ನು ಕೊಡುವುದಕ್ಕೇ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಿಕೊಂಡಿದ್ದಾರೆಯೇ ಎನ್ನುವ ಅನುಮಾನ ನಮ್ಮದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಆದೇಶಗಳು ಸಂವಿಧಾನ ಹಾಗೂ ಒಕ್ಕೂಟದ ಆಶಯಗಳಿಗೆ ವಿರುದ್ಧವಾಗಿವೆ. ಮಾತ್ರವಲ್ಲ, ಕನ್ನಡಿಗರ ತಾಳ್ಮೆ, ಸಹನೆ ಪರೀಕ್ಷೆ ಮಾಡುವಂತಿವೆ. ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ. ಬೆಂಗಳೂರು ಜನ ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಕಾವೇರಿ ಕೊಳ್ಳದ ರೈತರ ಒಂದು ಬೆಳೆಗೂ ಸಮರ್ಪಕವಾಗಿ ನೀರು ಹರಿದಿಲ್ಲ. ಹೀಗಿದ್ದರೂ ರಾಜ್ಯಕ್ಕೆ ಆದೇಶದ ಮೇಲೆ ಆದೇಶ ನೀಡಿ ಸಮಾನ ನ್ಯಾಯ ತತ್ವವನ್ನು ನಾಮಾವಶೇಷ ಮಾಡಲಾಗಿದೆ ಎಂದಿದ್ದಾರೆ.
ಒಂದು ಕಡೆ ವಿದ್ಯುತ್ ಆಘಾತದಿಂದ ರೈತರು ಕಂಗೆಟ್ಟಿದ್ದಾರೆ. ಮತ್ತೊಂದೆಡೆ ಕಾವೇರಿ ಬವಣೆ ರಾಜ್ಯವನ್ನು ಹಿಂಡಿಹಿಪ್ಪೆ ಮಾಡುತ್ತಿದೆ. ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ಕಾವೇರಿ ಹರಿಯಲಿ ಎನ್ನುವ ಮನಸ್ಥಿತಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಇದೆ ಎಂದು ಕಿಡಿಕಾರಿದ್ದಾರೆ.
ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್ಎಸ್ಎಸ್ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…
ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…
"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…