ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಮತ್ತೆ ಆದೇಶ ನೀಡಿರುವುದು ರಾಜ್ಯಕ್ಕೆ ಇನ್ನೊಂದು ದೊಡ್ಡ ಆಘಾತ. ಇಂಥ ಜಲಾಘಾತಗಳನ್ನು ಕೊಡುವುದಕ್ಕೇ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಿಕೊಂಡಿದ್ದಾರೆಯೇ ಎನ್ನುವ ಅನುಮಾನ ನಮ್ಮದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಆದೇಶಗಳು ಸಂವಿಧಾನ ಹಾಗೂ ಒಕ್ಕೂಟದ ಆಶಯಗಳಿಗೆ ವಿರುದ್ಧವಾಗಿವೆ. ಮಾತ್ರವಲ್ಲ, ಕನ್ನಡಿಗರ ತಾಳ್ಮೆ, ಸಹನೆ ಪರೀಕ್ಷೆ ಮಾಡುವಂತಿವೆ. ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ. ಬೆಂಗಳೂರು ಜನ ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಕಾವೇರಿ ಕೊಳ್ಳದ ರೈತರ ಒಂದು ಬೆಳೆಗೂ ಸಮರ್ಪಕವಾಗಿ ನೀರು ಹರಿದಿಲ್ಲ. ಹೀಗಿದ್ದರೂ ರಾಜ್ಯಕ್ಕೆ ಆದೇಶದ ಮೇಲೆ ಆದೇಶ ನೀಡಿ ಸಮಾನ ನ್ಯಾಯ ತತ್ವವನ್ನು ನಾಮಾವಶೇಷ ಮಾಡಲಾಗಿದೆ ಎಂದಿದ್ದಾರೆ.
ಒಂದು ಕಡೆ ವಿದ್ಯುತ್ ಆಘಾತದಿಂದ ರೈತರು ಕಂಗೆಟ್ಟಿದ್ದಾರೆ. ಮತ್ತೊಂದೆಡೆ ಕಾವೇರಿ ಬವಣೆ ರಾಜ್ಯವನ್ನು ಹಿಂಡಿಹಿಪ್ಪೆ ಮಾಡುತ್ತಿದೆ. ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ಕಾವೇರಿ ಹರಿಯಲಿ ಎನ್ನುವ ಮನಸ್ಥಿತಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಇದೆ ಎಂದು ಕಿಡಿಕಾರಿದ್ದಾರೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…