ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಮತ್ತೆ ಆದೇಶ ನೀಡಿರುವುದು ರಾಜ್ಯಕ್ಕೆ ಇನ್ನೊಂದು ದೊಡ್ಡ ಆಘಾತ. ಇಂಥ ಜಲಾಘಾತಗಳನ್ನು ಕೊಡುವುದಕ್ಕೇ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಿಕೊಂಡಿದ್ದಾರೆಯೇ ಎನ್ನುವ ಅನುಮಾನ ನಮ್ಮದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಈ ಆದೇಶಗಳು ಸಂವಿಧಾನ ಹಾಗೂ ಒಕ್ಕೂಟದ ಆಶಯಗಳಿಗೆ ವಿರುದ್ಧವಾಗಿವೆ. ಮಾತ್ರವಲ್ಲ, ಕನ್ನಡಿಗರ ತಾಳ್ಮೆ, ಸಹನೆ ಪರೀಕ್ಷೆ ಮಾಡುವಂತಿವೆ. ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ. ಬೆಂಗಳೂರು ಜನ ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಕಾವೇರಿ ಕೊಳ್ಳದ ರೈತರ ಒಂದು ಬೆಳೆಗೂ ಸಮರ್ಪಕವಾಗಿ ನೀರು ಹರಿದಿಲ್ಲ. ಹೀಗಿದ್ದರೂ ರಾಜ್ಯಕ್ಕೆ ಆದೇಶದ ಮೇಲೆ ಆದೇಶ ನೀಡಿ ಸಮಾನ ನ್ಯಾಯ ತತ್ವವನ್ನು ನಾಮಾವಶೇಷ ಮಾಡಲಾಗಿದೆ ಎಂದಿದ್ದಾರೆ.
ಒಂದು ಕಡೆ ವಿದ್ಯುತ್ ಆಘಾತದಿಂದ ರೈತರು ಕಂಗೆಟ್ಟಿದ್ದಾರೆ. ಮತ್ತೊಂದೆಡೆ ಕಾವೇರಿ ಬವಣೆ ರಾಜ್ಯವನ್ನು ಹಿಂಡಿಹಿಪ್ಪೆ ಮಾಡುತ್ತಿದೆ. ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ಕಾವೇರಿ ಹರಿಯಲಿ ಎನ್ನುವ ಮನಸ್ಥಿತಿಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಇದೆ ಎಂದು ಕಿಡಿಕಾರಿದ್ದಾರೆ.
ಏಪ್ರಿಲ್ ಧಮಾಕಾ....... ಕನ್ನಡ ಸಿನಿಮಾದ ಡಾಕ್ಟರ್ ರಾಜಕುಮಾರ್ ಏಪ್ರಿಲ್ 24, ಇಂಗ್ಲೀಷ್ ಸಾಹಿತ್ಯದ ವಿಲಿಯಂ ಶೇಕ್ಸ್ಪಿಯರ್ ಏಪ್ರಿಲ್ 23, ವಿಶ್ವ…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…
ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…
ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…
ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…
ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…