ಥೇಟ್ ಅರಳುಮಲ್ಲಿಗೆ ವೃದ್ಧೆ ಬಳಿ ಮಾಂಗಲ್ಯ ಸರ ಕದ್ದ ಹಾಗೇ ರಾಮನಗರದಲ್ಲೂ ಕೈಚಳಕ‌ ತೋರಿಸಿದ್ದ ಖದೀಮರು: ಮಾಂಗಲ್ಯ ಸರ ಜಪ್ತಿ: ವೃದ್ಧೆಗೆ ಮಾಂಗಲ್ಯ ಸರ ಹಸ್ತಾಂತರ

ಥೇಟ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅರಳುಮಲ್ಲಿಗೆ ಗ್ರಾಮದಲ್ಲಿ ಅಜ್ಜಿಯ ಚಿನ್ನದ ಮಾಂಗಲ್ಯ ಸರ ಕದ್ದಿದ್ದ ಹಾಗೇ ಇದೇ ಆರೋಪಿಗಳು‌ ರಾಮನಗರದಲ್ಲೂ ಸಹ ಸುಮಾರು 70 ವರ್ಷದ ವೃದ್ಧೆ ಬಳಿ ಸುಮಾರು 50 ಗ್ರಾಂ ತೂಕದ ಮಾಂಗಲ್ಯ ಸರ ಕದ್ದಿದ್ದರು.

2024ರ ಡಿ.22ರಂದು ರಾಮನಗರದ ಮುನಿಯಪ್ಪನ ದೊಡ್ಡಿಯ ಪೆಟ್ಟಿ ಅಂಗಡಿಯಲ್ಲಿ ವೃದ್ಧೆ ಮರಗಮ್ಮ(70), ತನ್ನ ಪಾಡಿಗೆ ತಾನು ಅಂಗಡಿಯಲ್ಲಿ ವ್ಯಾಪಾರ ಮಾಡಿಕೊಂಡು ಇದ್ದಳು. ಹೊಂಚು ಹಾಕಿಕೊಂಡು ಇದ್ದ ಖದೀಮರು ಅಂಗಡಿಗೆ ಬಂದು 10ರೂ. ಕೊಟ್ಟು 5 ರೂಪಾಯಿಯ ಚಾಕೊಲೆಟ್ ಪಡೆಯುತ್ತಾರೆ. ಇನ್ನುಳಿದ 5 ರೂಪಾಯಿ ವಾಪಸ್ ನೀಡಲು ವೃದ್ಧೆ ಮುಂದಾದಗ ಕಳ್ಳರು ವೃದ್ಧೆ ಕೊರಳಲ್ಲಿದ್ದ ಮಾಂಗಲ್ಯ ಸರಕ್ಕೆ ಕೈಹಾಕಿ ಕಸಿದು ಪರಾರಿಯಾಗುತ್ತಾರೆ.

ರಾಮನಗರದಲ್ಲಿ ಕಳ್ಳತನ ಮಾಡಿಕೊಂಡು ದೊಡ್ಡಬಳ್ಳಾಪುರಕ್ಕೆ ಎಂಟ್ರಿ‌ಕೊಟ್ಟ ಕಳ್ಳರು ಅರಳುಮಲ್ಲಿಗೆ ಗ್ರಾಮದಲ್ಲಿ ಪೆಟ್ಟಿ ಅಂಗಡಿ ವೃದ್ಧೆಯನ್ನೇ ಟಾರ್ಗೆಟ್ ಮಾಡಿ‌ ಥೇಟ್ ರಾಮನಗರದಲ್ಲಿ‌ ಬಳಸಿದ ಪ್ಲ್ಯಾನನ್ನೇ ಅರಳುಮಲ್ಲಿಗೆಯಲ್ಲೂ‌ ಉಪಯೋಗಿಸಿ 2025ರ ಫೆ.21ರಂದು ವೃದ್ಧೆಯ‌ ಮಾಂಗಲ್ಯ ಸರ ಕದ್ದು ಪರಾರಿಯಾಗುತ್ತಾರೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳರ ಜಾಡು‌ಹಿಡಿದು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗುತ್ತಾರೆ, ಸದ್ಯ ಇಬ್ಬರು ಖದೀಮರನ್ನು ಬಂಧಿಸಿ ಕದ್ದ ಚಿನ್ನದ ಸರವನ್ನು ವಶಕ್ಕೆ ಪಡೆದು ಕಳುವಾಗಿದ್ದ ಚಿನ್ನದ ಸರವನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರು ಅರಳುಮಲ್ಲಿಗೆ ಗ್ರಾಮದ ಅಜ್ಜಿಗೆ ವಾಪಸ್ ನೀಡಿರುತ್ತಾರೆ.

ಇನ್ನೂ ಹೆಚ್ಚಿನ‌ ತನಿಖೆ‌ ಮುಂದುವರಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ‌ ಪೊಲೀಸರು, ರಾಮಾನಗರದಲ್ಲೂ ಇದೇರೀತಿ ಕಳ್ಳತನ ಮಾಡಿರುವ ಬಗ್ಗೆ ಕಳ್ಳರಿಂದ‌ ಬಾಯಿಬಿಡಿಸಿದ್ದಾರೆ. ಕೂಡಲೇ ರಾಮನಗರದ ಅಜ್ಜಿ ಬಳಿ‌ ಕದ್ದಿದ್ದ ಸುಮಾರು 39 ಗ್ರಾಂ ತೂಕದ‌ ಮಾಂಗಲ್ಯ ಸರವನ್ನೂ ವಶಕ್ಕೆ ಪಡೆದ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರು, ರಾಮನಗರದ ಮುನಿಯಪ್ಪನ ದೊಡ್ಡಿಯಿಂದ ಅಜ್ಜಿಯನ್ನು‌ ಠಾಣೆಗೆ‌ ಕರೆಸಿ ಮಾಂಗಲ್ಯ‌ ಸರವನ್ನು ಹಸ್ತಾಂತರ‌ ಮಾಡಿದ್ದಾರೆ.

ಕಳುವಾಗಿದ್ದ‌ ಮಾಂಗಲ್ಯ‌‌ ಸರ ಮತ್ತೆ ಸಿಕ್ಕಿದ್ದಕ್ಕೆ ಭಾವುಕಾರದ ಅಜ್ಜಿ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರ ಕಾರ್ಯವೈಖರಿಗೆ ಅಭಿನಂದನೆ‌ ಸಲ್ಲಿಸಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆರೋಪಿಗಳ ಮಾಹಿತಿ

ಕನಕಪುರ ಮೂಲದ ಶಿವರಾಜ್ ಮತ್ತು ಸುಂದರೇಶ್ ಎಂಬ ಇಬ್ಬರು ಕಳ್ಳರನ್ನು ಬಂಧಿಸಲಾಗಿದೆ.

ಈ ಹಿಂದೆ ಮಂಡ್ಯ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೇಲ್ ನಲ್ಲಿ ಹೊರ ಬಂದಿರುತ್ತಾರೆ. ಕಳ್ಳತನಕ್ಕಾಗಿಯೇ ಹೊಸ ಬೈಕ್ ಖರೀದಿಯನ್ನು ಮಾಡಿರುತ್ತಾರೆ. ಅರಳುಮಲ್ಲಿಗೆಯಲ್ಲಿ‌ ಕಳ್ಳತನ ಮಾಡಿ ಕನಕಪುರ ತಾಲೂಕಿನ ಮಠವೊಂದರಲ್ಲಿ ವಾಸ ಮಾಡುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

3 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

4 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

5 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

9 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

15 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago