ಥೇಟ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅರಳುಮಲ್ಲಿಗೆ ಗ್ರಾಮದಲ್ಲಿ ಅಜ್ಜಿಯ ಚಿನ್ನದ ಮಾಂಗಲ್ಯ ಸರ ಕದ್ದಿದ್ದ ಹಾಗೇ ಇದೇ ಆರೋಪಿಗಳು ರಾಮನಗರದಲ್ಲೂ ಸಹ ಸುಮಾರು 70 ವರ್ಷದ ವೃದ್ಧೆ ಬಳಿ ಸುಮಾರು 50 ಗ್ರಾಂ ತೂಕದ ಮಾಂಗಲ್ಯ ಸರ ಕದ್ದಿದ್ದರು.
2024ರ ಡಿ.22ರಂದು ರಾಮನಗರದ ಮುನಿಯಪ್ಪನ ದೊಡ್ಡಿಯ ಪೆಟ್ಟಿ ಅಂಗಡಿಯಲ್ಲಿ ವೃದ್ಧೆ ಮರಗಮ್ಮ(70), ತನ್ನ ಪಾಡಿಗೆ ತಾನು ಅಂಗಡಿಯಲ್ಲಿ ವ್ಯಾಪಾರ ಮಾಡಿಕೊಂಡು ಇದ್ದಳು. ಹೊಂಚು ಹಾಕಿಕೊಂಡು ಇದ್ದ ಖದೀಮರು ಅಂಗಡಿಗೆ ಬಂದು 10ರೂ. ಕೊಟ್ಟು 5 ರೂಪಾಯಿಯ ಚಾಕೊಲೆಟ್ ಪಡೆಯುತ್ತಾರೆ. ಇನ್ನುಳಿದ 5 ರೂಪಾಯಿ ವಾಪಸ್ ನೀಡಲು ವೃದ್ಧೆ ಮುಂದಾದಗ ಕಳ್ಳರು ವೃದ್ಧೆ ಕೊರಳಲ್ಲಿದ್ದ ಮಾಂಗಲ್ಯ ಸರಕ್ಕೆ ಕೈಹಾಕಿ ಕಸಿದು ಪರಾರಿಯಾಗುತ್ತಾರೆ.
ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳರ ಜಾಡುಹಿಡಿದು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗುತ್ತಾರೆ, ಸದ್ಯ ಇಬ್ಬರು ಖದೀಮರನ್ನು ಬಂಧಿಸಿ ಕದ್ದ ಚಿನ್ನದ ಸರವನ್ನು ವಶಕ್ಕೆ ಪಡೆದು ಕಳುವಾಗಿದ್ದ ಚಿನ್ನದ ಸರವನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರು ಅರಳುಮಲ್ಲಿಗೆ ಗ್ರಾಮದ ಅಜ್ಜಿಗೆ ವಾಪಸ್ ನೀಡಿರುತ್ತಾರೆ.
ಇನ್ನೂ ಹೆಚ್ಚಿನ ತನಿಖೆ ಮುಂದುವರಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು, ರಾಮಾನಗರದಲ್ಲೂ ಇದೇರೀತಿ ಕಳ್ಳತನ ಮಾಡಿರುವ ಬಗ್ಗೆ ಕಳ್ಳರಿಂದ ಬಾಯಿಬಿಡಿಸಿದ್ದಾರೆ. ಕೂಡಲೇ ರಾಮನಗರದ ಅಜ್ಜಿ ಬಳಿ ಕದ್ದಿದ್ದ ಸುಮಾರು 39 ಗ್ರಾಂ ತೂಕದ ಮಾಂಗಲ್ಯ ಸರವನ್ನೂ ವಶಕ್ಕೆ ಪಡೆದ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರು, ರಾಮನಗರದ ಮುನಿಯಪ್ಪನ ದೊಡ್ಡಿಯಿಂದ ಅಜ್ಜಿಯನ್ನು ಠಾಣೆಗೆ ಕರೆಸಿ ಮಾಂಗಲ್ಯ ಸರವನ್ನು ಹಸ್ತಾಂತರ ಮಾಡಿದ್ದಾರೆ.
ಕಳುವಾಗಿದ್ದ ಮಾಂಗಲ್ಯ ಸರ ಮತ್ತೆ ಸಿಕ್ಕಿದ್ದಕ್ಕೆ ಭಾವುಕಾರದ ಅಜ್ಜಿ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರ ಕಾರ್ಯವೈಖರಿಗೆ ಅಭಿನಂದನೆ ಸಲ್ಲಿಸಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಆರೋಪಿಗಳ ಮಾಹಿತಿ
ಕನಕಪುರ ಮೂಲದ ಶಿವರಾಜ್ ಮತ್ತು ಸುಂದರೇಶ್ ಎಂಬ ಇಬ್ಬರು ಕಳ್ಳರನ್ನು ಬಂಧಿಸಲಾಗಿದೆ.
ಈ ಹಿಂದೆ ಮಂಡ್ಯ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೇಲ್ ನಲ್ಲಿ ಹೊರ ಬಂದಿರುತ್ತಾರೆ. ಕಳ್ಳತನಕ್ಕಾಗಿಯೇ ಹೊಸ ಬೈಕ್ ಖರೀದಿಯನ್ನು ಮಾಡಿರುತ್ತಾರೆ. ಅರಳುಮಲ್ಲಿಗೆಯಲ್ಲಿ ಕಳ್ಳತನ ಮಾಡಿ ಕನಕಪುರ ತಾಲೂಕಿನ ಮಠವೊಂದರಲ್ಲಿ ವಾಸ ಮಾಡುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…