ಥೇಟ್ ಅರಳುಮಲ್ಲಿಗೆ ವೃದ್ಧೆ ಬಳಿ ಮಾಂಗಲ್ಯ ಸರ ಕದ್ದ ಹಾಗೇ ರಾಮನಗರದಲ್ಲೂ ಕೈಚಳಕ‌ ತೋರಿಸಿದ್ದ ಖದೀಮರು: ಮಾಂಗಲ್ಯ ಸರ ಜಪ್ತಿ: ವೃದ್ಧೆಗೆ ಮಾಂಗಲ್ಯ ಸರ ಹಸ್ತಾಂತರ

ಥೇಟ್ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಅರಳುಮಲ್ಲಿಗೆ ಗ್ರಾಮದಲ್ಲಿ ಅಜ್ಜಿಯ ಚಿನ್ನದ ಮಾಂಗಲ್ಯ ಸರ ಕದ್ದಿದ್ದ ಹಾಗೇ ಇದೇ ಆರೋಪಿಗಳು‌ ರಾಮನಗರದಲ್ಲೂ ಸಹ ಸುಮಾರು 70 ವರ್ಷದ ವೃದ್ಧೆ ಬಳಿ ಸುಮಾರು 50 ಗ್ರಾಂ ತೂಕದ ಮಾಂಗಲ್ಯ ಸರ ಕದ್ದಿದ್ದರು.

2024ರ ಡಿ.22ರಂದು ರಾಮನಗರದ ಮುನಿಯಪ್ಪನ ದೊಡ್ಡಿಯ ಪೆಟ್ಟಿ ಅಂಗಡಿಯಲ್ಲಿ ವೃದ್ಧೆ ಮರಗಮ್ಮ(70), ತನ್ನ ಪಾಡಿಗೆ ತಾನು ಅಂಗಡಿಯಲ್ಲಿ ವ್ಯಾಪಾರ ಮಾಡಿಕೊಂಡು ಇದ್ದಳು. ಹೊಂಚು ಹಾಕಿಕೊಂಡು ಇದ್ದ ಖದೀಮರು ಅಂಗಡಿಗೆ ಬಂದು 10ರೂ. ಕೊಟ್ಟು 5 ರೂಪಾಯಿಯ ಚಾಕೊಲೆಟ್ ಪಡೆಯುತ್ತಾರೆ. ಇನ್ನುಳಿದ 5 ರೂಪಾಯಿ ವಾಪಸ್ ನೀಡಲು ವೃದ್ಧೆ ಮುಂದಾದಗ ಕಳ್ಳರು ವೃದ್ಧೆ ಕೊರಳಲ್ಲಿದ್ದ ಮಾಂಗಲ್ಯ ಸರಕ್ಕೆ ಕೈಹಾಕಿ ಕಸಿದು ಪರಾರಿಯಾಗುತ್ತಾರೆ.

ರಾಮನಗರದಲ್ಲಿ ಕಳ್ಳತನ ಮಾಡಿಕೊಂಡು ದೊಡ್ಡಬಳ್ಳಾಪುರಕ್ಕೆ ಎಂಟ್ರಿ‌ಕೊಟ್ಟ ಕಳ್ಳರು ಅರಳುಮಲ್ಲಿಗೆ ಗ್ರಾಮದಲ್ಲಿ ಪೆಟ್ಟಿ ಅಂಗಡಿ ವೃದ್ಧೆಯನ್ನೇ ಟಾರ್ಗೆಟ್ ಮಾಡಿ‌ ಥೇಟ್ ರಾಮನಗರದಲ್ಲಿ‌ ಬಳಸಿದ ಪ್ಲ್ಯಾನನ್ನೇ ಅರಳುಮಲ್ಲಿಗೆಯಲ್ಲೂ‌ ಉಪಯೋಗಿಸಿ 2025ರ ಫೆ.21ರಂದು ವೃದ್ಧೆಯ‌ ಮಾಂಗಲ್ಯ ಸರ ಕದ್ದು ಪರಾರಿಯಾಗುತ್ತಾರೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳರ ಜಾಡು‌ಹಿಡಿದು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗುತ್ತಾರೆ, ಸದ್ಯ ಇಬ್ಬರು ಖದೀಮರನ್ನು ಬಂಧಿಸಿ ಕದ್ದ ಚಿನ್ನದ ಸರವನ್ನು ವಶಕ್ಕೆ ಪಡೆದು ಕಳುವಾಗಿದ್ದ ಚಿನ್ನದ ಸರವನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರು ಅರಳುಮಲ್ಲಿಗೆ ಗ್ರಾಮದ ಅಜ್ಜಿಗೆ ವಾಪಸ್ ನೀಡಿರುತ್ತಾರೆ.

ಇನ್ನೂ ಹೆಚ್ಚಿನ‌ ತನಿಖೆ‌ ಮುಂದುವರಿಸಿದ ದೊಡ್ಡಬಳ್ಳಾಪುರ ಗ್ರಾಮಾಂತರ‌ ಪೊಲೀಸರು, ರಾಮಾನಗರದಲ್ಲೂ ಇದೇರೀತಿ ಕಳ್ಳತನ ಮಾಡಿರುವ ಬಗ್ಗೆ ಕಳ್ಳರಿಂದ‌ ಬಾಯಿಬಿಡಿಸಿದ್ದಾರೆ. ಕೂಡಲೇ ರಾಮನಗರದ ಅಜ್ಜಿ ಬಳಿ‌ ಕದ್ದಿದ್ದ ಸುಮಾರು 39 ಗ್ರಾಂ ತೂಕದ‌ ಮಾಂಗಲ್ಯ ಸರವನ್ನೂ ವಶಕ್ಕೆ ಪಡೆದ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಅವರು, ರಾಮನಗರದ ಮುನಿಯಪ್ಪನ ದೊಡ್ಡಿಯಿಂದ ಅಜ್ಜಿಯನ್ನು‌ ಠಾಣೆಗೆ‌ ಕರೆಸಿ ಮಾಂಗಲ್ಯ‌ ಸರವನ್ನು ಹಸ್ತಾಂತರ‌ ಮಾಡಿದ್ದಾರೆ.

ಕಳುವಾಗಿದ್ದ‌ ಮಾಂಗಲ್ಯ‌‌ ಸರ ಮತ್ತೆ ಸಿಕ್ಕಿದ್ದಕ್ಕೆ ಭಾವುಕಾರದ ಅಜ್ಜಿ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರ ಕಾರ್ಯವೈಖರಿಗೆ ಅಭಿನಂದನೆ‌ ಸಲ್ಲಿಸಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆರೋಪಿಗಳ ಮಾಹಿತಿ

ಕನಕಪುರ ಮೂಲದ ಶಿವರಾಜ್ ಮತ್ತು ಸುಂದರೇಶ್ ಎಂಬ ಇಬ್ಬರು ಕಳ್ಳರನ್ನು ಬಂಧಿಸಲಾಗಿದೆ.

ಈ ಹಿಂದೆ ಮಂಡ್ಯ ಜಿಲ್ಲೆಯಲ್ಲಿ ಪ್ರಕರಣ ದಾಖಲಾಗಿತ್ತು. ಬೇಲ್ ನಲ್ಲಿ ಹೊರ ಬಂದಿರುತ್ತಾರೆ. ಕಳ್ಳತನಕ್ಕಾಗಿಯೇ ಹೊಸ ಬೈಕ್ ಖರೀದಿಯನ್ನು ಮಾಡಿರುತ್ತಾರೆ. ಅರಳುಮಲ್ಲಿಗೆಯಲ್ಲಿ‌ ಕಳ್ಳತನ ಮಾಡಿ ಕನಕಪುರ ತಾಲೂಕಿನ ಮಠವೊಂದರಲ್ಲಿ ವಾಸ ಮಾಡುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ.

Ramesh Babu

Journalist

Recent Posts

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

1 hour ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

2 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

6 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

10 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

12 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

12 hours ago