ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಟೆಸ್ಟ್, ಏಕದಿನ ಹಾಗೂ ಟಿ- ಟ್ವೆಂಟಿ ಸರಣಿಗೆ ಬಿಸಿಸಿಐ ತಂಡವನ್ನು ಪ್ರಕಟಿಸಲಾಗಿದ್ದು ಏಕದಿನ ಸರಣಿಗೆ ಕನ್ನಡಿಗ ಕೆ, ಎಲ್, ರಾಹುಲ್ ನಾಯಕತ್ವ ವಹಿಸಿದ್ದು ಟಿ- ಟ್ವೆಂಟಿ ಸರಣಿಗೆ ಸ್ಪೋಟಕ ಬ್ಯಾಟ್ಸ್ಮನ್ ಸೂರ್ಯ ಕುಮಾರ್ ಯಾದವ್ ತಂಡದ ನಾಯಕನಾಗಿ ಆಯ್ಕೆಯಾಗಿದ್ದಾರೆ.
ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದ್ದು ಭಾರತ ತಂಡದ ಖಾಯಂ ನಾಯಕ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಕೆ. ಎಲ್. ರಾಹುಲ್ ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದು ಅಂಜಿಕ್ಯಾ ರಹಾನೆಯನ್ನು ಕೈಬಿಟ್ಟು ಬುಮ್ರಾಗೆ ಉಪನಾಯಕತ್ವ ವಹಿಸಲಾಗಿದೆ.
ಮುಂದಿನ ವರ್ಷ ನಡೆಯಲಿರುವ ಟಿ- ಟ್ವೆಂಟಿ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಯುವ ಆಟಗಾರರ ಪಡೆಯನ್ನು ಪ್ರಕಟಿಸಿದ್ದು ಅನುಭವಿ ಆಲ್ ರೌಂಡರ್ ರವೀಂದ್ರ ಜಡೇಜಾ ಉಪನಾಯಕನಾಗಿದ್ದಾರೆ.
ಟೆಸ್ಟ್ ತಂಡ :- ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಅಯ್ಯರ್, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿ.ಕೀ), ಕೆ.ಎಲ್. ರಾಹುಲ್ (ವಿ.ಕೀ), ಆರ್. ಅಶ್ವಿನ್, ರವೀಂದ್ರ ಜಡೇಜಾ, ಠಾಕೂರ್, ಮೊಹಮ್ಮದ್ ಶಮಿ, ಸಿರಾಜ್, ಮುಖೇಶ್ ಕುಮಾರ್, ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ
ಟಿ- ಟ್ವೆಂಟಿ ತಂಡ:- ಸೂರ್ಯ ಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ತಿಲಕ್ ವಮಾ೯, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ರವೀಂದ್ರ ಜಡೇಜಾ (ಉಪ ನಾಯಕ), ವಾಶಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲದೀಪ್ ಯಾದವ್, ಅಶ೯ದೀಪ್ ಸಿಂಗ್, ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…
ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…
ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…