ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಮಾದರಿ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕನ್ನಡಿಗ ರಾಹುಲ್, ಸೂರ್ಯ ಕುಮಾರ್ ಯಾದವ್ ಗೆ ನಾಯಕತ್ವ !

ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಟೆಸ್ಟ್, ಏಕದಿನ ಹಾಗೂ ಟಿ- ಟ್ವೆಂಟಿ ಸರಣಿಗೆ ಬಿಸಿಸಿಐ ತಂಡವನ್ನು ಪ್ರಕಟಿಸಲಾಗಿದ್ದು ಏಕದಿನ ಸರಣಿಗೆ ಕನ್ನಡಿಗ ಕೆ, ಎಲ್, ರಾಹುಲ್ ನಾಯಕತ್ವ ವಹಿಸಿದ್ದು ಟಿ- ಟ್ವೆಂಟಿ ಸರಣಿಗೆ ಸ್ಪೋಟಕ ಬ್ಯಾಟ್ಸ್ಮನ್ ಸೂರ್ಯ ಕುಮಾರ್ ಯಾದವ್ ತಂಡದ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದ್ದು ಭಾರತ ತಂಡದ ಖಾಯಂ ನಾಯಕ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಕೆ. ಎಲ್. ರಾಹುಲ್ ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದು ಅಂಜಿಕ್ಯಾ ರಹಾನೆಯನ್ನು ಕೈಬಿಟ್ಟು ಬುಮ್ರಾಗೆ ಉಪನಾಯಕತ್ವ ವಹಿಸಲಾಗಿದೆ.

ಮುಂದಿನ ವರ್ಷ ನಡೆಯಲಿರುವ ಟಿ- ಟ್ವೆಂಟಿ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಯುವ ಆಟಗಾರರ ಪಡೆಯನ್ನು ಪ್ರಕಟಿಸಿದ್ದು ಅನುಭವಿ ಆಲ್ ರೌಂಡರ್ ರವೀಂದ್ರ ಜಡೇಜಾ ಉಪನಾಯಕನಾಗಿದ್ದಾರೆ.

ವಿಶ್ವಕಪ್ ನಲ್ಲಿ ಸ್ಥಾನ ಪಡೆಯದ ಸ್ಪಿನ್ನರ್ ಯಜುವೇಂದ್ರ ಚಹಲ್, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಆಯ್ಕೆಯಾಗಿದ್ದು ಅಭಿಮಾನಿಗಳಲ್ಲಿ ಸಂತಸ ಹೆಚ್ಚಿಸಿದೆ, ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಟಿ -ಟ್ವೆಂಟಿ ಸರಣಿಯಲ್ಲಿ ಶತಕ ಸಿಡಿಸಿದ್ದ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಮೂರು ಮಾದರಿಯಲ್ಲಿ ಸ್ಥಾನ ಪಡೆದಿದ್ದಾರೆ.

ಟೆಸ್ಟ್ ತಂಡ :- ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಅಯ್ಯರ್, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿ.ಕೀ), ಕೆ.ಎಲ್. ರಾಹುಲ್ (ವಿ.ಕೀ), ಆರ್. ಅಶ್ವಿನ್, ರವೀಂದ್ರ ಜಡೇಜಾ, ಠಾಕೂರ್, ಮೊಹಮ್ಮದ್ ಶಮಿ, ಸಿರಾಜ್, ಮುಖೇಶ್ ಕುಮಾರ್, ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ

ಏಕದಿನ ತಂಡ:- ಕೆ.ಎಲ್. ರಾಹುಲ್ (ನಾಯಕ), ಋತುರಾಜ್ ಗಾಯಕ್ವಾಡ್, ಸಾಯಿ ಸುದಶ೯ನ್, ತಿಲಕ್ ವಮಾ೯, ರಜತ್ ಪಾಟಿದರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್(ವಿ.ಕೀ) ಅಕ್ಷರ್ ಪಟೇಲ್, ವಾಶಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಚಹಲ್, ಮುಖೇಶ್ ಕುಮಾರ್, ಆವೇಶ್ ಖಾನ್, ಅಷ್೯ದೀಪ್, ದೀಪಕ್ ಚಹರ್

ಟಿ- ಟ್ವೆಂಟಿ ತಂಡ:- ಸೂರ್ಯ ಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ತಿಲಕ್ ವಮಾ೯, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ರವೀಂದ್ರ ಜಡೇಜಾ (ಉಪ ನಾಯಕ), ವಾಶಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲದೀಪ್ ಯಾದವ್, ಅಶ೯ದೀಪ್ ಸಿಂಗ್, ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

53 minutes ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

3 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

4 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

17 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

21 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago