ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಟೆಸ್ಟ್, ಏಕದಿನ ಹಾಗೂ ಟಿ- ಟ್ವೆಂಟಿ ಸರಣಿಗೆ ಬಿಸಿಸಿಐ ತಂಡವನ್ನು ಪ್ರಕಟಿಸಲಾಗಿದ್ದು ಏಕದಿನ ಸರಣಿಗೆ ಕನ್ನಡಿಗ ಕೆ, ಎಲ್, ರಾಹುಲ್ ನಾಯಕತ್ವ ವಹಿಸಿದ್ದು ಟಿ- ಟ್ವೆಂಟಿ ಸರಣಿಗೆ ಸ್ಪೋಟಕ ಬ್ಯಾಟ್ಸ್ಮನ್ ಸೂರ್ಯ ಕುಮಾರ್ ಯಾದವ್ ತಂಡದ ನಾಯಕನಾಗಿ ಆಯ್ಕೆಯಾಗಿದ್ದಾರೆ.
ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದ್ದು ಭಾರತ ತಂಡದ ಖಾಯಂ ನಾಯಕ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಕೆ. ಎಲ್. ರಾಹುಲ್ ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದು ಅಂಜಿಕ್ಯಾ ರಹಾನೆಯನ್ನು ಕೈಬಿಟ್ಟು ಬುಮ್ರಾಗೆ ಉಪನಾಯಕತ್ವ ವಹಿಸಲಾಗಿದೆ.
ಮುಂದಿನ ವರ್ಷ ನಡೆಯಲಿರುವ ಟಿ- ಟ್ವೆಂಟಿ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಯುವ ಆಟಗಾರರ ಪಡೆಯನ್ನು ಪ್ರಕಟಿಸಿದ್ದು ಅನುಭವಿ ಆಲ್ ರೌಂಡರ್ ರವೀಂದ್ರ ಜಡೇಜಾ ಉಪನಾಯಕನಾಗಿದ್ದಾರೆ.
ಟೆಸ್ಟ್ ತಂಡ :- ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಅಯ್ಯರ್, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿ.ಕೀ), ಕೆ.ಎಲ್. ರಾಹುಲ್ (ವಿ.ಕೀ), ಆರ್. ಅಶ್ವಿನ್, ರವೀಂದ್ರ ಜಡೇಜಾ, ಠಾಕೂರ್, ಮೊಹಮ್ಮದ್ ಶಮಿ, ಸಿರಾಜ್, ಮುಖೇಶ್ ಕುಮಾರ್, ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ
ಟಿ- ಟ್ವೆಂಟಿ ತಂಡ:- ಸೂರ್ಯ ಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ತಿಲಕ್ ವಮಾ೯, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ರವೀಂದ್ರ ಜಡೇಜಾ (ಉಪ ನಾಯಕ), ವಾಶಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲದೀಪ್ ಯಾದವ್, ಅಶ೯ದೀಪ್ ಸಿಂಗ್, ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…