ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಮಾದರಿ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕನ್ನಡಿಗ ರಾಹುಲ್, ಸೂರ್ಯ ಕುಮಾರ್ ಯಾದವ್ ಗೆ ನಾಯಕತ್ವ !

ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಟೆಸ್ಟ್, ಏಕದಿನ ಹಾಗೂ ಟಿ- ಟ್ವೆಂಟಿ ಸರಣಿಗೆ ಬಿಸಿಸಿಐ ತಂಡವನ್ನು ಪ್ರಕಟಿಸಲಾಗಿದ್ದು ಏಕದಿನ ಸರಣಿಗೆ ಕನ್ನಡಿಗ ಕೆ, ಎಲ್, ರಾಹುಲ್ ನಾಯಕತ್ವ ವಹಿಸಿದ್ದು ಟಿ- ಟ್ವೆಂಟಿ ಸರಣಿಗೆ ಸ್ಪೋಟಕ ಬ್ಯಾಟ್ಸ್ಮನ್ ಸೂರ್ಯ ಕುಮಾರ್ ಯಾದವ್ ತಂಡದ ನಾಯಕನಾಗಿ ಆಯ್ಕೆಯಾಗಿದ್ದಾರೆ.

ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದ್ದು ಭಾರತ ತಂಡದ ಖಾಯಂ ನಾಯಕ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಲಿದ್ದು, ಕೆ. ಎಲ್. ರಾಹುಲ್ ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ತಂಡಕ್ಕೆ ಮರಳಿದ್ದು ಅಂಜಿಕ್ಯಾ ರಹಾನೆಯನ್ನು ಕೈಬಿಟ್ಟು ಬುಮ್ರಾಗೆ ಉಪನಾಯಕತ್ವ ವಹಿಸಲಾಗಿದೆ.

ಮುಂದಿನ ವರ್ಷ ನಡೆಯಲಿರುವ ಟಿ- ಟ್ವೆಂಟಿ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಯುವ ಆಟಗಾರರ ಪಡೆಯನ್ನು ಪ್ರಕಟಿಸಿದ್ದು ಅನುಭವಿ ಆಲ್ ರೌಂಡರ್ ರವೀಂದ್ರ ಜಡೇಜಾ ಉಪನಾಯಕನಾಗಿದ್ದಾರೆ.

ವಿಶ್ವಕಪ್ ನಲ್ಲಿ ಸ್ಥಾನ ಪಡೆಯದ ಸ್ಪಿನ್ನರ್ ಯಜುವೇಂದ್ರ ಚಹಲ್, ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಸಂಜು ಸ್ಯಾಮ್ಸನ್ ಆಯ್ಕೆಯಾಗಿದ್ದು ಅಭಿಮಾನಿಗಳಲ್ಲಿ ಸಂತಸ ಹೆಚ್ಚಿಸಿದೆ, ಇತ್ತೀಚೆಗೆ ಆಸ್ಟ್ರೇಲಿಯಾ ವಿರುದ್ಧದ ಟಿ -ಟ್ವೆಂಟಿ ಸರಣಿಯಲ್ಲಿ ಶತಕ ಸಿಡಿಸಿದ್ದ ಆರಂಭಿಕ ಆಟಗಾರ ಋತುರಾಜ್ ಗಾಯಕ್ವಾಡ್ ಮೂರು ಮಾದರಿಯಲ್ಲಿ ಸ್ಥಾನ ಪಡೆದಿದ್ದಾರೆ.

ಟೆಸ್ಟ್ ತಂಡ :- ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ಅಯ್ಯರ್, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿ.ಕೀ), ಕೆ.ಎಲ್. ರಾಹುಲ್ (ವಿ.ಕೀ), ಆರ್. ಅಶ್ವಿನ್, ರವೀಂದ್ರ ಜಡೇಜಾ, ಠಾಕೂರ್, ಮೊಹಮ್ಮದ್ ಶಮಿ, ಸಿರಾಜ್, ಮುಖೇಶ್ ಕುಮಾರ್, ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ

ಏಕದಿನ ತಂಡ:- ಕೆ.ಎಲ್. ರಾಹುಲ್ (ನಾಯಕ), ಋತುರಾಜ್ ಗಾಯಕ್ವಾಡ್, ಸಾಯಿ ಸುದಶ೯ನ್, ತಿಲಕ್ ವಮಾ೯, ರಜತ್ ಪಾಟಿದರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್(ವಿ.ಕೀ) ಅಕ್ಷರ್ ಪಟೇಲ್, ವಾಶಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಚಹಲ್, ಮುಖೇಶ್ ಕುಮಾರ್, ಆವೇಶ್ ಖಾನ್, ಅಷ್೯ದೀಪ್, ದೀಪಕ್ ಚಹರ್

ಟಿ- ಟ್ವೆಂಟಿ ತಂಡ:- ಸೂರ್ಯ ಕುಮಾರ್ ಯಾದವ್ (ನಾಯಕ), ಋತುರಾಜ್ ಗಾಯಕ್ವಾಡ್, ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ತಿಲಕ್ ವಮಾ೯, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಜಿತೇಶ್ ಶರ್ಮಾ (ವಿ.ಕೀ), ಇಶಾನ್ ಕಿಶನ್ (ವಿ.ಕೀ), ರವೀಂದ್ರ ಜಡೇಜಾ (ಉಪ ನಾಯಕ), ವಾಶಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ಕುಲದೀಪ್ ಯಾದವ್, ಅಶ೯ದೀಪ್ ಸಿಂಗ್, ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹರ್

Ramesh Babu

Journalist

Recent Posts

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

27 minutes ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

5 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

7 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

10 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago