ನೆಲಮಂಗಲ ತಾಲೂಕಿನಲ್ಲಿರುವ ದಕ್ಷಿಣ ಕಾಶಿಯಂದೇ ಕರೆಯಲ್ಪಡುವ ಶಿವಗಂಗೆಯಲ್ಲಿ ಪ್ರತಿ ವರ್ಷದ ಮಕರ ಸಂಕ್ರಾತಿಯಂದು ತೀರ್ಥೋದ್ಭವವಾಗಿದೆ. ಬೆಟ್ಟದ ತುತ್ತತುದಿ ಸುಮಾರು 4,547 ಅಡಿ ಮೇಲೆ ಇಂದು ಬೆಳಿಗ್ಗೆ 8.25 ಗಂಟೆಗೆ ಗಂಗೋತ್ಪತ್ತಿಯಾಗಿದ್ದು, ಪ್ರಕೃತಿಕ ವಿಸ್ಮಯವನ್ನ ಭಕ್ತರು ಕಣ್ತುಂಬಿಕೊಂಡಿದ್ದಾರೆ.
ಶಿವಗಂಗೆ ಕ್ಷೇತ್ರದಲ್ಲಿ ಪ್ರತಿವರ್ಷ ಮಕರ ಸಂಕ್ರಮಣದಂದು ನಡೆಯುವ ಗಂಗಾಧರೇಶ್ವರ ಸ್ವಾಮಿಯ ಗಿರಿಜಾ ಕಲ್ಯಾಣ ಮಹೋತ್ಸವ ಅದ್ಧೂರಿಯಾಗಿ ನೆರವೇರಿತು. ತೀರ್ಥೋದ್ಭವವಾದ ತೀರ್ಥ ತಂದು ಗಿರಿಜಾ ಕಲ್ಯಾಣವನ್ನು ನೆರವೇರಿಸಲಾಯಿತು.
ಒಬ್ಬರು ಡಿವೈಎಸ್ಪಿ, ನಾಲ್ವರು ಅರಕ್ಷಕ ನಿರೀಕ್ಷಕರು, 8 ಮಂದಿ ಅರಕ್ಷಕ ಉಪನಿರೀಕ್ಷಕರು ಸೇರಿದಂತೆ 200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.
ಗಿರಿಜಾ ಕಲ್ಯಾಣ ಮಹೋತ್ಸವದಲ್ಲಿ ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಸ್ಥಳೀಯ ಶಾಸಕ ಎನ್.ಶ್ರೀನಿವಾಸ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…