ದಕ್ಷಿಣ ಕಾಶಿ ಶಿವಗಂಗೆ ಬೆಟ್ಟದಲ್ಲಿ ತೀರ್ಥೋದ್ಭವ: ವಿಸ್ಮಯ‌ ಕಣ್ತುಂಬಿಕೊಂಡ ಭಕ್ತಗಣ

ನೆಲಮಂಗಲ ತಾಲೂಕಿನಲ್ಲಿರುವ ದಕ್ಷಿಣ ಕಾಶಿಯಂದೇ‌ ಕರೆಯಲ್ಪಡುವ ಶಿವಗಂಗೆಯಲ್ಲಿ ಪ್ರತಿ ವರ್ಷದ ಮಕರ ಸಂಕ್ರಾತಿಯಂದು ತೀರ್ಥೋದ್ಭವವಾಗಿದೆ. ಬೆಟ್ಟದ ತುತ್ತತುದಿ ಸುಮಾರು 4,547 ಅಡಿ ಮೇಲೆ ಇಂದು ಬೆಳಿಗ್ಗೆ 8.25 ಗಂಟೆಗೆ ಗಂಗೋತ್ಪತ್ತಿಯಾಗಿದ್ದು, ಪ್ರಕೃತಿಕ ವಿಸ್ಮಯವನ್ನ ಭಕ್ತರು ಕಣ್ತುಂಬಿಕೊಂಡಿದ್ದಾರೆ.

ಶಿವಗಂಗೆ ಕ್ಷೇತ್ರದಲ್ಲಿ ಪ್ರತಿವರ್ಷ ಮಕರ ಸಂಕ್ರಮಣದಂದು ನಡೆಯುವ ಗಂಗಾಧರೇಶ್ವರ ಸ್ವಾಮಿಯ ಗಿರಿಜಾ ಕಲ್ಯಾಣ ಮಹೋತ್ಸವ ಅದ್ಧೂರಿಯಾಗಿ ನೆರವೇರಿತು. ತೀರ್ಥೋದ್ಭವವಾದ ತೀರ್ಥ ತಂದು ಗಿರಿಜಾ ಕಲ್ಯಾಣವನ್ನು ನೆರವೇರಿಸಲಾಯಿತು.

ಮಕರ ಸಂಕ್ರಾತಿಯಂದು ನಡೆಯುವ ಗಿರಿದಾ ಕಲ್ಯಾಣ ಮಹೋತ್ಸವ ನೋಡಲು ಶಿವಗಂಗಾ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದಾರೆ, ಬಂದಂತಹ ಭಕ್ತಾದಿಗಳಿಗೆ ಅನ್ನದಾಸೋಹವನ್ನು ಏರ್ಪಡಿಸಲಾಗಿದೆ. ಇಂದು ಶಿವಗಂಗೆ ಬೆಟ್ಟಕ್ಕೆ 50 ಸಾವಿರಕ್ಕೂ ಹೆಚ್ಚು ಜನರು ಬರುವ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಒಬ್ಬರು ಡಿವೈಎಸ್ಪಿ, ನಾಲ್ವರು ಅರಕ್ಷಕ ನಿರೀಕ್ಷಕರು, 8 ಮಂದಿ ಅರಕ್ಷಕ ಉಪನಿರೀಕ್ಷಕರು ಸೇರಿದಂತೆ 200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.

ಗಿರಿಜಾ ಕಲ್ಯಾಣ ಮಹೋತ್ಸವದಲ್ಲಿ ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಸ್ಥಳೀಯ ಶಾಸಕ ಎನ್.ಶ್ರೀನಿವಾಸ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

45 seconds ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

7 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

8 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

23 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago