ದಕ್ಷಿಣ ಕಾಶಿ ಶಿವಗಂಗೆ ಬೆಟ್ಟದಲ್ಲಿ ತೀರ್ಥೋದ್ಭವ: ವಿಸ್ಮಯ‌ ಕಣ್ತುಂಬಿಕೊಂಡ ಭಕ್ತಗಣ

ನೆಲಮಂಗಲ ತಾಲೂಕಿನಲ್ಲಿರುವ ದಕ್ಷಿಣ ಕಾಶಿಯಂದೇ‌ ಕರೆಯಲ್ಪಡುವ ಶಿವಗಂಗೆಯಲ್ಲಿ ಪ್ರತಿ ವರ್ಷದ ಮಕರ ಸಂಕ್ರಾತಿಯಂದು ತೀರ್ಥೋದ್ಭವವಾಗಿದೆ. ಬೆಟ್ಟದ ತುತ್ತತುದಿ ಸುಮಾರು 4,547 ಅಡಿ ಮೇಲೆ ಇಂದು ಬೆಳಿಗ್ಗೆ 8.25 ಗಂಟೆಗೆ ಗಂಗೋತ್ಪತ್ತಿಯಾಗಿದ್ದು, ಪ್ರಕೃತಿಕ ವಿಸ್ಮಯವನ್ನ ಭಕ್ತರು ಕಣ್ತುಂಬಿಕೊಂಡಿದ್ದಾರೆ.

ಶಿವಗಂಗೆ ಕ್ಷೇತ್ರದಲ್ಲಿ ಪ್ರತಿವರ್ಷ ಮಕರ ಸಂಕ್ರಮಣದಂದು ನಡೆಯುವ ಗಂಗಾಧರೇಶ್ವರ ಸ್ವಾಮಿಯ ಗಿರಿಜಾ ಕಲ್ಯಾಣ ಮಹೋತ್ಸವ ಅದ್ಧೂರಿಯಾಗಿ ನೆರವೇರಿತು. ತೀರ್ಥೋದ್ಭವವಾದ ತೀರ್ಥ ತಂದು ಗಿರಿಜಾ ಕಲ್ಯಾಣವನ್ನು ನೆರವೇರಿಸಲಾಯಿತು.

ಮಕರ ಸಂಕ್ರಾತಿಯಂದು ನಡೆಯುವ ಗಿರಿದಾ ಕಲ್ಯಾಣ ಮಹೋತ್ಸವ ನೋಡಲು ಶಿವಗಂಗಾ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದಾರೆ, ಬಂದಂತಹ ಭಕ್ತಾದಿಗಳಿಗೆ ಅನ್ನದಾಸೋಹವನ್ನು ಏರ್ಪಡಿಸಲಾಗಿದೆ. ಇಂದು ಶಿವಗಂಗೆ ಬೆಟ್ಟಕ್ಕೆ 50 ಸಾವಿರಕ್ಕೂ ಹೆಚ್ಚು ಜನರು ಬರುವ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಒಬ್ಬರು ಡಿವೈಎಸ್ಪಿ, ನಾಲ್ವರು ಅರಕ್ಷಕ ನಿರೀಕ್ಷಕರು, 8 ಮಂದಿ ಅರಕ್ಷಕ ಉಪನಿರೀಕ್ಷಕರು ಸೇರಿದಂತೆ 200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.

ಗಿರಿಜಾ ಕಲ್ಯಾಣ ಮಹೋತ್ಸವದಲ್ಲಿ ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಸ್ಥಳೀಯ ಶಾಸಕ ಎನ್.ಶ್ರೀನಿವಾಸ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

2 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

14 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

14 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

15 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

18 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago