ದಕ್ಷಿಣ ಕಾಶಿ ಶಿವಗಂಗೆ ಬೆಟ್ಟದಲ್ಲಿ ತೀರ್ಥೋದ್ಭವ: ವಿಸ್ಮಯ‌ ಕಣ್ತುಂಬಿಕೊಂಡ ಭಕ್ತಗಣ

ನೆಲಮಂಗಲ ತಾಲೂಕಿನಲ್ಲಿರುವ ದಕ್ಷಿಣ ಕಾಶಿಯಂದೇ‌ ಕರೆಯಲ್ಪಡುವ ಶಿವಗಂಗೆಯಲ್ಲಿ ಪ್ರತಿ ವರ್ಷದ ಮಕರ ಸಂಕ್ರಾತಿಯಂದು ತೀರ್ಥೋದ್ಭವವಾಗಿದೆ. ಬೆಟ್ಟದ ತುತ್ತತುದಿ ಸುಮಾರು 4,547 ಅಡಿ ಮೇಲೆ ಇಂದು ಬೆಳಿಗ್ಗೆ 8.25 ಗಂಟೆಗೆ ಗಂಗೋತ್ಪತ್ತಿಯಾಗಿದ್ದು, ಪ್ರಕೃತಿಕ ವಿಸ್ಮಯವನ್ನ ಭಕ್ತರು ಕಣ್ತುಂಬಿಕೊಂಡಿದ್ದಾರೆ.

ಶಿವಗಂಗೆ ಕ್ಷೇತ್ರದಲ್ಲಿ ಪ್ರತಿವರ್ಷ ಮಕರ ಸಂಕ್ರಮಣದಂದು ನಡೆಯುವ ಗಂಗಾಧರೇಶ್ವರ ಸ್ವಾಮಿಯ ಗಿರಿಜಾ ಕಲ್ಯಾಣ ಮಹೋತ್ಸವ ಅದ್ಧೂರಿಯಾಗಿ ನೆರವೇರಿತು. ತೀರ್ಥೋದ್ಭವವಾದ ತೀರ್ಥ ತಂದು ಗಿರಿಜಾ ಕಲ್ಯಾಣವನ್ನು ನೆರವೇರಿಸಲಾಯಿತು.

ಮಕರ ಸಂಕ್ರಾತಿಯಂದು ನಡೆಯುವ ಗಿರಿದಾ ಕಲ್ಯಾಣ ಮಹೋತ್ಸವ ನೋಡಲು ಶಿವಗಂಗಾ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದಾರೆ, ಬಂದಂತಹ ಭಕ್ತಾದಿಗಳಿಗೆ ಅನ್ನದಾಸೋಹವನ್ನು ಏರ್ಪಡಿಸಲಾಗಿದೆ. ಇಂದು ಶಿವಗಂಗೆ ಬೆಟ್ಟಕ್ಕೆ 50 ಸಾವಿರಕ್ಕೂ ಹೆಚ್ಚು ಜನರು ಬರುವ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಒಬ್ಬರು ಡಿವೈಎಸ್ಪಿ, ನಾಲ್ವರು ಅರಕ್ಷಕ ನಿರೀಕ್ಷಕರು, 8 ಮಂದಿ ಅರಕ್ಷಕ ಉಪನಿರೀಕ್ಷಕರು ಸೇರಿದಂತೆ 200ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ.

ಗಿರಿಜಾ ಕಲ್ಯಾಣ ಮಹೋತ್ಸವದಲ್ಲಿ ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಸ್ಥಳೀಯ ಶಾಸಕ ಎನ್.ಶ್ರೀನಿವಾಸ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

Ramesh Babu

Journalist

Recent Posts

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

6 hours ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

7 hours ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

19 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

21 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

21 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

22 hours ago