ದಟ್ಟ ಅರಣ್ಯದಲ್ಲಿ ಪತ್ನಿಯನ್ನು ಕಬ್ಬಿಣದ ಸರಪಳಿಯಿಂದ ಮರಕ್ಕೆ ಕಟ್ಟಿ ಹಾಕಿ ಪರಾರಿಯಾದ ಪಾಪಿ ಗಂಡ: ಸುಮಾರು 40ದಿನಗಳಿಂದ ಊಟ ನೀರಿಲ್ಲದೆ ವನವಾಸ ಅನುಭವಿಸಿದ 50 ವರ್ಷದ ಮಹಿಳೆ

ಪತಿ ತನ್ನ ಪತ್ನಿಯನ್ನು ದಟ್ಟ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು‌ ಹೋಗಿ ಕಬ್ಬಿಣದ ಸರಪಳಿಯಿಂದ ಮರಕ್ಕೆ ಕಟ್ಟಿಹಾಕಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ.

ಹೀಗೆ ಸುಮಾರು 40 ದಿನಗಳ ಕಾಲ ನೀರು, ಆಹಾರವಿಲ್ಲದೆ ಕಾಡಿನಲ್ಲಿ‌ ಒಂಟಿಯಾಗಿ ಬಂಧಿಸಲ್ಪಟ್ಟಿದ್ದಾಳೆ.‌

ಮುಂಬೈನಿಂದ 540 ಕಿ.ಮೀ ದೂರದಲ್ಲಿರುವ ಸಿಂಧುದುರ್ಗ ಅರಣ್ಯ ಪ್ರದೇಶದಲ್ಲಿ ಅಮೆರಿಕದ ಮಹಿಳೆ ಲಿಲಿತಾ ಕಾಯಿ (50), ಗಂಡನಿಂದ ಬಂಧಿಸಲ್ಪಟ್ಟ ಮಹಿಳೆ. ಅದೃಷ್ಟವಶಾತ್ ಸಿಂಧುದುರ್ಗದ ಸಾವಂತವಾಡಿ ತಾಲೂಕಿನ ಸ್ಥಳೀಯರೊಬ್ಬರು ಶನಿವಾರ ತಮ್ಮ ಕುರಿ ಮತ್ತು ಹಸುಗಳನ್ನು ಅರಣ್ಯ ಪ್ರದೇಶಕ್ಕೆ ಕೊಂಡೊಯ್ದಿದ್ದಾರೆ. ಆಗ ಅಲ್ಲಿ ಆತಂಕಕಾರಿ ದೃಶ್ಯ ಕಂಡು ಭಯಭೀತರಾಗಿದ್ದಾರೆ.

ಆತಂಕಕಾರಿ ದೃಶ್ಯ ಏನಂದರೆ ಮಧ್ಯವಯಸ್ಸಿನ ಮಹಿಳೆಯೊಬ್ಬರು ಕಬ್ಬಿಣದ ಸಂಕೋಲೆಯಿಂದ ಮರಕ್ಕೆ ಕಟ್ಟಿ ಹಾಕಿರುವ ಸ್ಥಿತಿಯಲ್ಲಿ ಕಂಡುಬಂದಿದೆ. ಇದನ್ನು ಕಂಡು ಗಾಬರಿಗೊಂಡ ವ್ಯಕ್ತಿ ತಕ್ಷಣ ಬಂದಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಆಕೆಯನ್ನು ರಕ್ಷಿಸಲು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಪೊಲೀಸರು ಆಕೆಯಿಂದ ಅಮೆರಿಕದ ಪಾಸ್‌ಪೋರ್ಟ್ ಮತ್ತು ತಮಿಳುನಾಡು ವಿಳಾಸವಿರುವ ಆಧಾರ್ ಕಾರ್ಡ್ ಪತ್ತೆ ಮಾಡಿ ಸಂತ್ರಸ್ತೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಲಲಿತಾ ಕಯಿ ಎಂಬ 50 ವರ್ಷದ ಯುನೈಟೆಡ್ ಸ್ಟೇಟ್ಸ್ ಪ್ರಜೆಯಾಗಿದ್ದು, ತಮಿಳುನಾಡಿನ ವ್ಯಕ್ತಿಯನ್ನು ಮದುವೆಯಾಗಿರುವುದಾಗಿ ಹೇಳಿಕೊಂಡ ಮಹಿಳೆ ಸುಮಾರು ಒಂದು ದಶಕದಿಂದ ಭಾರತದಲ್ಲಿ ವಾಸಿಸುತ್ತಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಅವಳ ಬ್ಯಾಗ್ ಅವಳ ಬಳಿ ಇತ್ತು ಮತ್ತು ಅದರಲ್ಲಿ ಅವಳ ಯುಎಸ್ ಪಾಸ್‌ಪೋರ್ಟ್ ಮತ್ತು ಅವಳ ಆಧಾರ್ ಕಾರ್ಡ್‌ನ ಫೋಟೋಕಾಪಿಯಂತಹ ಎಲ್ಲಾ ವೈಯಕ್ತಿಕ ಗುರುತಿನ ದಾಖಲೆಗಳಿವೆ” ಎಂದು ತನಿಖಾ ತಂಡದ ಭಾಗವಾಗಿರುವ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಇದು ರೈನ್‌ಕೋಟ್ ಮತ್ತು ಆಹಾರ ಪದಾರ್ಥಗಳನ್ನು ಸಹ ಒಳಗೊಂಡಿದೆ.”

ಮಹಿಳೆ ಅರಣ್ಯ ಪ್ರದೇಶಕ್ಕೆ ಹೇಗೆ ಬಂದಳು ಮತ್ತು ಆಕೆಯ ಕಾಲನ್ನು ಮರಕ್ಕೆ ಬಿಗಿದು ಬಿಟ್ಟು ಹೋದವರು ಯಾರು ಎಂಬುದನ್ನು ಕಂಡುಹಿಡಿಯಲು ಸಿಂಧುದುರ್ಗ ಪೊಲೀಸರು ಐದು ತಂಡಗಳನ್ನು ರಚಿಸಿದ್ದಾರೆ.  ಆಸ್ಪತ್ರೆಯಲ್ಲಿದ್ದಾಗ, ಮಹಿಳೆ ಪೊಲೀಸರಿಗೆ ತನ್ನ ಬಗ್ಗೆ ಮಾಹಿತಿ ನೀಡಿ ಟಿಪ್ಪಣಿ ಬರೆದು, ತನ್ನ ಪತಿ ತನ್ನನ್ನು ಮರಕ್ಕೆ ಸಂಕೋಲೆ ಹಾಕಿದ್ದಾನೆ ಮತ್ತು 40 ದಿನಗಳಿಂದ ಕಾಡಿನಲ್ಲಿ ಆಹಾರ ಮತ್ತು ನೀರಿಲ್ಲದೆ ವಾಸಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.

“ಅಕೆಯ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ.  ಆದರೆ, ಹಸಿವು ಮತ್ತು ನಿರ್ಜಲೀಕರಣದಿಂದಾಗಿ ಆಕೆ ಮಾತನಾಡುವ ಸ್ಥಿತಿಯಲ್ಲಿಲ್ಲದ ಕಾರಣ ನಾವು ಆಕೆಯ ಹೇಳಿಕೆಯನ್ನು ದಾಖಲಿಸಲು ಸಾಧ್ಯವಾಗಲಿಲ್ಲ ಎಂದು ಸ್ಥಳೀಯ ಅಪರಾಧ ವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ಹೇಮಚಂದ್ರ ಖೋಪಡೆ ತಿಳಿಸಿದ್ದಾರೆ.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

5 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

6 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

7 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

17 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

17 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

20 hours ago