ದಟ್ಟ ಅರಣ್ಯದಲ್ಲಿ ಪತ್ನಿಯನ್ನು ಕಬ್ಬಿಣದ ಸರಪಳಿಯಿಂದ ಮರಕ್ಕೆ ಕಟ್ಟಿ ಹಾಕಿ ಪರಾರಿಯಾದ ಪಾಪಿ ಗಂಡ: ಸುಮಾರು 40ದಿನಗಳಿಂದ ಊಟ ನೀರಿಲ್ಲದೆ ವನವಾಸ ಅನುಭವಿಸಿದ 50 ವರ್ಷದ ಮಹಿಳೆ

ಪತಿ ತನ್ನ ಪತ್ನಿಯನ್ನು ದಟ್ಟ ಅರಣ್ಯ ಪ್ರದೇಶಕ್ಕೆ ಕರೆದುಕೊಂಡು‌ ಹೋಗಿ ಕಬ್ಬಿಣದ ಸರಪಳಿಯಿಂದ ಮರಕ್ಕೆ ಕಟ್ಟಿಹಾಕಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ.

ಹೀಗೆ ಸುಮಾರು 40 ದಿನಗಳ ಕಾಲ ನೀರು, ಆಹಾರವಿಲ್ಲದೆ ಕಾಡಿನಲ್ಲಿ‌ ಒಂಟಿಯಾಗಿ ಬಂಧಿಸಲ್ಪಟ್ಟಿದ್ದಾಳೆ.‌

ಮುಂಬೈನಿಂದ 540 ಕಿ.ಮೀ ದೂರದಲ್ಲಿರುವ ಸಿಂಧುದುರ್ಗ ಅರಣ್ಯ ಪ್ರದೇಶದಲ್ಲಿ ಅಮೆರಿಕದ ಮಹಿಳೆ ಲಿಲಿತಾ ಕಾಯಿ (50), ಗಂಡನಿಂದ ಬಂಧಿಸಲ್ಪಟ್ಟ ಮಹಿಳೆ. ಅದೃಷ್ಟವಶಾತ್ ಸಿಂಧುದುರ್ಗದ ಸಾವಂತವಾಡಿ ತಾಲೂಕಿನ ಸ್ಥಳೀಯರೊಬ್ಬರು ಶನಿವಾರ ತಮ್ಮ ಕುರಿ ಮತ್ತು ಹಸುಗಳನ್ನು ಅರಣ್ಯ ಪ್ರದೇಶಕ್ಕೆ ಕೊಂಡೊಯ್ದಿದ್ದಾರೆ. ಆಗ ಅಲ್ಲಿ ಆತಂಕಕಾರಿ ದೃಶ್ಯ ಕಂಡು ಭಯಭೀತರಾಗಿದ್ದಾರೆ.

ಆತಂಕಕಾರಿ ದೃಶ್ಯ ಏನಂದರೆ ಮಧ್ಯವಯಸ್ಸಿನ ಮಹಿಳೆಯೊಬ್ಬರು ಕಬ್ಬಿಣದ ಸಂಕೋಲೆಯಿಂದ ಮರಕ್ಕೆ ಕಟ್ಟಿ ಹಾಕಿರುವ ಸ್ಥಿತಿಯಲ್ಲಿ ಕಂಡುಬಂದಿದೆ. ಇದನ್ನು ಕಂಡು ಗಾಬರಿಗೊಂಡ ವ್ಯಕ್ತಿ ತಕ್ಷಣ ಬಂದಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಆಕೆಯನ್ನು ರಕ್ಷಿಸಲು ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಪೊಲೀಸರು ಆಕೆಯಿಂದ ಅಮೆರಿಕದ ಪಾಸ್‌ಪೋರ್ಟ್ ಮತ್ತು ತಮಿಳುನಾಡು ವಿಳಾಸವಿರುವ ಆಧಾರ್ ಕಾರ್ಡ್ ಪತ್ತೆ ಮಾಡಿ ಸಂತ್ರಸ್ತೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಲಲಿತಾ ಕಯಿ ಎಂಬ 50 ವರ್ಷದ ಯುನೈಟೆಡ್ ಸ್ಟೇಟ್ಸ್ ಪ್ರಜೆಯಾಗಿದ್ದು, ತಮಿಳುನಾಡಿನ ವ್ಯಕ್ತಿಯನ್ನು ಮದುವೆಯಾಗಿರುವುದಾಗಿ ಹೇಳಿಕೊಂಡ ಮಹಿಳೆ ಸುಮಾರು ಒಂದು ದಶಕದಿಂದ ಭಾರತದಲ್ಲಿ ವಾಸಿಸುತ್ತಿದ್ದಾಳೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಅವಳ ಬ್ಯಾಗ್ ಅವಳ ಬಳಿ ಇತ್ತು ಮತ್ತು ಅದರಲ್ಲಿ ಅವಳ ಯುಎಸ್ ಪಾಸ್‌ಪೋರ್ಟ್ ಮತ್ತು ಅವಳ ಆಧಾರ್ ಕಾರ್ಡ್‌ನ ಫೋಟೋಕಾಪಿಯಂತಹ ಎಲ್ಲಾ ವೈಯಕ್ತಿಕ ಗುರುತಿನ ದಾಖಲೆಗಳಿವೆ” ಎಂದು ತನಿಖಾ ತಂಡದ ಭಾಗವಾಗಿರುವ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. “ಇದು ರೈನ್‌ಕೋಟ್ ಮತ್ತು ಆಹಾರ ಪದಾರ್ಥಗಳನ್ನು ಸಹ ಒಳಗೊಂಡಿದೆ.”

ಮಹಿಳೆ ಅರಣ್ಯ ಪ್ರದೇಶಕ್ಕೆ ಹೇಗೆ ಬಂದಳು ಮತ್ತು ಆಕೆಯ ಕಾಲನ್ನು ಮರಕ್ಕೆ ಬಿಗಿದು ಬಿಟ್ಟು ಹೋದವರು ಯಾರು ಎಂಬುದನ್ನು ಕಂಡುಹಿಡಿಯಲು ಸಿಂಧುದುರ್ಗ ಪೊಲೀಸರು ಐದು ತಂಡಗಳನ್ನು ರಚಿಸಿದ್ದಾರೆ.  ಆಸ್ಪತ್ರೆಯಲ್ಲಿದ್ದಾಗ, ಮಹಿಳೆ ಪೊಲೀಸರಿಗೆ ತನ್ನ ಬಗ್ಗೆ ಮಾಹಿತಿ ನೀಡಿ ಟಿಪ್ಪಣಿ ಬರೆದು, ತನ್ನ ಪತಿ ತನ್ನನ್ನು ಮರಕ್ಕೆ ಸಂಕೋಲೆ ಹಾಕಿದ್ದಾನೆ ಮತ್ತು 40 ದಿನಗಳಿಂದ ಕಾಡಿನಲ್ಲಿ ಆಹಾರ ಮತ್ತು ನೀರಿಲ್ಲದೆ ವಾಸಿಸುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾಳೆ.

“ಅಕೆಯ ಮೇಲೆ ಯಾವುದೇ ಗಾಯದ ಗುರುತುಗಳಿಲ್ಲ.  ಆದರೆ, ಹಸಿವು ಮತ್ತು ನಿರ್ಜಲೀಕರಣದಿಂದಾಗಿ ಆಕೆ ಮಾತನಾಡುವ ಸ್ಥಿತಿಯಲ್ಲಿಲ್ಲದ ಕಾರಣ ನಾವು ಆಕೆಯ ಹೇಳಿಕೆಯನ್ನು ದಾಖಲಿಸಲು ಸಾಧ್ಯವಾಗಲಿಲ್ಲ ಎಂದು ಸ್ಥಳೀಯ ಅಪರಾಧ ವಿಭಾಗದ ಪೊಲೀಸ್ ಇನ್ಸ್‌ಪೆಕ್ಟರ್ ಹೇಮಚಂದ್ರ ಖೋಪಡೆ ತಿಳಿಸಿದ್ದಾರೆ.

Ramesh Babu

Journalist

Recent Posts

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ: ಹೆಲ್ಮೆಟ್ ಧರಿಸದ ಕಾರಣ ಬೈಕ್ ಸವಾರ ದುರ್ಮರಣ

ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…

19 hours ago

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರ ಸಾವು ಪ್ರಕರಣ: ಕತ್ತಲಲ್ಲಿ ಪ್ರಯಾಣಿಸುತ್ತಿದ್ದವರ ಬದುಕಲ್ಲಿ ಶಾಶ್ವತ ಕತ್ತಲು ಮೂಡಿಸಿದ ಜವರಾಯ: ಎಚ್ಚೆತ್ತ ನಗರಸಭೆ ಬೀದಿ ದೀಪ ಅಳವಡಿಕೆ

ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…

21 hours ago

ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ…….

ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…

1 day ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

2 days ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

2 days ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

3 days ago