ದಟ್ಟ ಮಂಜು: ಮೈಕೊರೆಯುವ ಚಳಿಗೆ ಗಡಗಡ ನಡುಗಿದ ಜನ: ಆಕಾಶ ಹಾಗೂ ಭೂಮಿ ಒಂದೇ ಎಂಬಂತೆ ಕಂಡ ಮುಸುಕಿದ ವಾತಾವರಣ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಇಂದು ಮುಂಜಾನೆ ದಟ್ಟವಾದ ಮಂಜಿನಿಂದ ಮುಸುಕಿದ ವಾತಾವರಣ ನಿರ್ಮಾಣವಾಗಿದ್ದ ಪರಿಣಾಮ ಜನರು ಕೊರೆವ ಚಳಿಗೆ ಗಢಗಢ ನಡುಗಿದರು.

ತಾಲೂಕಿನಾದ್ಯಂತ ವಿಪರೀತ ಮಂಜು ಆವರಿಸಿದ್ದ ಹಿನ್ನೆಲೆಯಲ್ಲಿ ರಸ್ತೆ, ಮನೆಗಳು ಕಾಣದಂತಾಗಿತ್ತು. ನೋಡುಗರಿಗೆ ಆಕಾಶ ಹಾಗೂ ಭೂಮಿ ಒಂದೇ ಎಂಬಂತೆ ಭಾಸವಾಯಿತು. ಇದರಿಂದ ವಾಹನಗಳು ಹೆಡ್‌ಲೈಟ್ ಹಾಕಿಕೊಂಡು ನಿಧಾನಗತಿಯಲ್ಲಿ ಸಂಚರಿಸಿದವು. ಜನರು ಚಳಿಯಿಂದ ಬೆಚ್ಚನೆಯ ಉಡುಪುಗಳನ್ನು ಧರಿಸುವಂತಾಯಿತು. ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕರು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಮಂಜಿನ ನಡುವೆಯೇ ತೆರಳಿದರು.

ಕೊರೆಯುವ ಚಳಿಯಲ್ಲಿಯೇ ಮನೆಮನೆಗೆ ಹಾಲು ಹಾಗೂ ಪತ್ರಿಕೆ ತಲುಪಿಸುವ ಹುಡುಗರು ಎಂದಿನಂತೆ ತಮ್ಮ ಕಾರ್ಯನಿರ್ವಹಿಸಿದರು. ಸೂರ್ಯ ಉದಯಿಸಿ ಬೆಚ್ಚನೆಯ ಕಿರಣಗಳನ್ನು ಯಾವಾಗ ಹೊರಸೂಸಿಸುತ್ತಾನೆ ಎಂದು‌‌ ಜನ ಕಾದುಕುಳಿತ್ತಿದ್ದರು.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

2 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

7 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

7 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

12 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

23 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

24 hours ago