Categories: ಲೇಖನ

ದಯವಿಟ್ಟು ನಿಮ್ಮ ಕುಟುಂಬದ ಜೊತೆ ಸಮಾಜದ ಬಗ್ಗೆಯೂ ಸ್ವಲ್ಪ ಯೋಚಿಸಿ

” ಮನುಷ್ಯ ಇತರರ ಒಳ್ಳೆಯದಕ್ಕಾಗಿ ಎಷ್ಟು ದುಡಿಯುತ್ತಾನೋ ಅಷ್ಟು ದೊಡ್ಡವನಾಗುತ್ತಾನೆ…….. ”

ಮಹಾತ್ಮ ಗಾಂಧಿ……

ಸಾಮಾನ್ಯವಾಗಿ ಭಾರತೀಯ ಸಮಾಜದ ಕೌಟುಂಬಿಕ ವ್ಯವಸ್ಥೆಯಲ್ಲಿ ಬಹುತೇಕ ವ್ಯಕ್ತಿಗಳು ದುಡಿಯುವುದು, ಬದುಕುವುದು, ಮಡಿಯುವುದು ತನ್ನ ತಂದೆ ತಾಯಿ ಗಂಡ ಹೆಂಡತಿ ಮಕ್ಕಳಿಗಾಗಿ. ಕೆಲವರಂತು ತನ್ನ ಮುಂದಿನ ಹಲವು ಪೀಳಿಗೆಗೆ ಆಗುವಷ್ಟು ಹಣ ಮಾಡಲು ಪ್ರಯತ್ನಿಸುತ್ತಾರೆ……..

ಆದರೆ ದುರಂತವೆಂದರೆ, ಸಾಮಾನ್ಯವಾಗಿ ತನ್ನವರಿಗಾಗಿ ಅಷ್ಟು ದೊಡ್ಡ ಹಣ ಮಾಡಿದ್ದರೂ ಅವರ ಬಗ್ಗೆ ಹತ್ತಿದವರಿಗೆ ಇನ್ನೂ ಮಾಡಬೇಕಿತ್ತು ಎಂಬ ಅಸಮಾಧಾನ ಅತೃಪ್ತಿ ಇರುತ್ತದೆ. ಕೆಲವು ಸಂದರ್ಭಗಳಲ್ಲಿ ಅವರ ಆಸ್ತಿ ಸಂಪಾದನೆಯ ಸಾಧನೆಯ ಬಗ್ಗೆ ಹೆಮ್ಮೆ ಇದ್ದರೂ ಒಂದೆರಡು ಪೀಳಿಗೆಯ ನಂತರ ಅವರ ಹೆಸರನ್ನೇ ಮರೆಯಲಾಗುತ್ತದೆ.

ಆದರೆ ಗೌತಮ ಬುದ್ಧ, ಮಹಾವೀರ, ಬಸವಣ್ಣ, ವಿವೇಕಾನಂದ, ಮಹಾತ್ಮ ಗಾಂಧಿ, ಬಾಬಾ ಸಾಹೇಬ್ ಅಂಬೇಡ್ಕರ್ ಮುಂತಾದ ಅನೇಕ ಮಹತ್ವದ ವ್ಯಕ್ತಿಗಳು ತನ್ನ ಮನೆಯವರಿಗಾಗಿ ಹೆಚ್ಚಾಗಿ ಏನನ್ನೂ ಮಾಡಲಿಲ್ಲ. ಆದರೆ ನಾವುಗಳು ಮತ್ತು ಇಡೀ ದೇಶ ಈಗಲೂ ಅವರನ್ನು ನೆನಪಿಸಿಕೊಳ್ಳುತ್ತದೆ ಮತ್ತು ಅವರ ಹುಟ್ಟು ಹಬ್ಬವನ್ನು ಅತ್ಯಂತ ಅಭಿಮಾನದಿಂದ ಆಚರಿಸಲಾಗುತ್ತದೆ……….

ಈ ಹಿನ್ನೆಲೆಯಲ್ಲಿ ಮಹಾತ್ಮ ಗಾಂಧಿಯವರ ಅನುಭವದ ಹೇಳಿಕೆಯನ್ನು ಗಮನಿಸಬೇಕು ಮತ್ತು ಅರ್ಥೈಸಬೇಕು….

” ಪರೋಪಕಾರಂ ಇದಂ ಶರೀರಂ ” ಬದುಕಿನ ಸಾರ್ಥಕತೆ ಅಡಗಿರುವುದೇ ಇತರರ ಸೇವೆಯಲ್ಲಿ. ಕನಿಷ್ಠ ನಮಗಾಗಿ ಮತ್ತು ನಮ್ಮವರಿಗಾಗಿ ಜೊತೆಯಲ್ಲಿ ಇತರರಿಗಾಗಿ ಎಂಬುದು ಹೆಚ್ಚು ಅರ್ಥಪೂರ್ಣ ಎನಿಸುತ್ತದೆ.

ಹಿರಿಯರೊಬ್ಬರು ಹೇಳುತ್ತಿದ್ದರು‌
” ಹಿಂದೆ ನನ್ನದೆಲ್ಲವೂ ನಿನ್ನದೇ ” ಎನ್ನುತ್ತಿದ್ದರು. ನಂತರದಲ್ಲಿ
” ನನ್ನದು ನನ್ನದೇ ನಿನ್ನದು ನಿನ್ನದೇ ” ಎಂಬಂತಾಯಿತು. ಆದರೆ ಈಗಿನ ಆಧುನಿಕ ಕಾಲದಲ್ಲಿ ” ನನ್ನದು ಮತ್ತು ನಿನ್ನದು ಎರಡೂ ನನ್ನದೇ ” ಎಂಬ ಮನೋಭಾವ ಸಾಕಷ್ಟು ಜನರಲ್ಲಿ ಬೆಳೆಯುತ್ತಿದೆ.

ದೊಡ್ಡವರಾಗುವುದು ಅಥವಾ ಯಶಸ್ವಿಯಾಗುವುದು ಎಂದರೆ ತನ್ನ ವೈಯಕ್ತಿಕ ಹಣ ಅಂತಸ್ತು ಅಧಿಕಾರ ಜಮೀನುಗಳ ಹೆಚ್ಚಾಗುವಿಕೆ ಮತ್ತು ಅದರ ಪ್ರದರ್ಶನ. ಅದನ್ನು ಗಳಿಸಲು ಯಾವುದೇ ಮಾರ್ಗಗಳನ್ನು ಉಪಯೋಗಿಸಲು ಹಿಂಜರಿಯುವುದಿಲ್ಲ.

ನಾಮಕರಣ, ಗೃಹ ಪ್ರವೇಶ, ಮದುವೆ, ಮುಂಜಿ, ನಿಶ್ಚಿತಾರ್ಥ, ತಿಥಿ, ಹುಟ್ಟಿದ ಹಬ್ಬ ಹೀಗೆ ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ತಮ್ಮ ಶ್ರೀಮಂತಿಕೆಯ ಪ್ರದರ್ಶನ ಮತ್ತು ಆ ಸಂಭ್ರಮಕ್ಕಾಗಿ ಉಪಯೋಗಿಸುವ ಶ್ರಮ ಮತ್ತು ಹಣವನ್ನು ಯಾವುದೇ ಸಾಮಾಜಿಕ ಕಾರ್ಯಗಳ ವಿಷಯದಲ್ಲಿ ತೋರುವುದಿಲ್ಲ. ಜನರು ಸಹ ಈ ರೀತಿಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವಷ್ಟು ಯಾವುದೇ ಸಮಾಜ ಮುಖಿ ಜನ ಸೇವೆಗಳಲ್ಲಿ ಸೇರುವುದಿಲ್ಲ.

ತನಗೆ ವೈಯಕ್ತಿಕವಾಗಿ ಯಾವುದೋ ತೊಂದರೆಯಾದಾಗ ” ಅಯ್ಯೋ ಯಾರು ನ್ಯಾಯ ಕೇಳುವವರೇ ಇಲ್ಲ. ಅನ್ಯಾಯದ ವಿರುದ್ಧ ಮಾತನಾಡುವವರಿಲ್ಲ. ಸಮಾಜ ಸತ್ತು ಹೋಗಿದೆ ” ಎಂದು ಆಕ್ರೋಶದಿಂದ ಮಾತನಾಡುವ ಇದೇ ಜನ ಇತರರು ಸಂಕಷ್ಟದಲ್ಲಿ ಇರುವಾಗ ಧ್ವನಿ ಎತ್ತುವುದಿಲ್ಲ. ಮೌನವಾಗಿ ತಮಗೆ ಸಂಬಂಧವಿಲ್ಲದವರಂತೆ ಸುಮ್ಮನಿರುತ್ತಾರೆ.

ಮಹಾತ್ಮ ಗಾಂಧಿಯವರ ಮಾತಿನ ಅರ್ಥ ಇದೇ ಎನಿಸುತ್ತದೆ. ನೀವು ಹೇಗೆ ಕುಟುಂಬದ ಒಂದು ಭಾಗವೋ ಹಾಗೆಯೇ ಈ ಸಮಾಜದ, ಈ ಪ್ರಕೃತಿಯ ಒಂದು ಭಾಗ. ಅದರ ಹಿತಾಸಕ್ತಿಗೆ ಧಕ್ಕೆಯಾದಾಗ ಪ್ರತಿಭಟಿಸುವುದು ನಮ್ಮ ನಿಮ್ಮ ಕರ್ತವ್ಯ. ಅದನ್ನು ನಿರ್ವಹಿಸಿದಾಗ ಮನುಷ್ಯ ದೊಡ್ಡವನಾಗುತ್ತಾನೆ.

ಇಂದಿನ ವೇಗದ ಮತ್ತು ಸ್ಪರ್ಧಾ ಜಗತ್ತಿನಲ್ಲಿ ನಾವುಗಳು ಕಳೆದುಹೋಗಿ ಇಡೀ ವ್ಯವಸ್ಥೆ ಕುಸಿದು ಬಿದ್ದು ವಿನಾಶದ ಅಂಚಿನಲ್ಲಿರುವಾಗಲೂ ನಮ್ಮ ಪ್ರತಿಕ್ರಿಯೆ ಶೂನ್ಯ. ಅಷ್ಟು ಸ್ವಾರ್ಥಮಯ ಸಮಾಜ ಎಲ್ಲಾ ದೃಷ್ಟಿಯಿಂದ ಅಭಿವೃದ್ಧಿ ಹೊಂದುವುದು ತುಂಬಾ ಕಷ್ಟ.

ಆದ್ದರಿಂದ ದಯವಿಟ್ಟು ಮಹಾತ್ಮ ಗಾಂಧಿಯವರ ಆಶಯದಂತೆ ಪ್ರತಿಯೊಬ್ಬರ ಮನೆಯಲ್ಲಿ ಮನಸ್ಸಿನಲ್ಲಿ ಊರಿನಲ್ಲಿ ಒಬ್ಬೊಬ್ಬ ಬಾಬಾ ಸಾಹೇಬ್ ಬುದ್ದ ಮಹಾವೀರ ವಿವೇಕಾನಂದ ಬಸವಣ್ಣ ಅಕ್ಕಮಹಾದೇವಿ ಮುಂತಾದ ಮಹಾಮಹಿಮರ ಚಿಂತನೆಗಳು ಸದಾ ಜೀವಂತ ಇರುವಂತೆ ನಮ್ಮ ನಡವಳಿಕೆಗಳನ್ನು ರೂಪಿಸಿಕೊಳ್ಳಬೇಕಿದೆ.

ಆಗ ಮಾತ್ರ ಭಾರತೀಯ ಸಮಾಜ ತನ್ನ ಸಾಂಸ್ಕೃತಿಕ ಮೌಲ್ಯಗಳನ್ನು ಉಳಿಸಿಕೊಳ್ಳಲು ಸಾಧ್ಯ. ಇಲ್ಲದಿದ್ದರೆ ಎಲ್ಲರೂ ತನ್ನ ಕುಟುಂಬವೇ ತನ್ನ ಸರ್ವಸ್ವ, ಬದುಕಿನ ಸಾರ್ಥಕತೆ ಅಡಗಿರುವುದು ತನ್ನ ಕುಟುಂಬದ ಏಳಿಗೆಯಲ್ಲಿ ಮಾತ್ರ ಎಂಬ ಸ್ವಾರ್ಥಕ್ಕೆ ತಲುಪಿದರೆ ಇಡೀ ಸಮಾಜ ನಿಧಾನವಾಗಿ ಭೀಕರ ಅನಾಹುತಕ್ಕೆ ಒಳಗಾಗುತ್ತದೆ.

ದಯವಿಟ್ಟು ನಿಮ್ಮ ನಮ್ಮ ಕುಟುಂಬದ ಜೊತೆ ಸಮಾಜದ ಬಗ್ಗೆಯೂ ಸ್ವಲ್ಪ ಯೋಚಿಸಿ ಮತ್ತು ಆಗಾಗ ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ಹಾಗೂ ಸಮಾಜಕ್ಕಾಗಿ ನಿಮ್ಮ ಬಳಿ ಹೆಚ್ಚುವರಿಯಾಗಿರುವ ಸಂಪನ್ಮೂಲಗಳನ್ನು ಸ್ವಲ್ಪ ಮಟ್ಟಿಗೆ ದಾನ ಮಾಡಿ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

13 hours ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

22 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

23 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

1 day ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

1 day ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

1 day ago