ದಯಾನಂದ ಸಾಗರ ವಿದ್ಯಾಸಂಸ್ಥೆ ವತಿಯಿಂದ ಲಘುಮೇನಹಳ್ಳಿ ಗ್ರಾಮದಲ್ಲಿ ಎನ್ಎಸ್ಎಸ್ ಶಿಬಿರ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಲಘುಮೇನಹಳ್ಳಿ ಗ್ರಾಮದಲ್ಲಿ 5 ದಿನಗಳಿಂದ ನಡೆದ ಶಿಬಿರದಲ್ಲಿ ಎನ್‌ಎನ್ಎಸ್ ವಿದ್ಯಾರ್ಥಿಗಳು ಗ್ರಾಮದಾದ್ಯಂತ ಸ್ವಚ್ಚತೆ ಕೈಗೊಂಡರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗಾಗಿ ವಿವಿಧ ಚಟುವಟಿಕೆಗಳನ್ನು‌ ನಡೆಸಿ, ಪ್ರೋತ್ಸಾಹ ನೀಡಿದರು.

ವಿದ್ಯಾಸಂಸ್ಥೆಯ ಡಾ.ವಿಶ್ವನಾಥ್ ಮಾತನಾಡಿ, ಎಂಜಿನಿಯರಿಂಗ್ ವಿದ್ಯಾರ್ಥಿಗಳ ಕ್ಷೇತ್ರ ಅಧ್ಯಯನದ ಭಾಗವಾಗಿ ಐದು ದಿನಗಳ ಕಾಲ ಎನ್ಎಸ್ಎಸ್ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶಿಬಿರದ ಮೊದಲ ದಿನದಂದು ಗ್ರಾಮದಲ್ಲಿ‌ನ ಸಮಸ್ಯೆಗಳ ವಸ್ತುಸ್ಥಿತಿ‌ ಅಧ್ಯಯನ ನಡೆಸಲಾಯಿತು. ನಂತರ ಶ್ರಮದಾನದ ಮೂಲಕ ಸ್ವಚ್ಚತೆ‌ ಕೈಗೊಳ್ಳಲಾಯಿತು.

ಸರ್ಕಾರಿ ಶಾಲೆಯ ಮಕ್ಕಳಿಗಾಗಿ ಚಿತ್ರಕಲೆ, ನೃತ್ಯ, ಹಾಡುಗಾರಿಕೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಏರ್ಪಡಿಸಿ ಪ್ರಶಸ್ತಿ ನೀಡುವ ಮೂಲಕ ಪ್ರೋತ್ಸಾಹ ನೀಡಲಾಯಿತು ಎಂದು ಹೇಳಿದರು.

ಶಾಲೆಯ ಸುತ್ತ ನೈರ್ಮಲ್ಯ ಕಾಪಾಡುವ ಜೊತೆಗೆ ಗ್ರಾಮದ ಚರಂಡಿಗಳನ್ನು ಸ್ವಚ್ಚ‌ ಮಾಡಲಾಯಿತು. ಕೆರೆಯ ಆವರಣದಲ್ಲಿ‌ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ‌ ಮಾಡಲಾಯಿತು. ಎನ್ಎಸ್ಎಸ್ ಅಧಿಕಾರಿ ಡಾ.ಮಧುಸೂಧನ್, ಡಾ.ಆನಂದ್ ನೇತೃತ್ವದಲ್ಲಿ‌ ವಿದ್ಯಾರ್ಥಿಗಳು ಗ್ರಾಮಸ್ಥರಿಗೆ ಪರಿಸರ. ಸಂರಕ್ಷಣೆ ಹಾಗೂ ಸ್ವಚ್ಛತೆಯ ಅರಿವು ಮೂಡಿಸಲಾಯಿತು. ಗ್ರಾಮದ ಹಲವೆಡೆ ಹಾಗೂ ಶಾಲೆಯ ಆವರಣದಲ್ಲಿ ಸಸಿಗಳನ್ನು‌ ನೆಟ್ಟು ಪರಿಸರ ಜಾಗೃತಿ‌‌ ಮೂಡಿಸಿದರು.

ಎನ್ಎಸ್ಎಸ್ ವಿದ್ಯಾರ್ಥಿನಿ ನವ್ಯಾ‌ ಮಾತನಾಡಿ, ಐದು ದಿನಗಳ‌ ಎನ್ಎಸ್ಎಸ್ ಶಿಬಿರವು ಸಾಕಷ್ಟು ಅನುಭವಗಳ ಪಾಠ ಕಲಿಸಿದೆ. ಹಳ್ಳಿಯ ವಾತಾವರಣ ನಮ್ಮಲ್ಲಿ ಹುರುಪು ತುಂಬಿದೆ. ಎನ್ ಎಸ್ ಎಸ್ ಶಿಬಿರದಿಂದ ಗ್ರಾಮದ ಅಭಿವೃದ್ದಿಯಲ್ಲಿ‌ ತೊಡಗಿಸಿಕೊಳ್ಳಲು ಸ್ಫೂರ್ತಿ ತುಂಬಿದಂತಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ 25 ಎನ್ಎಸ್ಎಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಗ್ರಾಮಸ್ಥರು ಕೂಡ ಎನ್ಎಸ್ಎಸ್ ವಿದ್ಯಾರ್ಥಿಗಳ‌ ಶ್ರಮದಾನವನ್ನು‌ ಮುಕ್ತಕಂಠದಿಂದ ಶ್ಲಾಘಿಸಿದರು.

Ramesh Babu

Journalist

Recent Posts

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿ ಪ್ರಕಟ

2026ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ದಿನಾಂಕ ಹಾಗೂ ಪರೀಕ್ಷೆ 2 ರ ವೇಳಾಪಟ್ಟಿಯನ್ನು ಶಿಕ್ಷಣ…

2 hours ago

ಗೀತಂ ಯೂನಿವರ್ಸಿಟಿಯಲ್ಲಿ ಯುವತಿ ಆತ್ಮಹತ್ಯೆ ಪ್ರಕರಣ: ಸ್ಥಳಕ್ಕೆ ಎಸ್ಪಿ‌ ಚಂದ್ರಕಾಂತ್ ಭೇಟಿ, ಪರಿಶೀಲನೆ, ಪ್ರತಿಕ್ರಿಯೆ

ಆಕೆ ತಂದೆ ತಾಯಿಗೆ ಇದ್ದ ಏಕೈಕ‌ ಮಗಳು. ಹಾಗಾಗಿ ತಂದೆ ತಾಯಿಗೆ ಮಗಳು ಎಂದರೆ ಎಲ್ಲಿಲ್ಲದ ಪ್ರೀತಿ‌. ಮಗಳು ಚೆನ್ನಾಗಿ…

3 hours ago

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

7 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

10 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

21 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

22 hours ago