ದಯಾನಂದ ಸಾಗರ ವಿದ್ಯಾಸಂಸ್ಥೆ ವತಿಯಿಂದ ಲಘುಮೇನಹಳ್ಳಿ ಗ್ರಾಮದಲ್ಲಿ ಎನ್ಎಸ್ಎಸ್ ಶಿಬಿರ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಲಘುಮೇನಹಳ್ಳಿ ಗ್ರಾಮದಲ್ಲಿ 5 ದಿನಗಳಿಂದ ನಡೆದ ಶಿಬಿರದಲ್ಲಿ ಎನ್‌ಎನ್ಎಸ್ ವಿದ್ಯಾರ್ಥಿಗಳು ಗ್ರಾಮದಾದ್ಯಂತ ಸ್ವಚ್ಚತೆ ಕೈಗೊಂಡರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗಾಗಿ ವಿವಿಧ ಚಟುವಟಿಕೆಗಳನ್ನು‌ ನಡೆಸಿ, ಪ್ರೋತ್ಸಾಹ ನೀಡಿದರು.

ವಿದ್ಯಾಸಂಸ್ಥೆಯ ಡಾ.ವಿಶ್ವನಾಥ್ ಮಾತನಾಡಿ, ಎಂಜಿನಿಯರಿಂಗ್ ವಿದ್ಯಾರ್ಥಿಗಳ ಕ್ಷೇತ್ರ ಅಧ್ಯಯನದ ಭಾಗವಾಗಿ ಐದು ದಿನಗಳ ಕಾಲ ಎನ್ಎಸ್ಎಸ್ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶಿಬಿರದ ಮೊದಲ ದಿನದಂದು ಗ್ರಾಮದಲ್ಲಿ‌ನ ಸಮಸ್ಯೆಗಳ ವಸ್ತುಸ್ಥಿತಿ‌ ಅಧ್ಯಯನ ನಡೆಸಲಾಯಿತು. ನಂತರ ಶ್ರಮದಾನದ ಮೂಲಕ ಸ್ವಚ್ಚತೆ‌ ಕೈಗೊಳ್ಳಲಾಯಿತು.

ಸರ್ಕಾರಿ ಶಾಲೆಯ ಮಕ್ಕಳಿಗಾಗಿ ಚಿತ್ರಕಲೆ, ನೃತ್ಯ, ಹಾಡುಗಾರಿಕೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಏರ್ಪಡಿಸಿ ಪ್ರಶಸ್ತಿ ನೀಡುವ ಮೂಲಕ ಪ್ರೋತ್ಸಾಹ ನೀಡಲಾಯಿತು ಎಂದು ಹೇಳಿದರು.

ಶಾಲೆಯ ಸುತ್ತ ನೈರ್ಮಲ್ಯ ಕಾಪಾಡುವ ಜೊತೆಗೆ ಗ್ರಾಮದ ಚರಂಡಿಗಳನ್ನು ಸ್ವಚ್ಚ‌ ಮಾಡಲಾಯಿತು. ಕೆರೆಯ ಆವರಣದಲ್ಲಿ‌ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ‌ ಮಾಡಲಾಯಿತು. ಎನ್ಎಸ್ಎಸ್ ಅಧಿಕಾರಿ ಡಾ.ಮಧುಸೂಧನ್, ಡಾ.ಆನಂದ್ ನೇತೃತ್ವದಲ್ಲಿ‌ ವಿದ್ಯಾರ್ಥಿಗಳು ಗ್ರಾಮಸ್ಥರಿಗೆ ಪರಿಸರ. ಸಂರಕ್ಷಣೆ ಹಾಗೂ ಸ್ವಚ್ಛತೆಯ ಅರಿವು ಮೂಡಿಸಲಾಯಿತು. ಗ್ರಾಮದ ಹಲವೆಡೆ ಹಾಗೂ ಶಾಲೆಯ ಆವರಣದಲ್ಲಿ ಸಸಿಗಳನ್ನು‌ ನೆಟ್ಟು ಪರಿಸರ ಜಾಗೃತಿ‌‌ ಮೂಡಿಸಿದರು.

ಎನ್ಎಸ್ಎಸ್ ವಿದ್ಯಾರ್ಥಿನಿ ನವ್ಯಾ‌ ಮಾತನಾಡಿ, ಐದು ದಿನಗಳ‌ ಎನ್ಎಸ್ಎಸ್ ಶಿಬಿರವು ಸಾಕಷ್ಟು ಅನುಭವಗಳ ಪಾಠ ಕಲಿಸಿದೆ. ಹಳ್ಳಿಯ ವಾತಾವರಣ ನಮ್ಮಲ್ಲಿ ಹುರುಪು ತುಂಬಿದೆ. ಎನ್ ಎಸ್ ಎಸ್ ಶಿಬಿರದಿಂದ ಗ್ರಾಮದ ಅಭಿವೃದ್ದಿಯಲ್ಲಿ‌ ತೊಡಗಿಸಿಕೊಳ್ಳಲು ಸ್ಫೂರ್ತಿ ತುಂಬಿದಂತಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ 25 ಎನ್ಎಸ್ಎಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಗ್ರಾಮಸ್ಥರು ಕೂಡ ಎನ್ಎಸ್ಎಸ್ ವಿದ್ಯಾರ್ಥಿಗಳ‌ ಶ್ರಮದಾನವನ್ನು‌ ಮುಕ್ತಕಂಠದಿಂದ ಶ್ಲಾಘಿಸಿದರು.

Ramesh Babu

Journalist

Recent Posts

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

28 minutes ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

3 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

3 hours ago

ಅಧಿಕಾರಕ್ಕೇರುವ ಮುನ್ನವೇ ಟ್ರಬಲ್ ಶೂಟರ್ ಚಾಣಾಕ್ಷ ನಡೆ: ದೇವೇಗೌಡ-ಯಡಿಯೂರಪ್ಪ ಆಶೀರ್ವಾದ ಪಡೆದ ಡಿಕೆಶಿ

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಲು ಸಜ್ಜಾಗಿರುವ ಡಿ.ಕೆ. ಶಿವಕುಮಾರ್ ಅವರು ಪ್ರಮಾಣ ವಚನಕ್ಕೂ ಮುನ್ನವೇ ತಮ್ಮ…

5 hours ago

ಡಿ.ಕೆ.ಶಿವಕುಮಾರ್ ಪದಗ್ರಹಣ: ಡಿಕೆಶಿ ಜೊತೆ ಓರ್ವ ಡಿಸಿಎಂ ಸೇರಿ 12 ಮಂದಿ ಸಚಿವರಾಗಿ ಪ್ರಮಾಣ ವಚನ….

ಇಂದು ಸಂಜೆ 4:05ಕ್ಕೆ ಲೋಕಭವನದ ಗಾಜಿನ ಮನೆಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ…

6 hours ago

ಬಿಜೆಪಿಗೆ ಅಧಿಕಾರ ಸಿಕ್ಕಾಗ ಒಬಿಸಿ, ದಲಿತರ ರಾಜಕೀಯ ಪ್ರಾತಿನಿಧ್ಯ ಏಕೆ ನೆನಪಾಗಲಿಲ್ಲ?- ಪ್ರಿಯಾಂಕ್ ಖರ್ಗೆ ಪ್ರಶ್ನೆ

ಬಿಜೆಪಿ ನಾಯಕರಿಗೆ ಈಗ ಏಕಾಏಕಿ ದಲಿತ ಮತ್ತು ಹಿಂದುಳಿದ ಸಮುದಾಯಗಳ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ಕಾಳಜಿ ಬಂದುಬಿಟ್ಟಿದೆ. ಕಾಲ, ಸಂದರ್ಭ…

7 hours ago