ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಲಘುಮೇನಹಳ್ಳಿ ಗ್ರಾಮದಲ್ಲಿ 5 ದಿನಗಳಿಂದ ನಡೆದ ಶಿಬಿರದಲ್ಲಿ ಎನ್ಎನ್ಎಸ್ ವಿದ್ಯಾರ್ಥಿಗಳು ಗ್ರಾಮದಾದ್ಯಂತ ಸ್ವಚ್ಚತೆ ಕೈಗೊಂಡರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗಾಗಿ ವಿವಿಧ ಚಟುವಟಿಕೆಗಳನ್ನು ನಡೆಸಿ, ಪ್ರೋತ್ಸಾಹ ನೀಡಿದರು.
ವಿದ್ಯಾಸಂಸ್ಥೆಯ ಡಾ.ವಿಶ್ವನಾಥ್ ಮಾತನಾಡಿ, ಎಂಜಿನಿಯರಿಂಗ್ ವಿದ್ಯಾರ್ಥಿಗಳ ಕ್ಷೇತ್ರ ಅಧ್ಯಯನದ ಭಾಗವಾಗಿ ಐದು ದಿನಗಳ ಕಾಲ ಎನ್ಎಸ್ಎಸ್ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶಿಬಿರದ ಮೊದಲ ದಿನದಂದು ಗ್ರಾಮದಲ್ಲಿನ ಸಮಸ್ಯೆಗಳ ವಸ್ತುಸ್ಥಿತಿ ಅಧ್ಯಯನ ನಡೆಸಲಾಯಿತು. ನಂತರ ಶ್ರಮದಾನದ ಮೂಲಕ ಸ್ವಚ್ಚತೆ ಕೈಗೊಳ್ಳಲಾಯಿತು.
ಸರ್ಕಾರಿ ಶಾಲೆಯ ಮಕ್ಕಳಿಗಾಗಿ ಚಿತ್ರಕಲೆ, ನೃತ್ಯ, ಹಾಡುಗಾರಿಕೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಏರ್ಪಡಿಸಿ ಪ್ರಶಸ್ತಿ ನೀಡುವ ಮೂಲಕ ಪ್ರೋತ್ಸಾಹ ನೀಡಲಾಯಿತು ಎಂದು ಹೇಳಿದರು.
ಶಾಲೆಯ ಸುತ್ತ ನೈರ್ಮಲ್ಯ ಕಾಪಾಡುವ ಜೊತೆಗೆ ಗ್ರಾಮದ ಚರಂಡಿಗಳನ್ನು ಸ್ವಚ್ಚ ಮಾಡಲಾಯಿತು. ಕೆರೆಯ ಆವರಣದಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ ಮಾಡಲಾಯಿತು. ಎನ್ಎಸ್ಎಸ್ ಅಧಿಕಾರಿ ಡಾ.ಮಧುಸೂಧನ್, ಡಾ.ಆನಂದ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗ್ರಾಮಸ್ಥರಿಗೆ ಪರಿಸರ. ಸಂರಕ್ಷಣೆ ಹಾಗೂ ಸ್ವಚ್ಛತೆಯ ಅರಿವು ಮೂಡಿಸಲಾಯಿತು. ಗ್ರಾಮದ ಹಲವೆಡೆ ಹಾಗೂ ಶಾಲೆಯ ಆವರಣದಲ್ಲಿ ಸಸಿಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಿದರು.
ಎನ್ಎಸ್ಎಸ್ ವಿದ್ಯಾರ್ಥಿನಿ ನವ್ಯಾ ಮಾತನಾಡಿ, ಐದು ದಿನಗಳ ಎನ್ಎಸ್ಎಸ್ ಶಿಬಿರವು ಸಾಕಷ್ಟು ಅನುಭವಗಳ ಪಾಠ ಕಲಿಸಿದೆ. ಹಳ್ಳಿಯ ವಾತಾವರಣ ನಮ್ಮಲ್ಲಿ ಹುರುಪು ತುಂಬಿದೆ. ಎನ್ ಎಸ್ ಎಸ್ ಶಿಬಿರದಿಂದ ಗ್ರಾಮದ ಅಭಿವೃದ್ದಿಯಲ್ಲಿ ತೊಡಗಿಸಿಕೊಳ್ಳಲು ಸ್ಫೂರ್ತಿ ತುಂಬಿದಂತಾಗಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ 25 ಎನ್ಎಸ್ಎಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಗ್ರಾಮಸ್ಥರು ಕೂಡ ಎನ್ಎಸ್ಎಸ್ ವಿದ್ಯಾರ್ಥಿಗಳ ಶ್ರಮದಾನವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…