ದಯಾನಂದ ಸಾಗರ ವಿದ್ಯಾಸಂಸ್ಥೆ ವತಿಯಿಂದ ಲಘುಮೇನಹಳ್ಳಿ ಗ್ರಾಮದಲ್ಲಿ ಎನ್ಎಸ್ಎಸ್ ಶಿಬಿರ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿ ಲಘುಮೇನಹಳ್ಳಿ ಗ್ರಾಮದಲ್ಲಿ 5 ದಿನಗಳಿಂದ ನಡೆದ ಶಿಬಿರದಲ್ಲಿ ಎನ್‌ಎನ್ಎಸ್ ವಿದ್ಯಾರ್ಥಿಗಳು ಗ್ರಾಮದಾದ್ಯಂತ ಸ್ವಚ್ಚತೆ ಕೈಗೊಂಡರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗಾಗಿ ವಿವಿಧ ಚಟುವಟಿಕೆಗಳನ್ನು‌ ನಡೆಸಿ, ಪ್ರೋತ್ಸಾಹ ನೀಡಿದರು.

ವಿದ್ಯಾಸಂಸ್ಥೆಯ ಡಾ.ವಿಶ್ವನಾಥ್ ಮಾತನಾಡಿ, ಎಂಜಿನಿಯರಿಂಗ್ ವಿದ್ಯಾರ್ಥಿಗಳ ಕ್ಷೇತ್ರ ಅಧ್ಯಯನದ ಭಾಗವಾಗಿ ಐದು ದಿನಗಳ ಕಾಲ ಎನ್ಎಸ್ಎಸ್ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಶಿಬಿರದ ಮೊದಲ ದಿನದಂದು ಗ್ರಾಮದಲ್ಲಿ‌ನ ಸಮಸ್ಯೆಗಳ ವಸ್ತುಸ್ಥಿತಿ‌ ಅಧ್ಯಯನ ನಡೆಸಲಾಯಿತು. ನಂತರ ಶ್ರಮದಾನದ ಮೂಲಕ ಸ್ವಚ್ಚತೆ‌ ಕೈಗೊಳ್ಳಲಾಯಿತು.

ಸರ್ಕಾರಿ ಶಾಲೆಯ ಮಕ್ಕಳಿಗಾಗಿ ಚಿತ್ರಕಲೆ, ನೃತ್ಯ, ಹಾಡುಗಾರಿಕೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳನ್ನು ಏರ್ಪಡಿಸಿ ಪ್ರಶಸ್ತಿ ನೀಡುವ ಮೂಲಕ ಪ್ರೋತ್ಸಾಹ ನೀಡಲಾಯಿತು ಎಂದು ಹೇಳಿದರು.

ಶಾಲೆಯ ಸುತ್ತ ನೈರ್ಮಲ್ಯ ಕಾಪಾಡುವ ಜೊತೆಗೆ ಗ್ರಾಮದ ಚರಂಡಿಗಳನ್ನು ಸ್ವಚ್ಚ‌ ಮಾಡಲಾಯಿತು. ಕೆರೆಯ ಆವರಣದಲ್ಲಿ‌ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ ವಿಲೇವಾರಿ‌ ಮಾಡಲಾಯಿತು. ಎನ್ಎಸ್ಎಸ್ ಅಧಿಕಾರಿ ಡಾ.ಮಧುಸೂಧನ್, ಡಾ.ಆನಂದ್ ನೇತೃತ್ವದಲ್ಲಿ‌ ವಿದ್ಯಾರ್ಥಿಗಳು ಗ್ರಾಮಸ್ಥರಿಗೆ ಪರಿಸರ. ಸಂರಕ್ಷಣೆ ಹಾಗೂ ಸ್ವಚ್ಛತೆಯ ಅರಿವು ಮೂಡಿಸಲಾಯಿತು. ಗ್ರಾಮದ ಹಲವೆಡೆ ಹಾಗೂ ಶಾಲೆಯ ಆವರಣದಲ್ಲಿ ಸಸಿಗಳನ್ನು‌ ನೆಟ್ಟು ಪರಿಸರ ಜಾಗೃತಿ‌‌ ಮೂಡಿಸಿದರು.

ಎನ್ಎಸ್ಎಸ್ ವಿದ್ಯಾರ್ಥಿನಿ ನವ್ಯಾ‌ ಮಾತನಾಡಿ, ಐದು ದಿನಗಳ‌ ಎನ್ಎಸ್ಎಸ್ ಶಿಬಿರವು ಸಾಕಷ್ಟು ಅನುಭವಗಳ ಪಾಠ ಕಲಿಸಿದೆ. ಹಳ್ಳಿಯ ವಾತಾವರಣ ನಮ್ಮಲ್ಲಿ ಹುರುಪು ತುಂಬಿದೆ. ಎನ್ ಎಸ್ ಎಸ್ ಶಿಬಿರದಿಂದ ಗ್ರಾಮದ ಅಭಿವೃದ್ದಿಯಲ್ಲಿ‌ ತೊಡಗಿಸಿಕೊಳ್ಳಲು ಸ್ಫೂರ್ತಿ ತುಂಬಿದಂತಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ 25 ಎನ್ಎಸ್ಎಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಗ್ರಾಮಸ್ಥರು ಕೂಡ ಎನ್ಎಸ್ಎಸ್ ವಿದ್ಯಾರ್ಥಿಗಳ‌ ಶ್ರಮದಾನವನ್ನು‌ ಮುಕ್ತಕಂಠದಿಂದ ಶ್ಲಾಘಿಸಿದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

11 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago