ದರೋಡೆ ಮಾಡಲು ಅಪಘಾತ ಮಾಡಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ…
ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆ ವಿಜಯಲಕ್ದ್ಮಿಗೆ ಬೈಕ್ನಿಂದ ಡಿಕ್ಕಿ ಹೊಡೆದು ಗಾಯಗೊಳಿಸಿದ ಆರೋಪ ಕೇಳಿ ಬಂದಿತ್ತು. ಏಪ್ರಿಲ್ 20ರಂದು ಅಪಘಾತ ಪ್ರಕರಣ ವಿಜಯನಗರ ಟ್ರಾಫಿಕ್ ಠಾಣೆಯಲ್ಲಿ ದಾಖಲಾಗಿತ್ತು. ಗಾಯಗೊಂಡಿದ್ದ ಮಹಿಳೆ ಏಪ್ರಿಲ್ 27ರಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ತನಿಖೆಯಲ್ಲಿ ಮನೆ ದರೋಡೆ ಮತ್ತು ಚಿನ್ನಾಭರಣ ಕಳವು ಸಂಚು ಬಯಲಾಗಿದೆ. ಪ್ರಕರಣಕ್ಕೆ ಕೊಲೆ ಮತ್ತು ಮನೆ ಕಳವು ಸೆಕ್ಷನ್ ಸೇರಿಸಿ ತನಿಖೆ ಮುಂದುವರಿಸಲಾಗಿದೆ..
ಪ್ರಕರಣದ ಒಬ್ಬ ಆರೋಪಿಯನ್ನು ಬಂಧಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಮೇ 2ರಂದು ಆರೋಪಿಗೆ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮೇ 5ರಂದು ಚಿಕಿತ್ಸೆ ಫಲಕಾರಿಯಾಗದೆ ಆರೋಪಿ ಮಂಜುನಾಥ್ ಸಹ ಸಾವನ್ನಪ್ಪಿದ್ದಾನೆ.
ಮೃತ ಆರೋಪಿ ಮಂಜುನಾಥ ವಿರುದ್ಧ ವಿವಿಧ ಠಾಣೆಗಳಲ್ಲಿ ಒಟ್ಟು 6 ಪ್ರಕರಣ ದಾಖಲಾಗಿತ್ತು.
ಶೇಷಾದ್ರಿಪುರಂ ಠಾಣೆಯಲ್ಲಿ ರೌಡಿಶೀಟ್ ಓಪನ್ ಆಗಿದ್ದ ಆರೋಪಿಗೆ ದೀರ್ಘಕಾಲದ ಅನಾರೋಗ್ಯ ಹಿನ್ನೆಲೆ ಪೊಲೀಸ್ ಕಸ್ಟಡಿಯಲ್ಲಿ ಅನಾರೋಗ್ಯದಿಂದಲೇ ಆರೋಪಿಯ ಸಾವು ಎಂದು ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಿದೆ.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…