ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಇತರ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಹೈಕೋರ್ಟ್ ಜಾಮೀನು ಮೇಲೆ ಬಿಡುಗಡೆ ಹೊಂದಿರುವ ನಟ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದು ಅರ್ಜಿಯ ತೀರ್ಪನ್ನು ಸುಪ್ರೀಂಕೋರ್ಟ್ ಕಾಯ್ದಿರಿಸಿದೆ.
ದರ್ಶನ್ ಸೇರಿ 7 ಆರೋಪಿಗಳ ಜಾಮೀನನ್ನು ರದ್ದು ಮಾಡುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿತ್ತು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈಗ ತೀರ್ಪನ್ನು ಕಾಯ್ದಿರಿಸಿದೆ. 10 ದಿನಗಳ ಬಳಿಕವಷ್ಟೇ ದರ್ಶನ್ ಜಾಮೀನು ಅರ್ಜಿ ಬಗ್ಗೆ ತೀರ್ಪು ನೀಡುವುದಾಗಿ ಕೋರ್ಟ್ ಹೇಳಿದೆ.
ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ಗೆ ಜಾಮೀನು ನೀಡಿ ಹೈಕೋರ್ಟ್ ಕಳೆದ ವರ್ಷ ಆದೇಶ ನೀಡಿತ್ತು. ಈ ಆದೇಶವನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿತ್ತು. ಅರ್ಜಿಯನ್ನು ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ, ನ್ಯಾಯಮೂರ್ತಿ ಆರ್. ಮಹದೇವನ್ ಅವರಿದ್ದ ಪೀಠ ವಿಚಾರಣೆ ನಡೆಸಿತು.
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…