ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ: ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಪಂ ವಿಫಲ: ಸಿಡಿದ್ದೆದ್ದ ದಲಿತರು

ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಸಂಪೂರ್ಣ ವಿಫಲವಾಗಿದೆ. ಪಂಚಾಯಿತಿ ವಿರುದ್ಧ ದಲಿತರು ಸಿಡಿದ್ದೆದ್ದಿದ್ದಾರೆ.

ದಲಿತರು ದಲಿತ ಕಾಲೋನಿಗಳಲ್ಲಿ ರಸ್ತೆ ನಿರ್ಮಾಣ ಚರಂಡಿ ನಿರ್ಮಾಣ ಸೇರಿದಂತೆ ಇತರೆ ಅಭಿವೃದ್ಧಿ ಕೆಲಸಗಳನ್ನು ಮಾಡುವಾಗ ಸಾಮಾನ್ಯವಾಗಿ ನಿರ್ಲಕ್ಷ್ಯ, ಅವೈಜ್ಞಾನಿಕ ನಿರ್ಮಾಣ, ಮತ್ತು ಕಳಪೆ ನಿರ್ವಹಣೆಯಿಂದ ಉಂಟಾಗುತ್ತವೆ. ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿದ್ದರೆ ನೀರು ನಿಲ್ಲುವುದು, ದುರ್ವಾಸನೆ ಬರುವುದು ಮತ್ತು ಸಾಂಕ್ರಾಮಿಕ ರೋಗಗಳ ಹರಡುವಿಕೆ ಉಂಟಾಗುತ್ತಿದೆ. ಇದಕ್ಕೆ ಪರಿಹಾರವಾಗಿ, ಸಂಬಂಧಪಟ್ಟ ಅಧಿಕಾರಿಗಳು ಚರಂಡಿಗಳನ್ನು ಸ್ವಚ್ಛಗೊಳಿಸಬೇಕು, ಸರಿಯಾದ ನಿರ್ವಹಣೆ ಮಾಡಬೇಕು ಮತ್ತು ಅವೈಜ್ಞಾನಿಕ ನಿರ್ಮಾಣಗಳನ್ನು ಸರಿಪಡಿಸಬೇಕು.

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಕೂಗಳತೆ ದೂರದಲ್ಲಿರುವ ದಲಿತ ಕಾಲೋನಿಯಲ್ಲಿ ಚರಂಡಿ ಇದ್ದು ಇಲ್ಲದಂತಾಗಿದೆ. ಕೊಳಚೆ ನೀರು ಮನೆಯ ಮುಂದೆ ಶೇಖರಣೆಯಾಗಿ, ರಸ್ತೆಯಲ್ಲಿಯೇ ಕೊಳೆತು ಇಡೀ ಪ್ರದೇಶ ದುರ್ನಾತ ಬೀರುತ್ತಿದೆ. ಸೊಳ್ಳೆ, ನೊಣ ಸೇರಿದಂತೆ ಇತರೆ ಕ್ರಿಮಿ ಕೀಟಗಳ ಆವಾಸ ಸ್ಥಾನವಾಗಿದೆ. ಇದರಿಂದ ರೋಗ ಹರಡುವ ಸಾಧ್ಯತೆ ಹೆಚ್ಚಿದೆ. ಅದರೆ ಹಾಡೋನಹಳ್ಳಿ ಗ್ರಾಮ ಪಂಚಾಯ್ತಿ ಶುಚಿತ್ವದತ್ತ ಸ್ವಲ್ಪವೂ ಗಮನ ಹರಿಸುತ್ತಿಲ್ಲ ಎಂದು ಕಾಲೋನಿ ನಿವಾಸಿಗಳು ದೂರಿದ್ದಾರೆ.

ಕರ್ನಾಟಕ ಭೀಮ ಸೇನೆ ರಾಜ್ಯ ಕಾರ್ಯದರ್ಶಿ ಮಂಜುನಾಥ್ ಮಾತನಾಡಿ, ಹಾಡೋನಹಳ್ಳಿಯಲ್ಲಿ ದಲಿತರು ವಾಸಿಸುವ ಕಾಲೋನಿಯ ಅಭಿವೃದ್ಧಿಯತ್ತ ಸಂಬಂಧಪಟ್ಟವರು(ಗ್ರಾಮ ಪಂಚಾಯಿತಿ) ನಿರ್ಲಕ್ಷ್ಯ ತಾಳುತ್ತಲೇ ಬರುತ್ತಿದ್ದಾರೆ. 85ಕ್ಕೂ ಹೆಚ್ಚು ಕುಟುಂಬಗಳು ದಲಿತ ಕಾಲೋನಿಯಲ್ಲಿ ವಾಸ ಮಾಡಲಾಗುತ್ತಿದೆ. ನಾವು ವಾಸ ಮಾಡುತ್ತಿರುವ ಕಾಲೋನಿಯಲ್ಲಿ ಚರಂಡಿ ಸಮಸ್ಯೆ ಎದ್ದು ಕಾಣುತ್ತಿದೆ.‌ ಚರಂಡಿ ಸ್ವಚ್ಛತೆ ಮಾಡಿ ಸುಮಾರು ವರ್ಷಗಳೇ ಕಳೆದಿವೆ.‌ ಗ್ರಾಮ ಪಂಚಾಯಿತಿ ಕೂಗಳತೆ ದೂರದಲ್ಲೇ ಇರುವ ಕಾಲೋನಿಗೆ ಸಂಬಂಧಪಟ್ಟವರು ಮೂಲಭೂತ ಸೌಕರ್ಯಗಳನ್ನು ಒದಗಿಸದೇ ಅಸ್ಪೃಶ್ಯತೆ ಆಚರಣೆ ಮಾಡುತ್ತಿದ್ದಾರೆ. 15-20 ಅಡಿ ಜಾಗದ ಮನೆಗಳಲ್ಲಿ ದಲಿತರು ವಾಸ ಮಾಡುತ್ತಿದ್ದಾರೆ. ಮೂಲಭೂತ ಸೌಕರ್ಯ ಒದಗಿಸುವಂತೆ ಸಚಿವರು, ಶಾಸಕರು, ಜಿಲ್ಲಾಧಿಕಾರಿ, ಜಿ‌ಪಂ ಸಿಇಒ, ತಾಪಂ ಸಿಇಒ, ಗ್ರಾಮ ಪಂಚಾಯಿತಿ ಪಿಡಿಒ ಸೇರಿದಂತೆ ಎಲ್ಲಾ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೂ ತರಲಾಗಿದೆ ಆದರೆ ಯಾವ ಕೆಲಸವಾಗಿಲ್ಲ. ಸರ್ಕಾರಿ ಅಧಿಕಾರಿಗಳು ಯಾರ ಕೈಗೊಂಬೆಯಾಗದೇ, ಯಾರ ಒತ್ತಡಕ್ಕೂ ಮಣಿಯದೇ ಸಂವಿಧಾನ ಅಡಿಯಲ್ಲಿ ಕೆಲಸ ಮಾಡಬೇಕು. ಕೂಡಲೇ ಚರಂಡಿ ದುರಸ್ತಿ ಮಾಡಿ, ಕಾಲೋನಿಯಲ್ಲಿ ಕಾಲಕಾಲಕ್ಕೆ ಸ್ವಚ್ಛತಾ ಕಾರ್ಯಕೈಗೊಳ್ಳಬೇಕು. ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಇಲ್ಲದಿದ್ದಲ್ಲಿ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಾಲೋನಿ ನಿವಾಸಿ ಮುರುಳಿ ಮಾತನಾಡಿ, ಹಾಡೋನಹಳ್ಳಿಯ ಜನತಾ ಕಾಲೋನಿಯಲ್ಲಿ ಸುಮಾರು 50 ವರ್ಷಗಳಿಂದ ವಾಸವಿದ್ದೇವೆ. ಕಾಲೋನಿಯಾದಗಿನಿಂದಲೂ ಮೂಲಭೂತ ಸೌಲಭ್ಯಗಳಿಲ್ಲ. ಈ ಕುರಿತು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವ ಉಪಯೋಗವಾಗಿಲ್ಲ.‌ ನಾವು ದಲಿತರು ಎಂಬ ಕಾರಣಕ್ಕೆ ಗ್ರಾಮ ಪಂಚಾಯಿತಿಯವರು ನಮ್ಮನ್ನು ಎಲ್ಲಾ ವಿಚಾರದಲ್ಲಿ ಕಡೆಗಣಿಸುತ್ತಲೇ ಬರುತ್ತಿದ್ದಾರೆ. ಪಂಚಾಯಿತಿ ಪಿಎಒಗಳು ರಾಜಕೀಯ ವ್ಯಕ್ತಿಗಳ ಒತ್ತಡಕ್ಕೆ ಮಣಿದು ಕೆಲಸ ಮಾಡುತ್ತಾರೆ. ನಮಗೆ ಮೂಲಭೂತ ಸವಲತ್ತುಗಳನ್ನು ಒದಗಿಸದೇ ಇದ್ದಲ್ಲಿ ಮುಂಬುರುವ ತಾ.ಪಂ, ಜಿ.ಪಂ ಸೇರಿದಂತೆ ಎಲ್ಲಾ ಚುನಾವಣೆಗಳನ್ನು ಬಹಿಷ್ಕಾರ ಮಾಡುತ್ತೇವೆ ಎಂದು ಎಚ್ಚರಿಸಿದರು.

ಕಾಲೋನಿ‌ ನಿವಾಸಿ ಲಲಿತಾ ಮಾತನಾಡಿ, ನಮ್ಮ ಕಾಲೋನಿಯಲ್ಲಿ ಮೋರಿ, ಚರಂಡಿ, ವಿದ್ಯುತ್ ದೀಪ ಸೇರಿದಂತೆ ಮೂಲಭೂತ ಸೌಕರ್ಯಗಳು ಇಲ್ಲ. ಶೌಚಾಲಯಗಳು ಇಲ್ಲ. 10ಅಡಿ ಜಾಗದಲ್ಲಿ ಮನೆಗಳಿವೆ. ಮನೆಗಳಲ್ಲಿ ಮೂರು ಜನ ಮೇಲೆ ವಾಸ ಮಾಡುವದಕ್ಕೆ ಆಗಲ್ಲ. ಒಟ್ಟು ಕುಟುಂಬದಲ್ಲಿ ಮನೆಯಲ್ಲಿ ಜಾಗ ಇಲ್ಲದ ಕಾರಣ ವಿಧಿ ಇಲ್ಲದೇ ಬೇರೆಕಡೆ ಬಾಡಿಗೆ ಮನೆ ಮಾಡಿಕೊಂಡು ವಾಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು…

Ramesh Babu

Journalist

Recent Posts

ವಿಜಯಪುರದ ಬಸವ ಕಲ್ಯಾಣ ಮಠದಲ್ಲಿ 38ನೇ ವರ್ಷದ ಕಡ್ಲೆಕಾಯಿ ಪರಿಷೆ

ವಿಜಯಪುರ(ದೇವನಹಳ್ಳಿ): ಇಂದಿನ ಮಕ್ಕಳಿಗೆ ಶಿಕ್ಷಣದಷ್ಟೇ, ಆಚಾರ-ವಿಚಾರ ಒಳಗೊಂಡ ಸಂಸ್ಕಾರವನ್ನು ನೀಡುವುದು ಅವಶ್ಯವಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ಪೋಷಕರು ತಮ್ಮ ಮಕ್ಕಳನ್ನು ಕರೆತರುವ…

9 minutes ago

ಸಾಸಲು ಹೋಬಳಿಯಲ್ಲಿ ಮಿತಿಮೀರಿದ ಕೃಷಿ ಬೋರ್ ವೆಲ್ ಕೇಬಲ್ ಕಳ್ಳರ ಹಾವಳಿ: ಒಂದೇ ದಿನ ಹಲವು ಕಡೆ ಕೇಬಲ್ ಕಟ್

ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯಲ್ಲಿ ಬೋರ್ ವೆಲ್ ಗಳ ವಿದ್ಯುತ್ ಕೇಬಲ್ ಕಳ್ಳರ ಹಾವಳಿ ಮಿತಿಮೀರಿದೆ. ಕಳೆದ ರಾತ್ರಿ ಹತ್ತಾರು…

3 hours ago

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬರೋಬ್ಬರಿ 14.22 ಕೋಟಿ ರೂ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ವಿದೇಶಗಳಿಂದ…

5 hours ago

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

20 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

22 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

23 hours ago