ಈ ದೇಶದಲ್ಲಿ ದಲಿತರು ಮೂರನೇ ರಾಜಕೀಯ ಶಕ್ತಿಯಾಗಿ ಬೆಳೆಯಬೇಕು ಎಂಬುದು ಗದ್ದರ್ ಅವರ ಕನಸಾಗಿತ್ತು, ಕಾರಣಾಂತರಗಳಿಂದ ಅದು ಸಾಧ್ಯವಾಗಲಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ ಮಾಜಿ ನಗರಸಭಾ ಸದಸ್ಯ ರಾಮಾಂಜಿನಪ್ಪ.
ನಗರದ ಪ್ರವಾಸಿ ಮಂದಿರದಲ್ಲಿ ಮಾನವ ಬಂಧುತ್ವ ವೇದಿಕೆ, ದಲಿತ ಮತ್ತು ಕನ್ನಡಪರ ಸಂಘಟನೆಗಳ ವತಿಯಿಂದ ನಡೆದ ಗದ್ದರ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಆಳುವ ವರ್ಗ ಇಲ್ಲಸಲ್ಲದ ಸಮಸ್ಯೆಗಳನ್ನು ಹುಟ್ಟು ಹಾಕುವ ಮೂಲಕ ಜನಪರ ಹೋರಾಟಗಳನ್ನು ಮತ್ತು ಜನಸಾಮಾನ್ಯರನ್ನು ದಿಕ್ಕು ತಪ್ಪಿಸುತ್ತಿವೆ ಎಂದು ಆರೋಪಿಸಿದರು.
ದಲಿತ ಸಂಘಟನೆಗಳು ಪ್ರಬಲವಾಗಿದ್ದ 70/80 ರ ದಶಕ, ಕ್ರಾಂತಿಕಾರಿ ಕವಿ ಗದ್ದರ್ ಅವರನ್ನು ದೊಡ್ಡಬಳ್ಳಾಪುರಕ್ಕೆ ಕರೆಸಬೇಕು ಎಂದು ಪ್ರಯತ್ನ ಮಾಡಿದ್ದೆವು, ಈ ಬಗ್ಗೆ ನಗರಿ ಬಾಬಯ್ಯ ಅವರ ಮೂಲಕ ಹೈದರಾಬಾದ್ ನಲ್ಲಿ ಗದ್ದರ್ ಮನೆಗೆ ಹೋಗಿದ್ವಿ ಅವರ ಮನೆ ಸರಳವಾಗಿದ್ದು, ಐದು ಛೇರ್ ಮಾತ್ರ ಇತ್ತು. ಗದ್ದರ್ ಅವರನ್ನು ದೊಡ್ಡಬಳ್ಳಾಪುರಕ್ಕೆ ಬರುವಂತೆ ಕರೆದೆವು ಆದರೆ, ಪೊಲೀಸರು ನಮಗೆ ಅನುಮತಿ ನೀಡಲಿಲ್ಲ, ಜೊತೆಗೆ ನಗರಿ ಬಾಬಯ್ಯ ಅವರನ್ನು ಬಂಧಿಸಿ 90 ದಿನ ಜೈಲಿನಲ್ಲಿ ಇಟ್ಟಿದ್ದರು. ಪೊಲೀಸರು ಅನುಮತಿ ನಿರಾಕರಿಸಿದ್ದಕ್ಕೆ ನಮ್ಮ ಪ್ರಯತ್ನ ನಿಲ್ಲಿಸಬೇಕಾಯಿತು ಎಂದು ನೆನಪು ಮಾಡಿಕೊಂಡರು.
ದೊಡ್ಡಬಳ್ಳಾಪುರಕ್ಕೂ ಗದ್ದರ್ ಅವರಿಗೂ ಅವಿನಾಭಾವ ಸಂಬಂಧ ಇತ್ತು ಏಕೆಂದರೆ ಇಲ್ಲಿ ಡಾ.ವೆಂಕಟರೆಡ್ಡಿ ಸೇರಿದಂತೆ ಹಲವಾರು ದಲಿತ ಮತ್ತು ಪ್ರಗತಿಪರ ಚಿಂತಕರು ಇದ್ದರು ಎಂದರು.
ಇಂದು ದೇಶದಲ್ಲಿ ದೌರ್ಜನ್ಯ ದಬ್ಬಾಳಿಕೆಗಳು ಹೆಚ್ಚಾಗಿದ್ದು ಇದನ್ನು ಪ್ರಶ್ನೆ ಮಾಡುವ ಜನಪರ ಹೋರಾಟಗಾರರಿಗೆ ದೇಶದ್ರೋಹಿ ಪಟ್ಟ ಕಟ್ಟುತ್ತಾರೆ. ಯುಎಪಿಎ ಕಾಯ್ದೆ ಮೂಲಕ ಕತ್ತಲ ಕೋಣೆಯಲ್ಲಿಡುತ್ತಾರೆ ಎಂದರು.
20/30 ವರ್ಷ ಅರಣ್ಯದಲ್ಲಿ ಇದ್ದು ಚಳುವಳಿಯ ಮೂಲಕ ಭೂ ಮಾಲಿಕರು ದಲಿತರನ್ನು ಕಂಡರೆ ಭಯಪಡುವ ಪರಿಸ್ಥಿತಿ ನಿರ್ಮಾಣ ಮಾಡಿದ್ದರು. ಅಂತಹ ಧೀಮಂತ ನಾಯಕ ನಮ್ಮೊಂದಿಗೆ ಇಲ್ಲ ಎಂಬುದು ನೋವಿನ ವಿಚಾರ ಎಂದರು.
ಮಾನವ ಬಂಧ್ವುತ್ವ ವೇದಿಕೆಯ ವೆಂಕಟೇಶ್ ಅವರು ಮಾತನಾಡಿ, ದಲಿತ ಚಳುವಳಿಗೆ ಭದ್ರ ಬೂನಾದಿ ಹಾಕಿಕೊಟ್ಟ ವಿಪ್ಲವ ಪುರುಷ ಗದ್ದರ್ ಅವರು ಪುರೋಹಿತಶಾಹಿ ಭೂ ಮಾಲಿಕರ ಬಳಿ ಇದ್ದ
ಸಾವಿರಾರು ಎಕರೆ ಭೂಮಿ ದಲಿತ ಹಿಂದುಳಿದವರಿಗೆ ಕೊಡಿಸುವುದರಲ್ಲಿ ಯಶಸ್ವಿಯಾದವರು.
ಕೆನರಾ ಬ್ಯಾಂಕ್ ಉದ್ಯೋಗಿಯಾಗಿದ್ದ ಅವರು ವಿದ್ಯಾರ್ಥಿ ಜೀವನದಲ್ಲೇ ರ್ಯಾಡಿಕಲ್ ಸ್ಟೂಡೆಂಟ್ ವಿಂಗ್ ಸಂಘಟನೆಯ ಮೂಲಕ ಹೊರಗೆ ಬಂದವರು ಎಂದರು.
ಈ ಸಂದರ್ಭದಲ್ಲಿ ಛಲವಾದಿ ಮಹಾಸಭಾ ತಾಲ್ಲೂಕು ಅಧ್ಯಕ್ಷ ಸಿ.ಗುರುರಾಜಪ್ಪ, ದಲಿತ ಮುಖಂಡರಾದ ಮುನಿಸುಬ್ಬಯ್ಯ, ಬಸವರಾಜು, ಕರೀಂ ಸೊಣ್ಣೇನಹಳ್ಳಿ ಮುನಿಯಪ್ಪ, ಕನ್ನಡ ಜಾಗೃತ ಪರಿಷತ್ತಿನ ಕಾರ್ಯದರ್ಶಿ ಡಿ.ಪಿ.ಆಂಜನೇಯ ಚಂದ್ರು ಉಪ್ಪಾರ, ಮಂಜುನಾಥ, ಬಿ.ನಯಾಜ್ ಖಾನ್ ಕೊಡಿಗೇಹಳ್ಳಿ ಮಧು, ರಾಜುಸಣ್ಣಕ್ಕಿ ಮುಂತಾದವರು ಉಪಸ್ಥಿತರಿದ್ದರು.
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…