ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ ಹೆಚ್ಚು. ಇದರಲ್ಲಿ ಎಸ್ಟಿ ಜನಾಂಗ ವಾಸವಿರುವ ಕಾಲೋನಿಯಲ್ಲಿ ಚರಂಡಿ ವ್ಯವಸ್ಥೆಯೇ ಇಲ್ಲ. ಇಲ್ಲಿ ಎಲ್ಲವೂ ರಸ್ತೆಯ ಮೇಲೆಯೇ ಹರಿಯುತ್ತದೆ. ಈ ಕಾಲೋನಿಯಲ್ಲಿ ಇದುವರೆಗೂ ಚರಂಡಿ ಮಾಡಲು ಅಧಿಕಾರಿಗಳು ಮನಸ್ಸೇ ಮಾಡಿಲ್ಲ.‌ ಬರೀ ಸುಂಕ ವಸೂಲಿಗೆ ಬಂದು ವಾಪಸ್ ಆಗುವ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಹಿಡಿ ಶಾಪ ಹಾಕುತ್ತಿದ್ದಾರೆ.

ಇನ್ನೂ, ಈ ಗ್ರಾಮ ತಾಲೂಕಿನ ಕೊನೆಯ ಪಂಚಾಯತಿ ಭಕ್ತರಹಳ್ಳಿಗೆ ಸೇರಿದ ಗ್ರಾಮವಾಗಿದೆ.‌ ಹಾಗಾಗಿ ಇಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಚರಂಡಿ ಇಲ್ಲದೆ ನೀರು ನಿಂತಲ್ಲೇ ನಿಂತು ಕೊಳೆತು ವಾಸನೆ ಬಂದಿದೆ. ರಾತ್ರಿ ಆದರೆ ಸಾಕು ಮನೆಯ ಮುಂದೆ ಕುಳಿತು ಊಟ ಮಾಡಲು ಆಗಲ್ಲ. ಜೊತೆಗೆ ರಾತ್ರಿ ವೇಳೆ‌ ವಯೋವೃದ್ದರು ರಸ್ತೆಯ ಮೇಲೆ‌ ಓಡಾಡಲು ಆಗಲ್ಲ. ಕೊಳಚೆ ನೀರಲ್ಲಿ ಕಾಲಿಟ್ಟು ಬೀಳಲಿದ್ದಾರೆ. ಇನ್ನು ಕೊಳಚೆ ನೀರಿಂದ ಸೊಳ್ಳೆ ಹಾಗೂ ಹಾವು, ಚೇಳು ಕಾಟ ಹೆಚ್ಚಾಗಿದ್ದು, ಸಣ್ಣ ಸಣ್ಣ ಮಕ್ಕಳಿಗೆ ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿದ್ದಾರೆ. ಮಳೆಗಾಲ ಬಂದಾಗ ಕೊಳಚೆ ನೀರು ನೇರವಾಗಿ ಮನೆಗಳಿಗೆ ನುಗ್ಗುತ್ತವೆ.. ಹಾಗಾಗಿ ಪಂಚಾಯತಿ ಅಧಿಕಾರಿಗಳು ರಸ್ತೆ ಮಾಡಿಕೊಡಬೇಕೆಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಅಲ್ಲದೆ ಪಂಚಾಯತಿಯಲ್ಲಿ ಸಂಗ್ರಹ ಆಗುವ ತೆರಿಗೆ ಹಣದಲ್ಲಿ ದಲಿತ ಕಾಲೋನಿ ಅಭಿವೃದ್ಧಿಗೆ ಎಂದೆ ಇಂತಿಷ್ಟು ಹಣ ಎಂದು ತೆಗೆದು ಅಭಿವೃದ್ಧಿ ಮಾಡುತ್ತಾರೆ. ಆದರೆ ಇಲ್ಲಿನ ಅಧಿಕಾರಿಗಳು ಈ ಸಮಸ್ಯೆಗೆ ಕಿವಿ ಕೊಡದೆ ಇರುವುದು ವಿಪರ್ಯಾಸ. ಇದಕ್ಕೆ ಕಾಲೋನಿ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ..

ಒಟ್ಟಾರೆ, ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನ ಒದಗಿಸಬೇಕಾದ ಅಧಿಕಾರಿಗಳೇ ನಿರ್ಲಕ್ಷ್ಯ ವಹಿಸುತ್ತಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಮೊದಲ ಬಾರಿಗೆ ಶಾಸಕರಾಗಿರುವ ಧೀರಜ್ ಮುನಿರಾಜ್ ವಿಶೇಷ ಅನುಧಾನದಲ್ಲಿ ಈ ಗ್ರಾಮಕ್ಕೆ ಚರಂಡಿ ವ್ಯವಸ್ಥೆ ‌ಕಲ್ಪಿಸಿಕೊಡುತ್ತಾರಾ ಕಾದು ನೋಡಬೇಕಿದೆ.

Ramesh Babu

Journalist

Recent Posts

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

8 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

9 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

9 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

12 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

23 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

1 day ago