ದಲಿತರ ಕಾಲೋನಿಗಿಲ್ಲ ಚರಂಡಿ ಭಾಗ್ಯ: ರಸ್ತೆ‌ ಮೇಲೆಯೇ ಹರಿಯುವ ಚರಂಡಿ ನೀರು: ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಹಿಡಿ ಶಾಪ

ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ‌ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ ಹೆಚ್ಚು. ಇದರಲ್ಲಿ ಎಸ್ಟಿ ಜನಾಂಗ ವಾಸವಿರುವ ಕಾಲೋನಿಯಲ್ಲಿ ಚರಂಡಿ ವ್ಯವಸ್ಥೆಯೇ ಇಲ್ಲ. ಇಲ್ಲಿ ಎಲ್ಲವೂ ರಸ್ತೆಯ ಮೇಲೆಯೇ ಹರಿಯುತ್ತದೆ. ಈ ಕಾಲೋನಿಯಲ್ಲಿ ಇದುವರೆಗೂ ಚರಂಡಿ ಮಾಡಲು ಅಧಿಕಾರಿಗಳು ಮನಸ್ಸೇ ಮಾಡಿಲ್ಲ.‌ ಬರೀ ಸುಂಕ ವಸೂಲಿಗೆ ಬಂದು ವಾಪಸ್ ಆಗುವ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಹಿಡಿ ಶಾಪ ಹಾಕುತ್ತಿದ್ದಾರೆ.

ಇನ್ನೂ, ಈ ಗ್ರಾಮ ತಾಲೂಕಿನ ಕೊನೆಯ ಪಂಚಾಯತಿ ಭಕ್ತರಹಳ್ಳಿಗೆ ಸೇರಿದ ಗ್ರಾಮವಾಗಿದೆ.‌ ಹಾಗಾಗಿ ಇಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ಚರಂಡಿ ಇಲ್ಲದೆ ನೀರು ನಿಂತಲ್ಲೇ ನಿಂತು ಕೊಳೆತು ವಾಸನೆ ಬಂದಿದೆ. ರಾತ್ರಿ ಆದರೆ ಸಾಕು ಮನೆಯ ಮುಂದೆ ಕುಳಿತು ಊಟ ಮಾಡಲು ಆಗಲ್ಲ. ಜೊತೆಗೆ ರಾತ್ರಿ ವೇಳೆ‌ ವಯೋವೃದ್ದರು ರಸ್ತೆಯ ಮೇಲೆ‌ ಓಡಾಡಲು ಆಗಲ್ಲ. ಕೊಳಚೆ ನೀರಲ್ಲಿ ಕಾಲಿಟ್ಟು ಬೀಳಲಿದ್ದಾರೆ. ಇನ್ನು ಕೊಳಚೆ ನೀರಿಂದ ಸೊಳ್ಳೆ ಹಾಗೂ ಹಾವು, ಚೇಳು ಕಾಟ ಹೆಚ್ಚಾಗಿದ್ದು, ಸಣ್ಣ ಸಣ್ಣ ಮಕ್ಕಳಿಗೆ ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿದ್ದಾರೆ. ಮಳೆಗಾಲ ಬಂದಾಗ ಕೊಳಚೆ ನೀರು ನೇರವಾಗಿ ಮನೆಗಳಿಗೆ ನುಗ್ಗುತ್ತವೆ.. ಹಾಗಾಗಿ ಪಂಚಾಯತಿ ಅಧಿಕಾರಿಗಳು ರಸ್ತೆ ಮಾಡಿಕೊಡಬೇಕೆಂದು ಗ್ರಾಮಸ್ಥರು ಒತ್ತಾಯ ಮಾಡಿದ್ದಾರೆ. ಅಲ್ಲದೆ ಪಂಚಾಯತಿಯಲ್ಲಿ ಸಂಗ್ರಹ ಆಗುವ ತೆರಿಗೆ ಹಣದಲ್ಲಿ ದಲಿತ ಕಾಲೋನಿ ಅಭಿವೃದ್ಧಿಗೆ ಎಂದೆ ಇಂತಿಷ್ಟು ಹಣ ಎಂದು ತೆಗೆದು ಅಭಿವೃದ್ಧಿ ಮಾಡುತ್ತಾರೆ. ಆದರೆ ಇಲ್ಲಿನ ಅಧಿಕಾರಿಗಳು ಈ ಸಮಸ್ಯೆಗೆ ಕಿವಿ ಕೊಡದೆ ಇರುವುದು ವಿಪರ್ಯಾಸ. ಇದಕ್ಕೆ ಕಾಲೋನಿ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ..

ಒಟ್ಟಾರೆ, ಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನ ಒದಗಿಸಬೇಕಾದ ಅಧಿಕಾರಿಗಳೇ ನಿರ್ಲಕ್ಷ್ಯ ವಹಿಸುತ್ತಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಮೊದಲ ಬಾರಿಗೆ ಶಾಸಕರಾಗಿರುವ ಧೀರಜ್ ಮುನಿರಾಜ್ ವಿಶೇಷ ಅನುಧಾನದಲ್ಲಿ ಈ ಗ್ರಾಮಕ್ಕೆ ಚರಂಡಿ ವ್ಯವಸ್ಥೆ ‌ಕಲ್ಪಿಸಿಕೊಡುತ್ತಾರಾ ಕಾದು ನೋಡಬೇಕಿದೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

7 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

12 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

1 day ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

1 day ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago