ಪಿತ್ರಾರ್ಜಿತವಾಗಿ ಬಂದ ಎರಡು ಎಕರೆ ಸಾಗುವಳಿ ಭೂಮಿಗೆ ಬೆಂಗಳೂರಿನ ಬಲಾಢ್ಯ ವ್ಯಕ್ತಿಯೊಬ್ಬರು ಪೊಲೀಸ್ ರಕ್ಷಣೆಯಲ್ಲಿ ಕಾಂಪೌಂಡ್ ನಿರ್ಮಿಸಿ ಕಬಳಿಸುವ ಯತ್ನ ನಡೆಸಿದ್ದಾರೆ ಎಂದು ಆರೋಪಿಸಿ ದಲಿತ ಕುಟುಂಬವೊಂದು ಜಮೀನಿನಲ್ಲೇ ಪ್ರತಿಭಟನೆ ನಡೆಸಿತು.
ತಾಲೂಕಿನ ಕಸಬಾ ಹೋಬಳಿಯ ಮಜರಾಹೊಸಹಳ್ಳಿ ಗ್ರಾಮದ ಸರ್ವೇ ನಂಬರ್ 58ರಲ್ಲಿ ನರಸಿಂಹಯ್ಯ ಎಂಬುವವರು 1970-71 ರಲ್ಲಿ ಬಹಿರಂಗ ಹರಾಜು ಮೂಲಕ ಸರ್ಕಾರಕ್ಕೆ ಕಿಮ್ಮತ್ತು ಕಟ್ಟಿ 2 ಎಕರೆ ಜಮೀನು ಕ್ರಯ ಮಾಡಿಕೊಂಡಿದ್ದರು. ತಾಲೂಕು ಆಡಳಿತ ಸಾಗುವಳಿ ಚೀಟಿ, ಕೈ ಬರಹದ ಪಹಣಿ, ಮ್ಯುಟೇಷನ್ ಕೂಡ ನೀಡಿತ್ತು. ಅಂದಿನಿಂದ ನರಸಿಂಹಯ್ಯನವರ ಮಕ್ಕಳು ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡು ಬರುತ್ತಿದ್ದರು.
ಕಾಲಕಳೆದಂತೆ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ವಿಸ್ತರಣೆಯಾಗಿ ಮಜರಾ ಹೊಸಹಳ್ಳಿಯಲ್ಲೂ ಕೈಗಾರಿಕೆಗಳು ತಲೆ ಎತ್ತಿದವು. ನರಸಿಂಹಯ್ಯನವರ ಕುಟುಂಬ ತಮ್ಮ ಪಾಲಿನ ಜಮೀನಿನಲ್ಲಿ ರಾಗಿ, ಜೋಳ, ತೊಗರಿ ಬೆಳೆ ಬೆಳೆದು ಜೀವನ ಸಾಗಿಸುತ್ತಿತ್ತು. ಕಂಪ್ಯೂಟರ್ ಪಹಣಿ ಬಂದಾಗ ನರಸಿಂಹಯ್ಯ ಅವರ ಸರ್ವೇ ನಂಬರ್ ಅಪ್ ಡೇಟ್ ಆಗಿಲ್ಲ. ಈಗ ಕಂಪ್ಯೂಟರ್ ಪಹಣಿಯಲ್ಲಿ ನರಸಿಂಹಯ್ಯ ಅವರ ಜಮೀನನ್ನು ಗೋಮಾಳ ಎಂದು ತೋರಿಸಲಾಗಿದೆ.
ಕಂಪ್ಯೂಟರ್ ಪಹಣಿಯಲ್ಲಿ ಸರ್ಕಾರಿ ಗೋಮಾಳ ಎಂದು ತೋರಿಸುತ್ತಿರುವುದನ್ನು ಗಮನಿಸಿದ ಕೆಲ ಭೂಮಾಫಿಯಾದವರು ಹಾಗೂ ಬೆಂಗಳೂರಿನ ಕುಶಾಲ್ ಕುಮಾರ್ ಜೈನ್ ಎಂಬುವರು ರಾತ್ರೋರಾತ್ರಿ ಜಮೀನಿನಲ್ಲಿ ನಿರ್ಮಿಸಿದ್ದ ಶೆಡ್ ತೆರವುಮಾಡಿ ಮಣ್ಣು ಹೊಡೆಸುತ್ತಿದ್ದಾರೆ. ಪ್ರಶ್ನಿಸಲು ಹೋದ ಭೂಮಾಲೀಕರಿಗೆ ಪೊಲೀಸರನ್ನು ಕಳುಹಿಸಿ ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಕುಶಾಲ್ ಕುಮಾರ್ ಜೈನ್ ಎಂಬುವರು ಕೈಗಾರಿಕಾ ಉದ್ದೇಶಕ್ಕಾಗಿ ನಮ್ಮ ಜಮೀನು ಸುತ್ತಲಿನ ಭೂಮಿ ಖರೀದಿಸಿ, ಕಾಂಪೌಂಡ್ ನಿರ್ಮಿಸುತ್ತಿದ್ದರು. ಅವರ ಜಾಗದಲ್ಲಿ ಅವರ ಕಾಂಪೌಂಡ್ ಹಾಕಿಕೊಳ್ಳುತ್ತಿದ್ದಾರೆ ಎಂದು ನಾವು ಸುಮ್ಮನಿದ್ದೆವು. ಆದರೆ, ಕಳೆದ ಮೂರು ದಿನಗಳ ಹಿಂದೆ ಏಕಾಏಕಿ ಪೊಲೀಸರನ್ನು ಕರೆಸಿ, ಜೆಸಿಬಿಗಳ ಮೂಲಕ ಸರ್ವೇ ನಂಬರ್ ಜಾಗವನ್ನು ಸಮತಟ್ಟು ಮಾಡಲು ಬಂದರು. ಇದು ನಮಗೆ ಸೇರಿದ ಜಾಗ ಎಂದು ದಾಖಲೆ ತೋರಿಸಿದರೂ ಕ್ಯಾರೆ ಎನ್ನುತ್ತಿಲ್ಲ. ಜೆಸಿಬಿಗಳನ್ನು ತಡೆಯಲು ಮುಂದಾದಾಗ ಪೊಲೀಸರನ್ನು ಕರೆಸಿ ದೌರ್ಜನ್ಯದಿಂದ, ಬಲವಂತವಾಗಿ ಕಾಂಪೌಂಡ್ ನಿರ್ಮಿಸಲು ಯತ್ನಿಸಿದ್ದಾರೆ ಎಂದು ನರಸಿಂಹಯ್ಯ ಅವರ ಪುತ್ರ ಮಂಜುನಾಥ್ ದೂರಿದರು.
ಜಮೀನಿನಲ್ಲೇ ಧರಣಿ- ಆಕ್ರೋಶ
ಬೆಂಗಳೂರಿನ ಬಲಾಢ್ಯ ವ್ಯಕ್ತಿಗೆ ಸ್ಥಳೀಯರಾದ ಅಶೋಕ್ ಎಂಬುವರು ಕುಮ್ಮಕ್ಕು ನೀಡುತ್ತಿದ್ದು, ಎಷ್ಟೇ ವಿರೋಧಿಸಿದರೂ ಕಾಂಪೌಂಡ್ ನಿರ್ಮಿಸುತ್ತಿದ್ದಾರೆ. ನಮ್ಮನ್ನು ಜೆಸಿಬಿಯಲ್ಲೇ ಹೂತು ಹಾಕಿದರೂ ಜಾಗ ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಇಡೀ ಕುಟುಂಬ ಸ್ಥಳದಲ್ಲೇ ಧರಣಿ ನಡೆಸಿತು.
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…