ದಲಿತರ ಸಾಗುವಳಿ ಭೂಮಿ ಮೇಲೆ ಭೂಮಾಫಿಯಾ ಕಣ್ಣು: ಪಿತ್ರಾರ್ಜಿತ ಆಸ್ತಿ ಉಳಿಸಿಕೊಳ್ಳಲು ದಲಿತ ಕುಟುಂಬ ಧರಣಿ

ಪಿತ್ರಾರ್ಜಿತವಾಗಿ ಬಂದ ಎರಡು ಎಕರೆ ಸಾಗುವಳಿ ಭೂಮಿಗೆ ಬೆಂಗಳೂರಿನ ಬಲಾಢ್ಯ ವ್ಯಕ್ತಿಯೊಬ್ಬರು ಪೊಲೀಸ್ ರಕ್ಷಣೆಯಲ್ಲಿ ಕಾಂಪೌಂಡ್ ನಿರ್ಮಿಸಿ ಕಬಳಿಸುವ ಯತ್ನ ನಡೆಸಿದ್ದಾರೆ ಎಂದು ಆರೋಪಿಸಿ ದಲಿತ ಕುಟುಂಬವೊಂದು ಜಮೀನಿನಲ್ಲೇ ಪ್ರತಿಭಟನೆ ನಡೆಸಿತು.

ತಾಲೂಕಿನ ಕಸಬಾ ಹೋಬಳಿ‌ಯ ಮಜರಾಹೊಸಹಳ್ಳಿ ಗ್ರಾಮದ ಸರ್ವೇ ನಂಬರ್ 58ರಲ್ಲಿ ನರಸಿಂಹಯ್ಯ ಎಂಬುವವರು 1970-71 ರಲ್ಲಿ ಬಹಿರಂಗ ಹರಾಜು ಮೂಲಕ ಸರ್ಕಾರಕ್ಕೆ ಕಿಮ್ಮತ್ತು ಕಟ್ಟಿ 2 ಎಕರೆ ಜಮೀನು ಕ್ರಯ ಮಾಡಿಕೊಂಡಿದ್ದರು. ತಾಲೂಕು ಆಡಳಿತ ಸಾಗುವಳಿ ಚೀಟಿ, ಕೈ ಬರಹದ ಪಹಣಿ, ಮ್ಯುಟೇಷನ್ ಕೂಡ ನೀಡಿತ್ತು. ಅಂದಿನಿಂದ ನರಸಿಂಹಯ್ಯನವರ ಮಕ್ಕಳು ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡು ಬರುತ್ತಿದ್ದರು.

ಕಾಲಕಳೆದಂತೆ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ವಿಸ್ತರಣೆಯಾಗಿ ಮಜರಾ ಹೊಸಹಳ್ಳಿಯಲ್ಲೂ  ಕೈಗಾರಿಕೆಗಳು ತಲೆ ಎತ್ತಿದವು. ನರಸಿಂಹಯ್ಯನವರ ಕುಟುಂಬ ತಮ್ಮ ಪಾಲಿನ ಜಮೀನಿನಲ್ಲಿ ರಾಗಿ, ಜೋಳ, ತೊಗರಿ ಬೆಳೆ ಬೆಳೆದು ಜೀವನ ಸಾಗಿಸುತ್ತಿತ್ತು. ಕಂಪ್ಯೂಟರ್ ಪಹಣಿ ಬಂದಾಗ ನರಸಿಂಹಯ್ಯ ಅವರ ಸರ್ವೇ ನಂಬರ್ ಅಪ್ ಡೇಟ್ ಆಗಿಲ್ಲ. ಈಗ ಕಂಪ್ಯೂಟರ್ ಪಹಣಿಯಲ್ಲಿ ನರಸಿಂಹಯ್ಯ ಅವರ ಜಮೀನನ್ನು ಗೋಮಾಳ ಎಂದು ತೋರಿಸಲಾಗಿದೆ.

ದಲಿತರ ಭೂಮಿ ಮೇಲೆ ಭೂಮಾಫಿಯಾ ಕಣ್ಣು

ಕಂಪ್ಯೂಟರ್ ಪಹಣಿಯಲ್ಲಿ ಸರ್ಕಾರಿ ಗೋಮಾಳ ಎಂದು ತೋರಿಸುತ್ತಿರುವುದನ್ನು ಗಮನಿಸಿದ ಕೆಲ ಭೂಮಾಫಿಯಾದವರು ಹಾಗೂ ಬೆಂಗಳೂರಿನ ಕುಶಾಲ್ ಕುಮಾರ್ ಜೈನ್ ಎಂಬುವರು ರಾತ್ರೋರಾತ್ರಿ ಜಮೀನಿನಲ್ಲಿ ನಿರ್ಮಿಸಿದ್ದ ಶೆಡ್ ತೆರವು‌ಮಾಡಿ ಮಣ್ಣು ಹೊಡೆಸುತ್ತಿದ್ದಾರೆ. ಪ್ರಶ್ನಿಸಲು ಹೋದ ಭೂಮಾಲೀಕರಿಗೆ ಪೊಲೀಸರನ್ನು ಕಳುಹಿಸಿ ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕುಶಾಲ್ ಕುಮಾರ್ ಜೈನ್ ಎಂಬುವರು ಕೈಗಾರಿಕಾ ಉದ್ದೇಶಕ್ಕಾಗಿ ನಮ್ಮ ಜಮೀನು ಸುತ್ತಲಿನ ಭೂಮಿ ಖರೀದಿಸಿ, ಕಾಂಪೌಂಡ್ ನಿರ್ಮಿಸುತ್ತಿದ್ದರು. ಅವರ ಜಾಗದಲ್ಲಿ ಅವರ ಕಾಂಪೌಂಡ್ ಹಾಕಿಕೊಳ್ಳುತ್ತಿದ್ದಾರೆ ಎಂದು ನಾವು ಸುಮ್ಮನಿದ್ದೆವು. ಆದರೆ, ಕಳೆದ ಮೂರು ದಿನಗಳ ಹಿಂದೆ ಏಕಾಏಕಿ ಪೊಲೀಸರನ್ನು ಕರೆಸಿ, ಜೆಸಿಬಿಗಳ ಮೂಲಕ ಸರ್ವೇ ನಂಬರ್ ಜಾಗವನ್ನು ಸಮತಟ್ಟು ಮಾಡಲು ಬಂದರು. ಇದು ನಮಗೆ ಸೇರಿದ ಜಾಗ ಎಂದು ದಾಖಲೆ ತೋರಿಸಿದರೂ ಕ್ಯಾರೆ ಎನ್ನುತ್ತಿಲ್ಲ. ಜೆಸಿಬಿಗಳನ್ನು ತಡೆಯಲು ಮುಂದಾದಾಗ ಪೊಲೀಸರನ್ನು ಕರೆಸಿ ದೌರ್ಜನ್ಯದಿಂದ, ಬಲವಂತವಾಗಿ ಕಾಂಪೌಂಡ್ ನಿರ್ಮಿಸಲು ಯತ್ನಿಸಿದ್ದಾರೆ ಎಂದು ನರಸಿಂಹಯ್ಯ ಅವರ ಪುತ್ರ ಮಂಜುನಾಥ್ ದೂರಿದರು.

ನರಸಿಂಹಯ್ಯ ಅವರ ಪತ್ನಿ‌ ಮುನಿಯಮ್ಮ ಮಾತನಾಡಿ, ನಾವು 50 ವರ್ಷದಿಂದ ಜಮೀನಿ ಸ್ವಾಧೀನದಲ್ಲಿದ್ದೇವೆ.  ಪೊಲೀಸರು ಬಂದು ನಮಗೆ ಹೀನಾಮಾನ ಬೈದು ಖಾಲಿ ಮಾಡುವಂತೆ ಬೆದರಿಕೆ ಹಾಕುತ್ತಿದ್ದಾರೆ. ಇಷ್ಟು ವರ್ಷ ದುಡಿದು ತಿಂದಿದ್ದು, ಸಾಕು. ಜಾಗ ಖಾಲಿ ಮಾಡಿ ಎಂದು ಬೆದರಿಕೆ ಹಾಕಿದರು. ಪೊಲೀಸರ ದೌರ್ಜನ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿದ ನಮ್ಮ ಸೊಸೆಯನ್ನು ಎಳೆದು, ಮೊಬೈಲ್ ಕಸಿದರು. ವಯಸ್ಸಾದ ನನ್ನನ್ನೂ ನೂಕಿ ಗಾಯಗೊಳಿಸಿದರು ಎಂದು ದೂರಿದರು.

ಜಮೀನಿನಲ್ಲೇ ಧರಣಿ- ಆಕ್ರೋಶ

ಬೆಂಗಳೂರಿನ ಬಲಾಢ್ಯ ವ್ಯಕ್ತಿಗೆ ಸ್ಥಳೀಯರಾದ ಅಶೋಕ್ ಎಂಬುವರು ಕುಮ್ಮಕ್ಕು ನೀಡುತ್ತಿದ್ದು, ಎಷ್ಟೇ ವಿರೋಧಿಸಿದರೂ ಕಾಂಪೌಂಡ್ ನಿರ್ಮಿಸುತ್ತಿದ್ದಾರೆ. ನಮ್ಮನ್ನು ಜೆಸಿಬಿಯಲ್ಲೇ ಹೂತು ಹಾಕಿದರೂ ಜಾಗ ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಇಡೀ ಕುಟುಂಬ ಸ್ಥಳದಲ್ಲೇ ಧರಣಿ ನಡೆಸಿತು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

12 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

13 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

19 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

20 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

1 day ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

2 days ago