ದಲಿತರ ಸಾಗುವಳಿ ಭೂಮಿ ಮೇಲೆ ಭೂಮಾಫಿಯಾ ಕಣ್ಣು: ಪಿತ್ರಾರ್ಜಿತ ಆಸ್ತಿ ಉಳಿಸಿಕೊಳ್ಳಲು ದಲಿತ ಕುಟುಂಬ ಧರಣಿ

ಪಿತ್ರಾರ್ಜಿತವಾಗಿ ಬಂದ ಎರಡು ಎಕರೆ ಸಾಗುವಳಿ ಭೂಮಿಗೆ ಬೆಂಗಳೂರಿನ ಬಲಾಢ್ಯ ವ್ಯಕ್ತಿಯೊಬ್ಬರು ಪೊಲೀಸ್ ರಕ್ಷಣೆಯಲ್ಲಿ ಕಾಂಪೌಂಡ್ ನಿರ್ಮಿಸಿ ಕಬಳಿಸುವ ಯತ್ನ ನಡೆಸಿದ್ದಾರೆ ಎಂದು ಆರೋಪಿಸಿ ದಲಿತ ಕುಟುಂಬವೊಂದು ಜಮೀನಿನಲ್ಲೇ ಪ್ರತಿಭಟನೆ ನಡೆಸಿತು.

ತಾಲೂಕಿನ ಕಸಬಾ ಹೋಬಳಿ‌ಯ ಮಜರಾಹೊಸಹಳ್ಳಿ ಗ್ರಾಮದ ಸರ್ವೇ ನಂಬರ್ 58ರಲ್ಲಿ ನರಸಿಂಹಯ್ಯ ಎಂಬುವವರು 1970-71 ರಲ್ಲಿ ಬಹಿರಂಗ ಹರಾಜು ಮೂಲಕ ಸರ್ಕಾರಕ್ಕೆ ಕಿಮ್ಮತ್ತು ಕಟ್ಟಿ 2 ಎಕರೆ ಜಮೀನು ಕ್ರಯ ಮಾಡಿಕೊಂಡಿದ್ದರು. ತಾಲೂಕು ಆಡಳಿತ ಸಾಗುವಳಿ ಚೀಟಿ, ಕೈ ಬರಹದ ಪಹಣಿ, ಮ್ಯುಟೇಷನ್ ಕೂಡ ನೀಡಿತ್ತು. ಅಂದಿನಿಂದ ನರಸಿಂಹಯ್ಯನವರ ಮಕ್ಕಳು ಜಮೀನಿನಲ್ಲಿ ಕೃಷಿ ಕೆಲಸ ಮಾಡಿಕೊಂಡು ಬರುತ್ತಿದ್ದರು.

ಕಾಲಕಳೆದಂತೆ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ವಿಸ್ತರಣೆಯಾಗಿ ಮಜರಾ ಹೊಸಹಳ್ಳಿಯಲ್ಲೂ  ಕೈಗಾರಿಕೆಗಳು ತಲೆ ಎತ್ತಿದವು. ನರಸಿಂಹಯ್ಯನವರ ಕುಟುಂಬ ತಮ್ಮ ಪಾಲಿನ ಜಮೀನಿನಲ್ಲಿ ರಾಗಿ, ಜೋಳ, ತೊಗರಿ ಬೆಳೆ ಬೆಳೆದು ಜೀವನ ಸಾಗಿಸುತ್ತಿತ್ತು. ಕಂಪ್ಯೂಟರ್ ಪಹಣಿ ಬಂದಾಗ ನರಸಿಂಹಯ್ಯ ಅವರ ಸರ್ವೇ ನಂಬರ್ ಅಪ್ ಡೇಟ್ ಆಗಿಲ್ಲ. ಈಗ ಕಂಪ್ಯೂಟರ್ ಪಹಣಿಯಲ್ಲಿ ನರಸಿಂಹಯ್ಯ ಅವರ ಜಮೀನನ್ನು ಗೋಮಾಳ ಎಂದು ತೋರಿಸಲಾಗಿದೆ.

ದಲಿತರ ಭೂಮಿ ಮೇಲೆ ಭೂಮಾಫಿಯಾ ಕಣ್ಣು

ಕಂಪ್ಯೂಟರ್ ಪಹಣಿಯಲ್ಲಿ ಸರ್ಕಾರಿ ಗೋಮಾಳ ಎಂದು ತೋರಿಸುತ್ತಿರುವುದನ್ನು ಗಮನಿಸಿದ ಕೆಲ ಭೂಮಾಫಿಯಾದವರು ಹಾಗೂ ಬೆಂಗಳೂರಿನ ಕುಶಾಲ್ ಕುಮಾರ್ ಜೈನ್ ಎಂಬುವರು ರಾತ್ರೋರಾತ್ರಿ ಜಮೀನಿನಲ್ಲಿ ನಿರ್ಮಿಸಿದ್ದ ಶೆಡ್ ತೆರವು‌ಮಾಡಿ ಮಣ್ಣು ಹೊಡೆಸುತ್ತಿದ್ದಾರೆ. ಪ್ರಶ್ನಿಸಲು ಹೋದ ಭೂಮಾಲೀಕರಿಗೆ ಪೊಲೀಸರನ್ನು ಕಳುಹಿಸಿ ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಕುಶಾಲ್ ಕುಮಾರ್ ಜೈನ್ ಎಂಬುವರು ಕೈಗಾರಿಕಾ ಉದ್ದೇಶಕ್ಕಾಗಿ ನಮ್ಮ ಜಮೀನು ಸುತ್ತಲಿನ ಭೂಮಿ ಖರೀದಿಸಿ, ಕಾಂಪೌಂಡ್ ನಿರ್ಮಿಸುತ್ತಿದ್ದರು. ಅವರ ಜಾಗದಲ್ಲಿ ಅವರ ಕಾಂಪೌಂಡ್ ಹಾಕಿಕೊಳ್ಳುತ್ತಿದ್ದಾರೆ ಎಂದು ನಾವು ಸುಮ್ಮನಿದ್ದೆವು. ಆದರೆ, ಕಳೆದ ಮೂರು ದಿನಗಳ ಹಿಂದೆ ಏಕಾಏಕಿ ಪೊಲೀಸರನ್ನು ಕರೆಸಿ, ಜೆಸಿಬಿಗಳ ಮೂಲಕ ಸರ್ವೇ ನಂಬರ್ ಜಾಗವನ್ನು ಸಮತಟ್ಟು ಮಾಡಲು ಬಂದರು. ಇದು ನಮಗೆ ಸೇರಿದ ಜಾಗ ಎಂದು ದಾಖಲೆ ತೋರಿಸಿದರೂ ಕ್ಯಾರೆ ಎನ್ನುತ್ತಿಲ್ಲ. ಜೆಸಿಬಿಗಳನ್ನು ತಡೆಯಲು ಮುಂದಾದಾಗ ಪೊಲೀಸರನ್ನು ಕರೆಸಿ ದೌರ್ಜನ್ಯದಿಂದ, ಬಲವಂತವಾಗಿ ಕಾಂಪೌಂಡ್ ನಿರ್ಮಿಸಲು ಯತ್ನಿಸಿದ್ದಾರೆ ಎಂದು ನರಸಿಂಹಯ್ಯ ಅವರ ಪುತ್ರ ಮಂಜುನಾಥ್ ದೂರಿದರು.

ನರಸಿಂಹಯ್ಯ ಅವರ ಪತ್ನಿ‌ ಮುನಿಯಮ್ಮ ಮಾತನಾಡಿ, ನಾವು 50 ವರ್ಷದಿಂದ ಜಮೀನಿ ಸ್ವಾಧೀನದಲ್ಲಿದ್ದೇವೆ.  ಪೊಲೀಸರು ಬಂದು ನಮಗೆ ಹೀನಾಮಾನ ಬೈದು ಖಾಲಿ ಮಾಡುವಂತೆ ಬೆದರಿಕೆ ಹಾಕುತ್ತಿದ್ದಾರೆ. ಇಷ್ಟು ವರ್ಷ ದುಡಿದು ತಿಂದಿದ್ದು, ಸಾಕು. ಜಾಗ ಖಾಲಿ ಮಾಡಿ ಎಂದು ಬೆದರಿಕೆ ಹಾಕಿದರು. ಪೊಲೀಸರ ದೌರ್ಜನ್ಯವನ್ನು ಮೊಬೈಲ್ ನಲ್ಲಿ ಸೆರೆಹಿಡಿದ ನಮ್ಮ ಸೊಸೆಯನ್ನು ಎಳೆದು, ಮೊಬೈಲ್ ಕಸಿದರು. ವಯಸ್ಸಾದ ನನ್ನನ್ನೂ ನೂಕಿ ಗಾಯಗೊಳಿಸಿದರು ಎಂದು ದೂರಿದರು.

ಜಮೀನಿನಲ್ಲೇ ಧರಣಿ- ಆಕ್ರೋಶ

ಬೆಂಗಳೂರಿನ ಬಲಾಢ್ಯ ವ್ಯಕ್ತಿಗೆ ಸ್ಥಳೀಯರಾದ ಅಶೋಕ್ ಎಂಬುವರು ಕುಮ್ಮಕ್ಕು ನೀಡುತ್ತಿದ್ದು, ಎಷ್ಟೇ ವಿರೋಧಿಸಿದರೂ ಕಾಂಪೌಂಡ್ ನಿರ್ಮಿಸುತ್ತಿದ್ದಾರೆ. ನಮ್ಮನ್ನು ಜೆಸಿಬಿಯಲ್ಲೇ ಹೂತು ಹಾಕಿದರೂ ಜಾಗ ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಇಡೀ ಕುಟುಂಬ ಸ್ಥಳದಲ್ಲೇ ಧರಣಿ ನಡೆಸಿತು.

Ramesh Babu

Journalist

Recent Posts

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

2 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

9 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

10 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

23 hours ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

23 hours ago

ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…

23 hours ago